• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರ ಪೋಷಕ ಪಟ್ಟ ಕಳಚಿಕೊಳ್ಳಲು ಪಾಕ್ ನಿರ್ಧಾರ?: ಉಗ್ರ ಸಂಘಟನೆಗಳ ನಿಷೇಧಕ್ಕೆ ಸಿದ್ಧತೆ

TNN Correspondent Posted On April 8, 2018


  • Share On Facebook
  • Tweet It

ಇಸ್ಲಾಮಾಬಾದ್: ಭಯೋತ್ಪಾದಕರನ್ನು ಸಲಹುತ್ತಿರುವ ಆರೋಪ ಹೊತ್ತಿರುವ ಪಾಕಿಸ್ತಾನ, ಭಯೋತ್ಪಾದನೆ ಪೋಷಕ ಎಂಬ ಹಣೆಪಟ್ಟಿ ಕಳಚಿಕೊಳ್ಳಲು ಹಲವು ಬಾರಿ ನಾಟಕಗಳನ್ನು ಮಾಡಿದೆ. ಆದರೆ ಇದೀಗ ಮತ್ತೊಮ್ಮೆ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳನ್ನು ಶಾಶ್ವತವಾಗಿ ನಿಷೇಧಿಸುವ ನಿಟ್ಟಿನಲ್ಲಿ ಕರಡು ವಿಧೇಯಕ ರೂಪಿಸುತ್ತಿದೆ ಎನ್ನಲಾಗಿದೆ.
ಗೃಹಸಚಿವಾಲಯದ ನಿಗಾ ಪಟ್ಟಿಯಲ್ಲಿರುವ ಕೆಲವು ಸಂಘಟನೆಗಳು ಮತ್ತು ವ್ಯಕ್ತಿಗಳನ್ನು ನಿಷೇಧಿಸಿದ ಅಧ್ಯಕ್ಷರ ಸುಗ್ರೀವಾಜ್ಞೆಯ ಬದಲಿಗೆ ಈ ವಿಧೇಯಕ ತರಲಾಗುತ್ತಿದೆ. ಭಯೋತ್ಪಾದನಾ ನಿಗ್ರಹ ದಳ 1997ರ ತಿದ್ದುಪಡಿ ಕರಡು ವಿಧೇಯಕವನ್ನು ಏ.9ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲು ಕಾನೂನು ಸಚಿವಾಲಯ ಸಿದ್ಧತೆ ನಡೆಸಿದೆ ಎಂದು ಪಾಕಿಸ್ತಾನ ಪ್ರಮುಖ ಪತ್ರಿಕೆ ಡಾನ್ ವರದಿ ಮಾಡಿದೆ. ಪ್ರಸ್ತಾವಿತ ಕರಡು ವಿಧೇಯಕವನ್ನು ಪರಿಶೀಲಿಸಲು ಕಾನೂನು ಸಚಿವಾಲಯ ಮತ್ತು ಪಾಕ್‌ ಸೇನೆಯ ಆಡಳಿತ ಮಂಡಳಿ ಕೂಡ ವಿಧೇಯಕ ರಚನೆಯ ಪ್ರಕ್ರಿಯೆಯಲ್ಲಿ ಭಾಗಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕರಿಗೆ ಹಣಕಾಸು ನೆರವು ಒದಗಿಸಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಹೆಸರನ್ನು ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಹಾಗೂ ಜರ್ಮನಿಯ ಜಂಟಿ ಪ್ರಸ್ತಾಪಕ್ಕೆ ಹಣಕಾಸು ಕಾರ್ಯಪಡೆ ಅನುಮೋದನೆ ನೀಡಿತ್ತು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ವರ್ಚಸ್ಸಿಗೆ ಆಗುವ ಧಕ್ಕೆಯನ್ನು ತಡೆಯುವ ಉದ್ದೇಶದಿಂದ ಭಯೋತ್ಪಾದಕ ನಿಗ್ರಹ ಕಾಯಿದೆಗೆ ತಿದ್ದುಪಡೆ ಕರಡು ವಿಧೇಯಕ ಮಂಡಿಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ. ಆದರೆ ಅದು ಎಷ್ಟರ ಮಟ್ಟಿಗೆ ಜಾರಿಗೆ ಬರುತ್ತದೆ ಎಂಬ ಅನುಮಾನಗಳು ವಿಶ್ವಸಮುದಾಯಕ್ಕಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search