• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈಲ್ವೆ ಇಲಾಖೆ ಇತಿಹಾಸ: 3 ದಶಕದಲ್ಲೇ ಅತಿ ಕಡಿಮೆ ರೈಲ್ವೆ ಅಪಘಾತ

TNN Correspondent Posted On April 2, 2018
0


0
Shares
  • Share On Facebook
  • Tweet It

ದೆಹಲಿ: ಭಾರತ ಸಂಚಾರದ ಜೀವನಾಡಿಯಾಗಿರುವ ಮತ್ತು ಅತಿ ದೊಡ್ಡ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೆ ಅಪಘಾತಗಳಲ್ಲಿ  ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗಣನೀಯವಾಗಿ ಕಡಿಮೆಯಾಗಿದೆ. ಪದೇ ಪದೆ ಹಳಿ ತಪ್ಪುವುದು, ಅಪಘಾತ, ಬಿರುಕು ಬಿಡುವ ಹಳಿಗಳಿಂದ ಭಾರಿ ಪ್ರಮಾಣದ ಸಾವು ನೋವು ಸಂಭವಿಸಿ ತೀವ್ರ ಟೀಕೆಗೆ ರೈಲ್ವೆ ಇಲಾಖೆ ಗುರಿಯಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ರೈಲ್ವೆ ಸುರಕ್ಷೆತೆ ದೃಷ್ಟಿಯಿಂದ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳು ಮತ್ತು ಕ್ರಮಬದ್ಧವಾದ ಜಾರಿಯಿಂದ ಸಾವು ನೋವುಗಳಲ್ಲಿ ಗಣನೀಯ ಇಳಿಕೆಯಾಗಿದೆ.

ರೈಲ್ವೆ ಇಲಾಖೆ ರೈಲು ಸುರಕ್ಷತೆ ದೃಷ್ಟಿಯಿಂದ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದ ಮೂರು ದಶಕಗಳಲ್ಲೇ ಕಾಣದಂತ ಹೊಸ ದಾಖಲೆ ಸೃಷ್ಟಿಸಿದೆ. ಕಳೆದ 35 ವರ್ಷಗಳಲ್ಲೇ ಮೊದಲ ಬಾರಿಗೆ ರೈಲ್ವೆ ಅಪಘಾತಗಳ ಪ್ರಮಾಣ ಎರಡಂಕಿಗೆ ಇಳಿದಿದೆ.

2017​-18ನೇ ಹಣಕಾಸು ವರ್ಷದಲ್ಲಿ ಮಾ.31ರವರೆಗೆ ಕೇವಲ 73 ಅಪಘಾತ ಸಂಭವಿಸಿದ್ದು, ಈ ಸಂಖ್ಯೆ ಕಳೆದ 35 ವರ್ಷಗಳಲ್ಲೇ ಅತಿ ಕಡಿಮೆ ಅಪಘಾತ ಸಂಭವಿಸಿದ ಸಂಖ್ಯೆಯಾಗಿದೆ. 2016​-2017ನೇ ಸಾಲಿನಲ್ಲಿ ದೇಶಾದ್ಯಂತ ಒಟ್ಟು 104 ಅಪಘಾತ ಸಂಭವಿಸಿದ್ದವು. 2017-18ರಲ್ಲಿ ಅಪಘಾತಗಳ ಪ್ರಮಾಣ ಶೇ.29ರಷ್ಟುಇಳಿಕೆಯಾಗಿದೆ. ರೈಲ್ವೆ ಹಳಿ ತಪ್ಪುವಿಕೆ ಪ್ರಮಾಣ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ 39ಕ್ಕೆ ಇಳಿಕೆಯಾಗಿರುವುದು ಗಮನಾರ್ಹ ಸಂಗತಿ.

1968​-1969ರಲ್ಲಿ ಮೊದಲ ಬಾರಿಗೆ ರೈಲ್ವೆ ಅಪಘಾತಗಳ ಸಂಖ್ಯೆ 1000ಕ್ಕಿಂತ ಕೆಳಗೆ ಇಳಿದಿತ್ತು. ಆ ವರ್ಷ ಅಪಘಾತದ ಪ್ರಮಾಣ 908ಕ್ಕೆ ಇಳಿಕೆಯಾಗಿತ್ತು. ಅದಕ್ಕೂ ಮುನ್ನ ಪ್ರತಿ ವರ್ಷ 1000ಕ್ಕೂ ಹೆಚ್ಚು ಅಪಘಾತಗಳು ನಡೆಯುವುದು ಸಾಮಾನ್ಯ ಎನಿಸಿತ್ತು. ಕೆಲ ವರ್ಷದಿಂದ ರೈಲ್ವೆ ಸುರಕ್ಷತೆಗೆ ಆದ್ಯತೆ ನೀಡಿರುವುದು ಅಪಘಾತ ಪ್ರಮಾಣ ಇಳಿಕೆಗೆ ಪ್ರಮುಖ ಕಾರಣ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ರೇಲ್ವೆ ಸುರಕ್ಷೆಗೆ 7,267 ಕೋಟಿ ರು.ಗಳನ್ನು ಮೀಸಲಿಟ್ಟಿರುವುದು ಮತ್ತು ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿರುವುದು ಗಮನಾರ್ಹ ಸಂಗತಿ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search