• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಕೀಲಿಕೆ ಓದಿದ ನಿಮಗೆ ನೀತಿ ಸಂಹಿತೆಯ ಜ್ಞಾನ ಇಲ್ಲವೇ?

TNN Correspondent Posted On April 13, 2018
0


0
Shares
  • Share On Facebook
  • Tweet It

ಮೈಸೂರು: ಸನ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಎಲ್ ಬಿ ಓದಿದವರು. ಕೆಲವು ವರ್ಷ ವಕೀಲಿಕೆಯನ್ನೂ ಮಾಡಿದವರು. ಮೇಲಾಗಿ ಕಾನೂನು ತಿಳಿದುಕೊಂಡವರು. ಇದೇ ಹೆಸರಲ್ಲಿ ಕೆಲವೊಮ್ಮೆ ಬಡಾಯಿಯನ್ನೂ ಕೊಚ್ಚಿಕೊಳ್ಳುವವರು.

ಆದರೆ ಇಷ್ಟೆಲ್ಲ ತಿಳಿದುಕೊಂಡಿರುವ, ಲಾಯರ್ ಆಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ನೀತಿ ಸಂಹಿತೆಯ ಬಗ್ಗೆ ಗೊತ್ತಿಲ್ಲವೇ ಎಂಬ ಅನುಮಾನ ಕಾಡುವಂತಹ ಪ್ರಕರಣವೊಂದು ಸುದ್ದಿಯಾಗಿದೆ.

ಹೌದು, ಎಚ್.ಡಿ.ಕೋಟೆ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿಬಡವರಿಗೆ ವಿತರಿಸುವ ತೊಗರಿ ಬೇಳೆ ಪ್ಯಾಕೆಟ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಡಿತರ ಪದಾರ್ಥಗಳ ಮೇಲೆ ಇರುವ ರಾಜಕಾರಣಿಗಳ ಭಾವಚಿತ್ರ ಮುಚ್ಚಿಸಿ ವಿತರಣೆ ಮಾಡಬೇಕು. ಆದರೆ ಸಿದ್ದರಾಮಯ್ಯನವರು ಮತದ ಆಸೆಗಾಗಿ ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಸೂಚಿಸದೆ, ಅಧಿಕಾರಿಗಳಿಂದಲೂ ಮಾಹಿತಿ ನೀಡಿಸದೆ ವಿತರಿಸುತ್ತಿದ್ದಾರೆ ಎಂದು ತಾಲೂಕು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ಕೂಡಲೇ ಈ ಕುರಿತು ಸುದ್ದಿಯಾಗುತ್ತಲೇ ಚುನಾವಣಾಧಿಕಾರಿ ನ್ಯಾಯಬೆಲೆ ಅಂಗಡಿಯವರಿಗೆ ಸೂಚನೆ ನೀಡಿದ್ದು, ಬಳಿಕ ಅಂಗಡಿ ಮಾಲೀಕರು ಪ್ಯಾಕೇಟ್ ಮೇಲಿದ್ದ ಸಿದ್ದರಾಮಯ್ಯನವರ ಭಾವಚಿತ್ರ ಕಾಣದಂತೆ ಸ್ಟಿಕ್ಕರ್ ಅಂಟಿಸಿದ್ದಾರೆ ಎಂದು ತಿಳಿದುಬಂದಿದೆ.

ಆದಾಗ್ಯೂ ಮತದ ಆಸೆಗಾಗಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇತ್ತೀಚೆಗೆ ಕುಕ್ಕರ್ ನೀಡುತ್ತಿದ್ದು, ಒಂದು ಲಾರಿ ಕುಕ್ಕರ್ ವಶಪಡಿಸಿಕೊಳ್ಳಲಾಗಿತ್ತು. ಈಗ ಮುಖ್ಯಮಂತ್ರಿ ಅವರ ಭಾವಚಿತ್ರ ಇರುವ ಪಡಿತರ ಧಾನ್ಯದ ಪ್ಯಾಕೆಟ್ ನೀಡಲಾಗುತ್ತಿದೆ. ಹೇಳಿ ಸಿದ್ದರಾಮಯ್ಯನವರೇ ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ? ನೀವು ಕಲಿತ ಕಾನೂನು ಕಾಲೇಜಿನಲ್ಲಿ ಇದನ್ನೆಲ್ಲ ಹೇಳಿಕೊಟ್ಟಿಲ್ಲವೇ ಅಥವಾ ಮತ ಪಡೆಯಲು ನೀವು ಮಾಡುತ್ತಿರುವ ತಂತ್ರವೇ?

 

 

 

0
Shares
  • Share On Facebook
  • Tweet It




Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search