• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಬಂದ್ ಹಿಂದೆ ಇತ್ತು ಷಡ್ಯಂತ್ರ, ಮೋದಿ ಹಣೆಯಲು ಪ್ರತಿಪಕ್ಷಗಳು ಮಾಡಿದವೇ ಕುತಂತ್ರ?

TNN Correspondent Posted On April 8, 2018
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗೆ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಭಾರತ್ ಬಂದ್ ಹೆಸರಿನಲ್ಲಿ ನಡೆಸಿದ ಹಿಂಸಾಚಾರದ ಹಿಂದೆ ಷಡ್ಯಂತ್ರ ಇದೆ ಎಂದು ಮಧ್ಯಪ್ರದೇಶ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಇದರ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆಯೇ ಎಂಬ ಅನುಮಾನ ಮೂಡಿದೆ.

ಈ ಕುರಿತು ಗುಪ್ತಚರ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಏಪ್ರಿಲ್ ಎರಡರಂದು ದೇಶದ ಹಲವೆಡೆ ಬಂದ್ ಹೆಸರಿನಲ್ಲಿ ನಡೆಸಿದ ಹಿಂಸಾಚಾರ ಪೂರ್ವ ನಿಯೋಜಿತವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸುಮಾರು 35 ಸಂಘಟನೆಗಳು ಮತ್ತು ಅವುಗಳಿಗೆ ಅಪಾರ ಹಣ, ಲಾಠಿ, ಪೋಸ್ಟರ್ ಸೇರಿ ಹಲವು ವಸ್ತುಗಳನ್ನು ನೀಡಿದ್ದು, ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ, ಈ ಷಡ್ಯಂತ್ರದಿಂದ ಹಿಂಸೆಯ ರೂಪ ಪಡೆಯಿತು ಎಂದು ವರದಿಯಲ್ಲಿ ಬಹಿರಂಗಗೊಳಿಸಿದೆ.

ಅಲ್ಲದೆ ಅಂಬೇಡ್ಕರ್ ಮೂರ್ತಿ ಧ್ವಂಸ ಸೇರಿ ಹಲವು ಹಿಂಸಾತ್ಮಕ ಕೃತ್ಯ ಎಸಗಲು ಪೊಲೀಸರ ಸಹಕಾರ ಸಹ ಪಡೆಯಲಾಗಿದೆ. ಹಾಗಾಗಿಯೇ ಬಂದ್ ಹಿಂಸೆಯ ರೂಪ ಪಡೆದು 9 ಮಂದಿ ಮೃತಪಟ್ಟು ಕೋಟ್ಯಂತರ ರೂಪಾಯಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಲು ಕಾರಣವಾಯಿತು ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಏಪ್ರಿಲ್ 2ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿತ್ತು. ಈ ವೇಳೆ ಪ್ರತಿಭಟನೆ ಹಿಂಸಾಚಾರದ ರೂಪ ಪಡೆದು 9 ಜನ ಮೃತಪಟ್ಟಿದ್ದರು. ಮಧ್ಯಪ್ರದೇಶವೊಂದರಲ್ಲೇ 8 ಜನ ಮೃತಪಟ್ಟಿದ್ದರು.

ಆದಾಗ್ಯೂ, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾತ್ರ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹಿಂದೆ ಪ್ರತಿಪಕ್ಷಗಳ ಕೈವಾಡ ಇದೆ ಎಂದು ಬಿಜೆಪಿ ಆರೋಪಿಸುತ್ತಿರುವ ಬೆನ್ನಲ್ಲೇ, ಗುಪ್ತಚರ ಇಲಾಖೆ ಷಡ್ಯಂತ್ರ ಇದೆ ಎಂದು ತಿಳಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search