• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಧರ ಕುಟುಂಬಕ್ಕೆ ಶುಭ ಸುದ್ಧಿ, ಗಡಿಕಾಯುವ ನವವಿವಾಹಿತ ಯೋಧರಿಗೆ ಅತಿಥಿ ಗೃಹ ನಿರ್ಮಾಣ

TNN Correspondent Posted On April 9, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತೀಯ ಸೇನೆಗೆ ಹೊಸ ಬಲ ತುಂಬುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಸೇನೆಗೆ ಸ್ವಾತಂತ್ರ್ಯ ನೀಡುವುದು, ವೇತನ, ಯುದ್ಧಾಸ್ತ್ರಗಳ ವಿತರಣೆ ಸೇರಿ ನಾನಾ ಸೌಲಭ್ಯಗಳನ್ನು ಕಟ್ಟುನಿಟ್ಟಾಗಿ ನೀಡುತ್ತಿದ್ದಾರೆ. ಈ ಮೂಲಕ ಸೈನಿಕರಿಗೆ ನೈತಿಕ ಬಲ ತುಂಬುವ ಕಾರ್ಯವನ್ನು ನರೇಂದ್ರ ಮೋದಿ ಅವರ ಸರ್ಕಾರ ಮಾಡುತ್ತಿದೆ. ಆದರೆ ಇದೀಗ ಕುಟುಂಬದಿಂದ ದೂರವಿರುವ, ವಿಶೇಷವಾಗಿ ನವವಿವಾಹಿತ ಯೋಧರಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆಯನ್ನು ನೀಡುವ ಮೂಲಕ ಗಮನ ಸೆಳೆದಿದೆ.

ನವವಿವಾಹಿತ ಮತ್ತು ಇತರ ಯೋಧರು ತಮ್ಮ ಕುಟುಂಬದವರೊಂದಿಗೆ ನೆಮ್ಮದಿಯಿಂದ ಜೀವನ ಸಾಗಿಸಲು, ಸಮಯ ಕಳೆಯಲು ಅನುಕೂಲವಾಗುವ ನಿಟ್ಟಿನಲ್ಲಿ ದೇಶಾಧ್ಯಂತ 190 ಅತಿಥಿ ಗೃಹಗಳನ್ನು ನಿರ್ಮಿಸಲು ಗಡಿ ಭದ್ರತಾ ಪಡೆ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ಎಂಟು ಗಡಿ ಪ್ರದೇಶದಲ್ಲಿ 2,800 ಕೋಣೆಗಳನ್ನು ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಯೋಧರಿಗೆ ತಮ್ಮ ಕುಟುಂಬದವರೊಂದಿಗೆ ನೆಮ್ಮದಿಯ ಜೀವನ ನಡೆಸಲು ಅನುಕೂಲ ಕಲ್ಪಿಸಲಾಗಿದೆ.

ಜವಾನ್ ಗೆಸ್ಟ್ ಹೌಸ್ ಹೆಸರಲ್ಲಿ ನಿರ್ಮಿಸಲಾಗುವ ಈ ಗೃಹಗಳಲ್ಲಿ ಯೋಧರು ತಮ್ಮ ಕುಟುಂಬಸ್ಥರೊಂದಿಗೆ ಕಾಲ ಕಳೆಯಬಹುದು. ಯೋಧರು 30 ವರ್ಷದ ಸೈನಿಕ ಸೇವೆಯಲ್ಲಿ  ನಿರತರಾಗಿದ್ದರೇ, ಕೇವಲ ಐದು ವರ್ಷ ಮಾತ್ರ ಕುಟುಂಬದೊಂದಿಗೆ ಜೀವನ ಕಳೆಯುತ್ತಾರೆ. ಆದ್ದರಿಂದ ಹೆಚ್ಚಿನ ಸಮಯವನ್ನು ಕುಟುಂಬದೊಂದಿಗೆ ಕಳೆಯಬೇಕು, ವಿಶೇಷವಾಗಿ ನವವಿವಾಹಿತ ಯೋಧರು ಕುಟುಂಬದೊಂದಿಗೆ ಜೀವನ ಸಾಗಿಸುವ ದೃಷ್ಟಿಯಿಂದ ಈ ಅತಿಥಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search