• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ್ರೋಹಿಗಳಿಂದ ಮೈಸೂರು ಪೊಲೀಸ್ ವೆಬ್ ಸೈಟ್ ಹ್ಯಾಕ್, ರಾಷ್ಟ್ರ ಧ್ವಜಕ್ಕೆ ಅಪಮಾನ

TNN Correspondent Posted On April 2, 2018
0


0
Shares
  • Share On Facebook
  • Tweet It

ಮೈಸೂರು: ಭಾರತದಲ್ಲಿ ದೇಶದ್ರೋಹಿಗಳ ಕಿರಿಕಿರಿ ಮುಂದುವರಿದಿದ್ದು, ಸದಾ ಭಾರತದೊಂದಿಗೆ ಸೆಣಸಾಡುವ, ದೇಶದ ಅನ್ನವೇ ತಿಂದು ದ್ರೋಹ ಬಗೆಯುವ ಕೆಲವು ವಿಕೃತ ಮನಸ್ಸಿನವರು ಕುತಂತ್ರದ ಕಾರ್ಯಗಳು ಸದಾ ಚಾಲ್ತಿಯಲ್ಲಿವೆ. ಇಷ್ಟು ದಿನ ನೇರವಾಗಿ ದೇಶದ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದ ಕೆಲವು ಕೊಳಕು ಮನಸ್ಸುಗಳು ಇದೀಗ ಅಂತರ್ಜಾಲದಲ್ಲಿ ದೇಶವನ್ನು, ರಾಷ್ಟ್ರಧ್ವಜವನ್ನು ಅವಮಾನಿಸುವ ಕಾರ್ಯದಲ್ಲಿ ನಿರತವಾಗಿವೆ. ಅದಕ್ಕೆ ಸಾಕ್ಷಿ ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸ್ ಘಟಕದ ವೆಬ್ ಸೈಟ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ರಾಷ್ಟ್ರಧ್ವಜವನ್ನು ಅವಮಾನ ಮಾಡುವಂತ ಪೋಸ್ಟ್ ಮಾಡಿದ್ದಾರೆ.

ಮೈಸೂರು ನಗರ ಪೊಲೀಸ್‌ ಘಟಕದ http://mysorecitypolice.gov.in/ ವೆಬ್‌ಸೈಟ್‌ ಹ್ಯಾಕ್‌ ಆಗಿದ್ದು, ‘ಮೈಸೂರು ಸಿಟಿ ಪೊಲೀಸ್‌ – ಗವರ್ನಮೆಂಟ್‌ ಆಫ್‌ ಇಂಡಿಯಾ ಹ್ಯಾಕಡ್‌- ಮಿಸ್ಟರ್‌. ನೈಟ್ರೋಜಿನ್‌ ಟೀಂ ಪಿಸಿಇ, ಪಾಕಿಸ್ತಾನ್‌ ಜಿಂದಾಬಾದ್‌ ‘ಎಂದು ವೆಬ್ ಸೈಟ್ ವಾಲ್ ನಲ್ಲಿ ಪೋಸ್ಟ್ ಮಾಡಿದಲ್ಲದೇ, ರಾಷ್ಟ್ರಧ್ವಜವನ್ನು ಕಾಲಿನಿಂದ ತುಳಿಯುತ್ತಿರುವ ಚಿತ್ರವನ್ನು ಪ್ರಕಟಿಸಿ, ಹೀನ ಮನಸ್ಥಿತಿ ತೋರ್ಪಡಿಸಿದೆ. ಅಲ್ಲದೇ ದೇಶಕ್ಕೆ ಅಪಮಾನ ಮಾಡಲಾಗಿದೆ.

ಇನ್ನು ವೆಬ್ ಸೈಟ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ವೆಬ್ ಸೈಟ್ ನ್ನು ಬ್ಲಾಕ್ ಮಾಡಿದೆ. ವೆಬ್‌ಸೈಟ್‌ ಹ್ಯಾಕ್‌ ಮಾಡಿರುವದನ್ನು ಗಮನಿಸಿದ ಪೊಲೀಸರು, ತಜ್ಞರ ಸಹಾಯದಿಂದ ವೆಬ್‌ಸೈಟ್‌ ಬ್ಲಾಕ್‌ ಮಾಡಿಸಿ, ಹ್ಯಾಕಿಂಗ್‌ ತಡೆಹಿಡಿಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ಮೈಸೂರಿನ ನಗರ ಪೊಲೀಸ್ ಇಲಾಖೆಯ ವೆಬ್ ಸೈಟ್ ಹ್ಯಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ವೆಬ್ ಸೈಟ್ ಹ್ಯಾಕ್ ಕುರಿತು ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search