• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸೇರುವುದಿಲ್ಲ ಎಂದ ಗಾಣಿಗ ಸಂಘ, “ಪ್ರತ್ಯೇಕತಾವಾದಿ”ಗಳಿಗಿದು ಹಿನ್ನಡೆ!

TNN Correspondent Posted On April 10, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತದೆ ಎಂಬುದು ಗೊತ್ತಾಯಿತೋ, ಅಲ್ಲಿಂದ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆ ನೀಡಬೇಕು ಎಂಬ ಕೂಗು ಜೋರಾಯಿತು. ಕೆಲವು “ಪ್ರತ್ಯೇಕತಾವಾದಿ” ಮನಸ್ಸುಗಳು ಒಂದಾಗಿ ಈ ಕೂಗನ್ನು ಮತ್ತಷ್ಟು ಜೋರು ಮಾಡಿದವು. ತಾನಿರುವುದೇ ಒಡೆದು ಆಳುವುದಕ್ಕೆ ಎಂದು ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತ್ಯೇಕ ಧರ್ಮದ ಶಿಫಾರಸನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರು.

ಆದರೆ ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಸಿದ್ದರಾಮಯ್ಯನವರನ್ನು ಒಡೆದು ಆಳುವ ಮುಖ್ಯಮಂತ್ರಿ ಎಂದೇ ಸಂಬೋಧಿಸಲಾಗುತ್ತಿದೆ. ಆದಾಗ್ಯೂ ವೀರಶೈವ ಮಹಾಸಭಾ, ಡಾ.ಶಿವಕುಮಾರ ಸ್ವಾಮೀಜಿ ಅವರು ಪ್ರತ್ಯೇಕ ಧರ್ಮ ಸ್ಥಾಪನೆಗೆ ವಿರೋಧಿಸಿದ್ದಾರೆ. ಆ ಮೂಲಕ ಪ್ರತ್ಯೇಕತಾವಾದಿಗಳಿಗೆ ತಿರುಗೇಟು ನೀಡಿದ್ದಾರೆ.

ಈಗ ಪ್ರತ್ಯೇಕ ಧರ್ಮದ ಕೂಗು ಎಬ್ಬಿಸಿದವರಿಗೆ ಈಗ ಮತ್ತೊಂದು ಹಿನ್ನಡೆಯಾಗಿದ್ದು, ನಾವು ಯಾವುದೇ ಕಾರಣಕ್ಕು ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ ಸೇರುವುದಿಲ್ಲ ಎಂದು ಕರ್ನಾಟಕ ರಾಜ್ಯ ಯುವ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಘೊಷಿಸಿದೆ.

ಈ ಕುರಿತು ಮಾಹಿತಿ ಆಯೋಗದ ಮಾಜಿ ಆಯುಕ್ತರೂ ಆದ ಸಂಘದ ಮುಖಂಡ ಡಾ.ಶೇಖರ್ ಸಜ್ಜನ್ ಮಾತನಾಡಿದ್ದು, ನಾವು ಪ್ರತ್ಯೇಕ ಧರ್ಮದ ಪರ ಎಂದಿಗೂ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಯಾವುದೇ ಪ್ರತ್ಯೇಕ ಧರ್ಮಕ್ಕೂ ನಾವು ಸೇರಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹವನೂರ್ ಸಮಿತಿ ಶಿಫಾರಸಿನ ಪ್ರಕಾರ ಗಾಣಿಗ ಸಮುದಾಯ 2 ಎ ವರ್ಗಕ್ಕೆ ಬರುತ್ತದೆ ಎಂದು ಗುರುತಿಸಲಾಗಿದೆ. ಈಗಾಗಲೇ ನಾವು ಸರ್ಕಾರದಿಂದ ಮೀಸಲು ಸೌಲಭ್ಯ ಪಡೆಯುತ್ತಿದ್ದೇವೆ. ಹೀಗಿರುವಾಗ ಪ್ರತ್ಯೇಕ ಧರ್ಮದ ಜತೆ ಹೋಗಿ ಇರುವ ಸೌಲಭ್ಯ ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಗಾಣಿಗ ಸಮುದಾಯದವರನ್ನೂ ಲಿಂಗಾಯತ ಪ್ರತ್ಯೇಕ ಧರ್ಮದೊಳಗೆ ಸೇರಿಸಲು ಪ್ರತ್ಯೇಕತಾವಾದಿಗಳು ಇಚ್ಛಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದವು. ಈಗ ಗಾಣಿಗ ಸಮುದಾಯದ ಮುಖಂಡರೇ ನಾವು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸೇರುವುದಿಲ್ಲ ಎಂದಿರುವುದು ಪ್ರತ್ಯೇಕತಾವಾದಿಗಳಿಗೆ ಹಿನ್ನಡೆಯಾದಂತಾಗಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search