• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ್ರೋಹಿಗಳಿಂದ ಮೈಸೂರು ಪೊಲೀಸ್ ವೆಬ್ ಸೈಟ್ ಹ್ಯಾಕ್, ರಾಷ್ಟ್ರ ಧ್ವಜಕ್ಕೆ ಅಪಮಾನ

TNN Correspondent Posted On April 2, 2018


  • Share On Facebook
  • Tweet It

ಮೈಸೂರು: ಭಾರತದಲ್ಲಿ ದೇಶದ್ರೋಹಿಗಳ ಕಿರಿಕಿರಿ ಮುಂದುವರಿದಿದ್ದು, ಸದಾ ಭಾರತದೊಂದಿಗೆ ಸೆಣಸಾಡುವ, ದೇಶದ ಅನ್ನವೇ ತಿಂದು ದ್ರೋಹ ಬಗೆಯುವ ಕೆಲವು ವಿಕೃತ ಮನಸ್ಸಿನವರು ಕುತಂತ್ರದ ಕಾರ್ಯಗಳು ಸದಾ ಚಾಲ್ತಿಯಲ್ಲಿವೆ. ಇಷ್ಟು ದಿನ ನೇರವಾಗಿ ದೇಶದ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದ ಕೆಲವು ಕೊಳಕು ಮನಸ್ಸುಗಳು ಇದೀಗ ಅಂತರ್ಜಾಲದಲ್ಲಿ ದೇಶವನ್ನು, ರಾಷ್ಟ್ರಧ್ವಜವನ್ನು ಅವಮಾನಿಸುವ ಕಾರ್ಯದಲ್ಲಿ ನಿರತವಾಗಿವೆ. ಅದಕ್ಕೆ ಸಾಕ್ಷಿ ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸ್ ಘಟಕದ ವೆಬ್ ಸೈಟ್ ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ರಾಷ್ಟ್ರಧ್ವಜವನ್ನು ಅವಮಾನ ಮಾಡುವಂತ ಪೋಸ್ಟ್ ಮಾಡಿದ್ದಾರೆ.

ಮೈಸೂರು ನಗರ ಪೊಲೀಸ್‌ ಘಟಕದ http://mysorecitypolice.gov.in/ ವೆಬ್‌ಸೈಟ್‌ ಹ್ಯಾಕ್‌ ಆಗಿದ್ದು, ‘ಮೈಸೂರು ಸಿಟಿ ಪೊಲೀಸ್‌ – ಗವರ್ನಮೆಂಟ್‌ ಆಫ್‌ ಇಂಡಿಯಾ ಹ್ಯಾಕಡ್‌- ಮಿಸ್ಟರ್‌. ನೈಟ್ರೋಜಿನ್‌ ಟೀಂ ಪಿಸಿಇ, ಪಾಕಿಸ್ತಾನ್‌ ಜಿಂದಾಬಾದ್‌ ‘ಎಂದು ವೆಬ್ ಸೈಟ್ ವಾಲ್ ನಲ್ಲಿ ಪೋಸ್ಟ್ ಮಾಡಿದಲ್ಲದೇ, ರಾಷ್ಟ್ರಧ್ವಜವನ್ನು ಕಾಲಿನಿಂದ ತುಳಿಯುತ್ತಿರುವ ಚಿತ್ರವನ್ನು ಪ್ರಕಟಿಸಿ, ಹೀನ ಮನಸ್ಥಿತಿ ತೋರ್ಪಡಿಸಿದೆ. ಅಲ್ಲದೇ ದೇಶಕ್ಕೆ ಅಪಮಾನ ಮಾಡಲಾಗಿದೆ.

ಇನ್ನು ವೆಬ್ ಸೈಟ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್ ಇಲಾಖೆ ವೆಬ್ ಸೈಟ್ ನ್ನು ಬ್ಲಾಕ್ ಮಾಡಿದೆ. ವೆಬ್‌ಸೈಟ್‌ ಹ್ಯಾಕ್‌ ಮಾಡಿರುವದನ್ನು ಗಮನಿಸಿದ ಪೊಲೀಸರು, ತಜ್ಞರ ಸಹಾಯದಿಂದ ವೆಬ್‌ಸೈಟ್‌ ಬ್ಲಾಕ್‌ ಮಾಡಿಸಿ, ಹ್ಯಾಕಿಂಗ್‌ ತಡೆಹಿಡಿಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ಮೈಸೂರಿನ ನಗರ ಪೊಲೀಸ್ ಇಲಾಖೆಯ ವೆಬ್ ಸೈಟ್ ಹ್ಯಾಕ್ ಮಾಡಿರುವುದು ಗಮನಕ್ಕೆ ಬಂದಿದೆ. ವೆಬ್ ಸೈಟ್ ಹ್ಯಾಕ್ ಕುರಿತು ವಿಚಾರಣೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣ್ಯೇಶ್ವರ ರಾವ್ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search