• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೈತರ ಹಿತ ಕಾಪಾಡಲು ಮಹಾರಾಷ್ಟ್ರ ಸರ್ಕಾರ ಯಾವ ಸಂಸ್ಥೆ ಜತೆ ಮಹತ್ತರ ಒಪ್ಪಂದ ಮಾಡಿಕೊಂಡಿದೆ ಗೊತ್ತಾ?

TNN Correspondent Posted On April 10, 2018
0


0
Shares
  • Share On Facebook
  • Tweet It

ಮುಂಬೈ: ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ರೈತರು ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದಾಗ, ಬಿಜೆಪಿ ವಿರೋಧಿಗಳೆಲ್ಲ ಮೋದಿ ಅವರನ್ನೇ ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ರಾಜ್ಯ ಸರ್ಕಾರದ ವಿರುದ್ಧವೂ ಮಾತನಾಡಿದರು.

ಆದರೆ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಆರು ತಿಂಗಳ ಒಳಗೆ ರೈತರ ಎಲ್ಲ ಬೇಡಿಕೆ ಈಡೇರಿಸುತ್ತೇವೆ ಎಂದು ಭರವಸೆ ನೀಡುವ ಮೂಲಕ ತಮ್ಮದು ರೈತಪರ ಸರ್ಕಾರ ಎಂಬುದನ್ನು ಘೋಷಿಸಿದ್ದರು. ಆದರೆ ಇದೇ ದೆಹಲಿಯಲ್ಲಿ ಭೂ ಸ್ವಾಧೀನ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು ಎಂದು ಅವರ ಗುಡಿಸಲುಗಳನ್ನೇ ಸುಟ್ಟು ಹಾಕಿದರೂ ಯಾರೂ ದೆಹಲಿ ಸರ್ಕಾರದ ವಿರುದ್ಧ ಸೊಲ್ಲೆತ್ತಲ್ಲಿಲ್ಲ.

ಈ ಮೋದಿ ವಿರೋಧಿಗಳ ಇಬ್ಬಂದಿತನ ಒತ್ತಟ್ಟಿಗಿರಲಿ. ಈಗ ಮಹಾರಾಷ್ಟ್ರ ಸರ್ಕಾರ ರೈತರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಮುಂದಾಗಿದ್ದು, ಕೃಷಿ ಅಭಿವೃದ್ಧಿಗಾಗಿ 2,726 ಕೋಟಿ ರೂ. ವಿನಿಯೋಗಿಸಲು ವಿಶ್ವಸಂಸ್ಥೆ ಜತೆ ಮಹತ್ತರ ಒಪ್ಪಂದ ಮಾಡಿಕೊಂಡಿದೆ.

ತೀವ್ರ ಬರದಿಂದ ಕಂಗೆಟ್ಟಿರುವ ಹಾಗೂ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಮಹಾರಾಷ್ಟ್ರದ ಮರಾಠವಾಡ ಹಾಗೂ ವಿದರ್ಭ ಪ್ರದೇಶಗಳ ಕೃಷಿ ಸಮಸ್ಯೆ ಬಗೆಹರಿಸಲು ಇಷ್ಟೂ ಹಣವನ್ನು ವಿನಿಯೋಗಿಸಲಿದ್ದು, ಈ ಭಾಗದ ರೈತರಿಗೆ ಯೋಜನೆ ವರದಾನವಾಗಲಿದೆ.

ಇದಕ್ಕೆ ಮಹಾರಾಷ್ಟ್ರ ಕೃಷಿ ಹವಾಮಾನ ಚೇತರಿಕೆ ಯೋಜನೆ ಎಂದು ಹೆಸರಿಟ್ಟಿದ್ದು, ವಿಶ್ವಸಂಸ್ಥೆ ಈ ಯೋಜನೆಗೆ ನೆರವು ನೀಡಲಿದೆ. ಮಹಾರಾಷ್ಟ್ರದ ಈ ಎರಡೂ ಭಾಗದಲ್ಲಿ ಕೃಷಿಗೆ ನೀರಾವರಿ, ವೈಜ್ಞಾನಿಕ ವಿಧಾನ ಅಳವಡಿಕೆ ಸೇರಿ ಹಲವು ಅಭಿವೃದ್ಧಿಗಾಗಿ ಹಣ ವಿನಿಯೋಗಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರವೊಂದು ತನ್ನ ರಾಜ್ಯದ ಜನರ ಒಳಿತಿಗಾಗಿ ವಿಶ್ವಸಂಸ್ಥೆಯೊಂದಿಗೆ ಮಹತ್ತರ ಒಪ್ಪಂದ ಮಾಡಿಕೊಂಡು ಸಾವಿರಾರು ಕೋಟಿ ರೂ. ವ್ಯಯಿಸುತ್ತಿರುವುದು ರೈತರ ಹಿತದೃಷ್ಟಿಯಿಂದ ಶ್ಲಾಘನೀಯವಾಗಿದೆ. ಎಲ್ಲ ರಾಜ್ಯಗಳಲ್ಲೂ ಇಂತಹ ಯೋಜನೆ ಜಾರಿಯಾಗಿ ರೈತರ ಕಷ್ಟ ನೀಗಲಿ ಎಂಬುದೇ ಆಶಯವಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search