• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಡಿ ಅಕ್ರಮ ನುಸುಳುಕೋರರಿಗೆ ಶಾಕ್, ನುಸುಳುವಿಕೆ ತಡೆಯಲು ಸ್ಮಾರ್ಟ್ ಬೇಲಿ

TNN Correspondent Posted On April 12, 2018


  • Share On Facebook
  • Tweet It

ದೆಹಲಿ: ಅಕ್ರಮವಾಗಿ ನುಸುಳಿ ದೇಶದಲ್ಲಿ ಅನಾಚಾರ, ದೇಶವಿರೋಧಿ ಚಟುವಟಿಕೆ, ಭಯೋತ್ಪಾದನೆ, ಕೋಮು ಗಲಭೆ ಸೇರಿ ನಾನಾ ಕುಕೃತ್ಯಗಳನ್ನು ನಡೆಸುವ ನುಸುಳುಕೋರರಿಗೆ ಕೇಂದ್ರ ಸರ್ಕಾರ ಭರ್ಜರಿ ಶಾಕ್ ನೀಡಿದೆ. ಬಾಂಗ್ಲಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ನಿರಂತರವಾಗಿ ಭಾರತಕ್ಕೆ ಅಕ್ರಮವಾಗಿ ನುಳುವಿಕೆ ತಡೆಯಲು ಸೈನ್ಯ ಆಧುನಿಕ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ಫೆನ್ಸ್ ಬೇಲಿಯನ್ನು ಆರಂಭವಿಕವಾಗಿ ಅಸ್ಸಾಂನಲ್ಲಿ ಅಳವಡಿಸಲಾಗಿದೆ. ಶೀಘ್ರದಲ್ಲೇ ಈ ಬೇಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಇಡೀ ಗಡೀ ಪ್ರದೇಶವನ್ನು ಆಕ್ರಮಿಸಲಿದೆ.

ಇದೀಗ ಅಸ್ಸಾಂನ ಭಾಂಗ್ಲಾ ಗಡಿಯಲ್ಲಿ ಕಾಂಪ್ರಹೆನ್ಸೀವ್ ಇಂಟಗ್ರೇಟೆಡ್ ಬಾರ್ಡರ್ ಮ್ಯಾನೇಜಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದ್ದು, ಪ್ರಸ್ತುತ ಬಹ್ಮಪುತ್ರ ನದಿ ದಂಡೆಯ ಧುಬ್ರಿಯಲ್ಲಿನ ಗಡಿಭಾಗದ 55 ಕಿ.ಮೀ. ಉದ್ದಕ್ಕೂ ಅಳವಡಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ.

ಗುಡ್ಡಗಾಡು, ನದಿ, ಅರಣ್ಯ ಸೇರಿ ನಾನಾ ರೀತಿಯ ಪ್ರದೇಶದಲ್ಲಿ ತಡೆಗೋಡೆ, ತಂತಿ ಬೇಲಿ ನಿರ್ಮಿಸಲು ಸಾಧ್ಯವಿಲ್ಲ. ಅಂತಹ ಸ್ಥಳದಲ್ಲಿ ನೂತನ ತಂತ್ರಜ್ಞಾನವನ್ನು ಬಳಿಸಿ ನಿಗಾಃ ಇರಿಸುವುದು ಭದ್ರತಾ ಪಡೆಯ ಯೋಜನೆ. ಸಿಸಿ ಕ್ಯಾಮರಾ, ಸೆನ್ಸಾರ್, ಚಲನೆಗಳನ್ನು ಗ್ರಹಿಸುವ ವಿಕಿರಣ ಸಾಧನೆಗಳು, ಅಲಾಂರ ವ್ಯವಸ್ಥೆಯನ್ನು ಬಳಸಿ ವಿರೋಧಿ ರಾಷ್ಟ್ರದ ಯೋಧರು, ಜನರು ಅಕ್ರಮವಾಗಿ ದೇಶವನ್ನು ಪ್ರವೇಶಿಸುವುದರ ಮೇಲೆ ನಿಗಾ ಇಡಬಹುದು.

ಪ್ರಸ್ತುತ ಗಡಿಯಲ್ಲಿ ಗೋಡೆ ಅಥವಾ ತಂತಿ ಬೇಲಿಗಳು ಇಲ್ಲದೇ ತಂತ್ರಜ್ಞಾನ ಹೊಂದಿರುವ ಗಡಿ ಬೇಲಿ ಅಳವಡಿಸುವುದು ಉತ್ತಮ ಎಂದು ಈ ಹೊಸ ಪ್ರಯೋಗ ಆರಂಭಿಸಲಾಗಿದೆ. ನದಿ ಹರಿವು ತೀವ್ರವಾಗಿರುವ ಪ್ರದೇಶದಲ್ಲಿ ಗೋಡೆ ಅಥವಾ ತಂತಿ ಬೇಲಿ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಸ್ಮಾರ್ಟ್ ಬೇಲಿ ಅಳವಡಿಸಿ ಅಕ್ರಮವಾಗಿ ನುಸುಳುವುದನ್ನು ತಡೆಗಟ್ಟಬಹುದು. ಪ್ರಸ್ತುತ ಯೋಧರು ದೋಣಿಗಳಲ್ಲಿ ಗಸ್ತು ತಿರುಗುವ ಮೂಲಕ ಗಡಿಯಲ್ಲಿ ನಿಗಾ ವಹಿಸುತ್ತಿದ್ದಾರೆ ಎಂದು ಗಡಿ ಭದ್ರತಾ ಪಡೆಯ ಪ್ರಧಾನ ನಿರ್ದೇಶಕ ಕೆಕೆ ಶರ್ಮಾ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search