• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ವಿದ್ಯಾರ್ಥಿನಿಯ ಪ್ರಶ್ನೆಗೆ ಪಿಗ್ಗಿಬಿದ್ದ ರಾಹುಲ್ ಗಾಂಧಿ, ಪ್ರಶ್ನೆ ಸಿದ್ದರಾಮಯ್ಯನವರಿಗೆ ವಗಾವಣೆ!

TNN Correspondent Posted On April 5, 2018
0


0
Shares
  • Share On Facebook
  • Tweet It

ದಾವಣಗೆರೆ: ಈ ರಾಹುಲ್ ಗಾಂಧಿಯವರೇ ಹೀಗೇನಾ ಎಂಬ ಅನುಮಾನ ಕಾಡುತ್ತದೆ. ಈ ಹಿಂದೆ ಬೆಂಗಳೂರಿನ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳಿಗೆ ಮೋದಿ ಅವರ ಕುರಿತು ಟೀಕೆ ಮಾಡಲು ಹೋಗಿ ಅವಮಾನ ಅನುಭವಿಸಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬರು ಎನ್ ಸಿಸಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ಗೊತ್ತಿಲ್ಲ ಎಂದು ಜಾರಿಕೊಂಡಿದ್ದನ್ನು ನೋಡಿದರೆ, ಇವರೂ ಏನೂ ಬಾರದ ಮುಗ್ಧ ನಾಯಕರಾ ಎಂಬ ಅನುಮಾನ ಮೂಡುತ್ತದೆ.

ಇಂತಹುದೇ ಅನುಮಾನಕ್ಕೆ ಸ್ವತಃ ರಾಹುಲ್ ಗಾಂಧಿಯವರೇ ನೀರೆರೆದಿದ್ದು, ದಾವಣಗೆರೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಕೇಳಿದ ಸರಳ ಪ್ರಶ್ನೆಗೆ ಉತ್ತರಿಸಲಾಗದೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೈಕ್ ವರ್ಗಾವಣೆ ಮಾಡುವ ಮೂಲಕ ನುಸುಳಿಕೊಂಡಿದ್ದಾರೆ.

ಹೌದು, ದಾವಣಗೆರೆಯಲ್ಲಿ ಬುಧವಾರ ವಿದ್ಯಾರ್ಥಿಗಳು ಹಾಗೂ ರೈತರೊಂದಿಗೆ ಸಂವಾದ ಏರ್ಪಡಿಸಿದ್ದು, ವಿದ್ಯಾರ್ಥಿನಿಯೊಬ್ಬರು ಎದ್ದುನಿಂತು, ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಕುರಿತು ನಿಮ್ಮ ಅಭಿಪ್ರಾಯವೇನು ಅಂತ ವಿದ್ಯಾರ್ಥಿನಿ ರಾಹುಲ್ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

ಆದರೆ ಎಂಜಿನಿಯರಿಂಗ್ ಓದುವ ವಿದ್ಯಾರ್ಥಿನಿ ಕೇಳಿದ ಈ ಸರಳ ಪ್ರಶ್ನೆಗೆ ಉತ್ತರಿಸಲಾಗದ ರಾಹುಲ್ ಗಾಂಧಿಯವರು, ಈ ಪ್ರಶ್ನೆ ಕರ್ನಾಟಕಕ್ಕೆ ಸಂಬಂಧಪಟ್ಟಿರುವುದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಇದಕ್ಕೆ ಉತ್ತರಿಸುವುದು ಸೂಕ್ತ ಎಂದು ಮೈಕ್ ವರ್ಗಾವಣೆ ಮಾಡಿ ಜಾಣತನದಿಂದಲೇ ನುಸುಳಿಕೊಂಡಿದ್ದಾರೆ.

ಆದರೆ ಚುನಾವಣೆ ಹಿನ್ನೆಲೆಯಲ್ಲಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬಂದು ಮೋದಿ ಅವರನ್ನು ತೆಗಳು ರಾಹುಲ್ ಗಾಂಧಿ ಅವರಿಗೆ ರಾಜ್ಯ ಸರ್ಕಾರ ಏಕೆ ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದರು? ಈ ಕುರಿತು ರಾಹುಲ್ ಗಾಂಧಿ ಅವರೇಕೆ ಉತ್ತರ ನೀಡಲಿಲ್ಲ? ಅವರಿಗೆ ಈ ಕುರಿತು ಗೊತ್ತಿಲ್ಲವೇ? ಉತ್ತರಿಸಲು ಉತ್ತರವೇ ಅವರ ಮಿದುಳಿನಲ್ಲಿಲ್ಲವೇ? ರಾಹುಲ್ ಗಾಂಧಿಯವರೇಕೆ ವಿದ್ಯಾರ್ಥಿಗಳು ಕೇಳುವ ಸಣ್ಣ ಪ್ರಶ್ನೆಗಳಿಗೂ ಉತ್ತರಿಸಲ್ಲ? ಈ ಎಲ್ಲ ಪ್ರಶ್ನೆಗಳಿಗೂ ರಾಹುಲ್ ಗಾಂಧಿಯವರೇ ಉತ್ತರಿಸಬೇಕು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search