• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬುದ್ಧನ ಬಗ್ಗೆ ಮಾಯಾವತಿಯ ಡೋಂಗಿ ಕಾಳಜಿಗೆ ಯೋಗಿ ಉತ್ತರ, ಬೌದ್ಧ ಕ್ಷೇತ್ರಗಳ ಅಭಿವೃದ್ಧಿಗೆ ಹೊಸ ತಂತ್ರ

TNN Correspondent Posted On April 4, 2018
0


0
Shares
  • Share On Facebook
  • Tweet It

ಲಖನೌ: ಬಿಜೆಪಿ ದಲಿತ ವಿರೋಧಿ, ಬೌದ್ಧ ವಿರೋಧಿ ಎಂಬಂತೆ ವಿನಾಕಾರಣ ಬಿಂಬಿಸುತ್ತಿದ್ದ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿಗೆ ಉತ್ತರ ಪ್ರದೇಶದ ಯೋಗಿ ಸರ್ಕಾರ ತಕ್ಕ ಉತ್ತರವನ್ನು ತನ್ನ ಕಾರ್ಯದ ಮೂಲಕವೇ ನೀಡಿದೆ. ಉತ್ತರ ಪ್ರದೇಶದಲ್ಲಿರುವ ಪ್ರಮುಖ ಆರು ಬೌದ್ಧ ಕ್ಷೇತ್ರಗಳನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸೋಧ್ಯಮ ತಾಣಗಳಾಗಿ ಅಭಿವೃದ್ಧಿ ಪಡಿಸಲು ಯೋಗಿ ಆದಿತ್ಯನಾಥ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಬೌದ್ಧನನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದ ಮಾಯಾವತಿ ಸೇರಿ ಹಲವು ಮುಖಂಡರಿಗೆ ಯೋಗಿ ದೊಡ್ಡ ಶಾಕ್ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ತಾಜಮಹಲ್ ಮತ್ತು ವಾರಣಾಸಿ ಮಾದರಿಯಲ್ಲಿ, ವಿಶ್ವಖ್ಯಾತಿಯ ಹಲವು ತಾಣಗಳಿದ್ದು, ಅವುಗಳ ಅಭಿವೃದ್ಧಿಗೆ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಇದೀಗ ಬೌದ್ಧ ಕ್ಷೇತ್ರಗಳನ್ನು ಯೋಗಿ ಆದಿತ್ಯನಾಥ ಸರ್ಕಾರ ಕಣ್ಣಿಟ್ಟಿದ್ದು, ಹೊಸ ಬದಲಾವಣೆಗೆ ತೆರೆದುಕೊಂಡಿದೆ. ಬೌದ್ಧನ ಕ್ಷೇತ್ರಗಳ ಅಭಿವೃದ್ಧಿಗೆ ನೂತನ ಯೋಜನೆ ರೂಪಿಸಿದ್ದು, ಶೀಘ್ರದಲ್ಲಿ ಈ ಯೋಜನೆ ಕಾಮಗಾರಿ ಆರಂಭವಾಗಿಲಿದೆ. ಈ ಯೋಜನೆ ಪೂರ್ಣಗೊಂಡರೆ ಉತ್ತರ ಪ್ರದೇಶದಲ್ಲಿ ಪ್ರವಾಸೋಧ್ಯಮದ ವಿಶೇಷವಾಗಿ ಬೌದ್ಧರ ತಾಣಗಳಿಗೆ ಲಕ್ಷಾಂತರ ಜನರು ಭೇಟಿ ನೀಡುವಂತೆ ಮಾಡುವುದು ನಿಶ್ಚಿತ ಎಂಬುದು ಸರ್ಕಾರದ ಲೆಕ್ಕಾಚಾರ.

ಮಾಯಾವತಿ ಅಧಿಕಾರದಲ್ಲಿದ್ದಾಗ ಕೇವಲ ಕೆಲವು ನಗರಗಳಿಗೆ ಗೌತಮ ನಗರ, ಸಿದ್ಧಾರ್ಥ ನಗರ, ಬುದ್ಧ ನಗರ ಎಂದು ನಾಮಕರಣ ಮಾಡಿ ಬುದ್ಧನ ಸಾರಥಿಯಂತೆ ಬಿಂಬಿಸಿಕೊಂಡಿದ್ದರು. ಆದರೆ ಬೌದ್ಧ ಧರ್ಮದ ಪ್ರಸಿದ್ಧ ಕ್ಷೇತ್ರಗಳ ಅಭಿವೃದ್ಧಿ ಮರೆತ್ತಿದ್ದರು. ಆದರೆ ಇದೀಗ ಪ್ರಸಿದ್ಧ ಬೌದ್ಧ ಕ್ಷೇತ್ರಗಳಾದ ಸಾರಾನಾಥ, ಖುಷಿ ನಗರ, ಸ್ರವಸ್ತಿ, ಸಂಕಿಸಾ, ಕೌಷಂಬಿ ಮತ್ತು ಕಪಿಲವಸ್ತು ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ನಿರ್ಧರಿಸಿದ್ದಾರೆ, ಅಲ್ಲದೇ ಎಲ್ಲ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಸರಣಿಯಾಗಿ ಭೇಟಿನೀಡುವಂತ ಯೋಜನೆಯನ್ನು ರೂಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ

  • Privacy Policy
  • Contact
© Tulunadu Infomedia.

Press enter/return to begin your search