• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರತಿಪಕ್ಷಗಳಿಂದ ಕಲಾಪ ವ್ಯರ್ಥ, 23 ದಿನದ ವೇತನ ಭತ್ಯೆ ಮರಳಿಸಿದ ಪ್ರಧಾನಿ ಮೋದಿ

TNN Correspondent Posted On April 8, 2018


  • Share On Facebook
  • Tweet It

ದೆಹಲಿ: ಸಂಸತ್ ನಲ್ಲಿ ನಿರಂತರವಾಗಿ ಗದ್ದಲವೆಬ್ಬಿಸಿ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಎರಡನೆಯ ಇಡೀ ಅವಧಿ ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಅವರು ತಮ್ಮ 23 ದಿನಗಳ ವೇತನ ಮತ್ತು ಭತ್ಯೆಯನ್ನು ಸರ್ಕಾರಕ್ಕೆ ಮರಳಿಸಿದ್ದಾರೆ. ಸಂಸತ್ ಅಧಿವೇಶನ ವ್ಯರ್ಥವಾದ ಹಿನ್ನೆಲೆಯಲ್ಲಿ ಎನ್ ಡಿಎ ಸಂಸದರು ವೇತನ ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 28 ದಿನಗಳ 79,750 ರೂಪಾಯಿಯನ್ನು ಮರಳಿ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಜ.29ರಂದು ಆರಂಭವಾಗಿದ್ದ ಸಂಸತ್‌ ಅಧಿವೇಶನ ಶೂನ್ಯ ಸಾಧನೆಯ ಮೂಲಕ ಶುಕ್ರವಾರ ಅಂತ್ಯವಾಗಿತ್ತು. ಬಜೆಟ್‌ ಅಧಿವೇಶನದ ವಿಸ್ತರಿತ ಭಾಗ ಆರಂಭವಾದಾಗಿನಿಂತಲೂ ಕಾವೇರಿ ನಿರ್ವಹಣಾ ಮಂಡಳಿ ರಚನೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣ, ಎಸ್‌ಸಿ-ಎಸ್‌ಟಿ ದೌರ್ಜನ್ಯ ಕಾಯ್ದೆಯ ಕುರಿತು ಪ್ರತಿಪಕ್ಷಗಳ ವಿನಾಕಾರಣ ಅಲಾಪದಿಂದ ಕಲಾಪ ವ್ಯರ್ಥವಾಗಿತ್ತು. ಉಭಯ ಸದನಗಳಲ್ಲಿ ಯಾವುದೇ ರೀತಿಯ ಚರ್ಚೆಗಳು ನಡೆಯಲಿಲ್ಲ.

ಕೇಂದ್ರ ಸರ್ಕಾರದ ವಿರುದ್ಧ ವೈಎಸ್ಸಾರ್‌ ಕಾಂಗ್ರೆಸ್‌, ತೆಲುಗುದೇಶಂ, ಕಾಂಗ್ರೆಸ್‌ ಹಾಗೂ ಎಡರಂಗಗಳು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದರೂ ಕೆಲವು ಪ್ರಾದೇಶಿಕ ಪಕ್ಷಗಳ ಗಲಾಟೆಯಿಂದ ಇದನ್ನು ಕೈಗೆತ್ತಿಕೊಳ್ಳಲೂ ಆಗಲಿಲ್ಲ. ಈ ಬಿಕ್ಕಟ್ಟಿಗೆ ವಿಪಕ್ಷಗಳು ಕಾರಣ ಎಂದು ಸರ್ಕಾರ ಟೀಕಿಸಿತ್ತು. ಆದರೆ ಕೇಂದ್ರದ ನಿಲುವುಗಳು ಇದಕ್ಕೆ ಕಾರಣ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೆಲ್ಲದರ ಮಧ್ಯೆ 23 ದಿನಗಳ ಕಲಾಪ ವ್ಯರ್ಥವಾಗಿತ್ತು. ಆದ್ದರಿಂದ ಎನ್ ಡಿಎ ಸಂಸದರು ವೇತನ ಮತ್ತು ಭತ್ಯೆ ನಿರಾಕರಿಸಿದ್ದರು. ಇದರಿಂದ 3.66 ಕೋಟಿ ರು. ಸರ್ಕಾರಕ್ಕೆ ಮರಳಿಲಿದೆ ಎಂದು ಸಂಸದೀಯ ಖಾತೆ ಸಚಿವ ಅನಂತ್‌ಕುಮಾರ್‌ ಮಾಹಿತಿ ನೀಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ವೇತನ ಮತ್ತು ಭತ್ಯೆ ನಿರಾಕರಿಸುವ ಮೂಲಕ ಮಾದರಿಯಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search