• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಪಕ್ಷಗಳಿಂದ ಕಲಾಪ ವ್ಯರ್ಥ, 23 ದಿನದ ವೇತನ ಭತ್ಯೆ ಮರಳಿಸಿದ ಪ್ರಧಾನಿ ಮೋದಿ

TNN Correspondent Posted On April 8, 2018
0


0
Shares
  • Share On Facebook
  • Tweet It

ದೆಹಲಿ: ಸಂಸತ್ ನಲ್ಲಿ ನಿರಂತರವಾಗಿ ಗದ್ದಲವೆಬ್ಬಿಸಿ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಎರಡನೆಯ ಇಡೀ ಅವಧಿ ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಅವರು ತಮ್ಮ 23 ದಿನಗಳ ವೇತನ ಮತ್ತು ಭತ್ಯೆಯನ್ನು ಸರ್ಕಾರಕ್ಕೆ ಮರಳಿಸಿದ್ದಾರೆ. ಸಂಸತ್ ಅಧಿವೇಶನ ವ್ಯರ್ಥವಾದ ಹಿನ್ನೆಲೆಯಲ್ಲಿ ಎನ್ ಡಿಎ ಸಂಸದರು ವೇತನ ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 28 ದಿನಗಳ 79,750 ರೂಪಾಯಿಯನ್ನು ಮರಳಿ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಜ.29ರಂದು ಆರಂಭವಾಗಿದ್ದ ಸಂಸತ್‌ ಅಧಿವೇಶನ ಶೂನ್ಯ ಸಾಧನೆಯ ಮೂಲಕ ಶುಕ್ರವಾರ ಅಂತ್ಯವಾಗಿತ್ತು. ಬಜೆಟ್‌ ಅಧಿವೇಶನದ ವಿಸ್ತರಿತ ಭಾಗ ಆರಂಭವಾದಾಗಿನಿಂತಲೂ ಕಾವೇರಿ ನಿರ್ವಹಣಾ ಮಂಡಳಿ ರಚನೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣ, ಎಸ್‌ಸಿ-ಎಸ್‌ಟಿ ದೌರ್ಜನ್ಯ ಕಾಯ್ದೆಯ ಕುರಿತು ಪ್ರತಿಪಕ್ಷಗಳ ವಿನಾಕಾರಣ ಅಲಾಪದಿಂದ ಕಲಾಪ ವ್ಯರ್ಥವಾಗಿತ್ತು. ಉಭಯ ಸದನಗಳಲ್ಲಿ ಯಾವುದೇ ರೀತಿಯ ಚರ್ಚೆಗಳು ನಡೆಯಲಿಲ್ಲ.

ಕೇಂದ್ರ ಸರ್ಕಾರದ ವಿರುದ್ಧ ವೈಎಸ್ಸಾರ್‌ ಕಾಂಗ್ರೆಸ್‌, ತೆಲುಗುದೇಶಂ, ಕಾಂಗ್ರೆಸ್‌ ಹಾಗೂ ಎಡರಂಗಗಳು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದರೂ ಕೆಲವು ಪ್ರಾದೇಶಿಕ ಪಕ್ಷಗಳ ಗಲಾಟೆಯಿಂದ ಇದನ್ನು ಕೈಗೆತ್ತಿಕೊಳ್ಳಲೂ ಆಗಲಿಲ್ಲ. ಈ ಬಿಕ್ಕಟ್ಟಿಗೆ ವಿಪಕ್ಷಗಳು ಕಾರಣ ಎಂದು ಸರ್ಕಾರ ಟೀಕಿಸಿತ್ತು. ಆದರೆ ಕೇಂದ್ರದ ನಿಲುವುಗಳು ಇದಕ್ಕೆ ಕಾರಣ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೆಲ್ಲದರ ಮಧ್ಯೆ 23 ದಿನಗಳ ಕಲಾಪ ವ್ಯರ್ಥವಾಗಿತ್ತು. ಆದ್ದರಿಂದ ಎನ್ ಡಿಎ ಸಂಸದರು ವೇತನ ಮತ್ತು ಭತ್ಯೆ ನಿರಾಕರಿಸಿದ್ದರು. ಇದರಿಂದ 3.66 ಕೋಟಿ ರು. ಸರ್ಕಾರಕ್ಕೆ ಮರಳಿಲಿದೆ ಎಂದು ಸಂಸದೀಯ ಖಾತೆ ಸಚಿವ ಅನಂತ್‌ಕುಮಾರ್‌ ಮಾಹಿತಿ ನೀಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ವೇತನ ಮತ್ತು ಭತ್ಯೆ ನಿರಾಕರಿಸುವ ಮೂಲಕ ಮಾದರಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search