• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಮಾತನಾಡದೆಯೇ ಮಾಡಿ ತೋರಿಸುವ ನರೇಂದ್ರ ಮೋದಿಗೆ ಮಾತಾಡಿ ಮಾತಾಡಿ ಎಂದು ಘೀಳಿಡುವುದೇಕೆ?

ವಿಶಾಲ್ ಗೌಡ ಕುಶಾಲನಗರ Posted On April 14, 2018
0


0
Shares
  • Share On Facebook
  • Tweet It

ಈ ಕಾಂಗ್ರೆಸ್ಸಿಗರೇ ಹಾಗೆ. ದೇಶವನ್ನು 60 ವರ್ಷ ಆಳುವ ಜತೆಗೆ ಹಾಳೂ ಮಾಡಿ ಈಗ ಸುಬಗರಂತೆ ಮಾತನಾಡುತ್ತಾರೆ. ಈ ದೇಶದ ಪ್ರಧಾನಿಯೊಬ್ಬರು 10 ವರ್ಷ ಮಾತೇ ಆಡದೆ ಆಳ್ವಿಕೆ ನಡೆಸಿದರೂ, ದೇಶದಲ್ಲಿ ಲಕ್ಷಾಂತರ ಕೋಟಿ ರೂ. ಹಗರಣ ನಡೆದರೂ, ನಿರ್ಭಯಾ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳು ನಡೆದರೂ ಪ್ರಧಾನಿಯೊಬ್ಬರು ಬಾಯಿಗೆ ಫೆವಿಕಾಲ್ ಹಾಕಿಕೊಂಡಂತೆ ಕೂತಿದ್ದರೂ ಕಾಂಗ್ರೆಸ್ಸಿಗರು ಸೊಲ್ಲೆತ್ತಲಿಲ್ಲ.

ಆದರೆ ಈಗ ನೋಡಿ, ದೇಶದ ಯಾವ ರಾಜ್ಯದಲ್ಲಿ ಅನಾಹುತ ನಡೆದರೂ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂಬಂತೆ ಬೊಬ್ಬೆ ಹೊಡೆಯುತ್ತಾರೆ. ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆಯ ವೈಫಲ್ಯದಿಂದ ಡಾ.ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆಯಾದರೂ, ಮೋದಿ ಅವರ ವಿರುದ್ಧವೇ ಆರೋಪಿಸುವ ಮೂಲಕ ಕಾಂಗ್ರೆಸ್ ತಾನೆಂತ ಕುತ್ಸಿತ ಮನಸ್ಸಿನ ಪಕ್ಷ ಎಂಬುದು ಸಾಬೀತುಪಡಿಸುತ್ತದೆ.

ಈಗಲೂ ಅಷ್ಟೇ, ಉನ್ನಾವೋ, ಕಥುವಾ ಎಂಬಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ಆರೋಪಿಗಳಿಗೆ ಶಿಕ್ಷೆ ವಿಧಿಸದೇ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೇ ಹೇಳಿದ್ದಾರೆ. ಹೀಗಿದ್ದರೂ, ಕಾಂಗ್ರೆಸ್ಸಿಗರು, ಕೆಲವು ಸೋ ಕಾಲ್ಡ್ ಬುದ್ಧಿಜೀವಿಗಳು ಮಾತ್ರ ಮೋದಿ ಈ ಕುರಿತು ಮಾತನಾಡುತ್ತಿಲ್ಲ, ಬಾಯಿಯೇ ಬಿಡುತ್ತಿಲ್ಲ ಎಂದು ಬೊಬ್ಬೆ ಹಾಕಿದರು.

ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯಾವ ಮೂಲೆಯಲ್ಲಿ ಅನಾಹುತ ನಡೆದರೂ, ಏನೇ ಆದರೂ ಮೊದಲು ಪ್ರತಿಕ್ರಿಯಿಸಬೇಕೆ? ಆಗೋ ಅನಿಷ್ಠಕ್ಕೆಲ್ಲ ಅವರೇ ಕಾರಣವೇ? ಅಥವಾ ಅವರ ಮೇಲೆಯೇ ಎಲ್ಲ ಹೊಣೆ ಇದೆಯೇ? ಮೋದಿ ಅವರೇ ಎಲ್ಲದಕ್ಕೂಉತ್ತರಿಸಬೇಕು ಎಂದು ಆಯಾ ರಾಜ್ಯ ಸರ್ಕಾರಗಳು ಇರುವುದು ಏಕೆ? ಅಷ್ಟಕ್ಕೂ ಮೋದಿ ಅವರು ಮಾತನಾಡದೆಯೇ ಎಲ್ಲ ಕೆಲಸ ಮಾಡುತ್ತಿದ್ದಾರಲ್ಲ, ಅದಕ್ಕೇನೆನ್ನುತ್ತಾರೆ ಈ ಕಾಂಗ್ರೆಸ್ಸಿಗರು?

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದರ ಕುರಿತು ಹಾಗೇ ಯೋಚನೆ ಮಾಡಿ ನೋಡಿ. 60 ವರ್ಷ ದೇಶವನ್ನು ಆಳಿದರೂ ಕಾಂಗ್ರೆಸ್ ಸ್ವಚ್ಛತೆ ಮಾಡುವುದು ಬಿಡಿ, ಆ ಕುರಿತು ಸಣ್ಣ ಜಾಗೃತಿ ಸಹ ಮೂಡಿಸಿರಲಿಲ್ಲ. ಭ್ರಷ್ಟಾಚಾರದ ಬೇರುಗಳು ದೇಶದ ಆಳಕ್ಕೆ ಹೋಗಿದ್ದವು. ತೆರಿಗೆ ವ್ಯವಸ್ಥೆ ದಲ್ಲಾಳಿಗಳಿಂದ ನಲುಗುತ್ತಿತ್ತು.

ಅದರೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಲೇ ಮೊದಲು ಕೈಗೊಂಡ ಪ್ರಮುಖ ನಿರ್ಧಾರವೇ ಸ್ವಚ್ಛ ಭಾರತ್ ಅಭಿಯಾನ. ಅದರ ಪರಿಣಾಮವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಶೌಚಾಲಯ ನಿರ್ಮಿಸಲಾಗಿದೆ. ಇನ್ನು ನೋಟು ನಿಷೇಧಗೊಳಿಸಿ ಭ್ರಷ್ಟರನ್ನು ಹೆಡೆಮುರಿಕಟ್ಟಿದ್ದು ಇದೇ ನರೇಂದ್ರ ಮೋದಿ. ಸರಕು ಮತ್ತು ಸೇವಾ ತೆರಿಗೆ ಮೂಲಕ ದೇಶದ ತೆರಿಗೆ ವ್ಯವಸ್ಥೆಯನ್ನು ಸುಧಾರಣೆಯತ್ತ ಕೊಂಡೊಯ್ಯುತ್ತಿರುವುದು ಇದೇ ಮೋದಿ ಅವರೇ.

ಮಾತನಾಡದೆಯೇ ದೇಶದ ಹಿತಕ್ಕಾಗಿ ಇಷ್ಟೆಲ್ಲ ಮಾಡುತ್ತಿರುವ ನರೇಂದ್ರ ಮೋದಿ ಅವರು, ಯಾವುದೇ ಅವಾಂತರ ಸಹ ಸಹಿಸಿಕೊಳ್ಳುವುದಿಲ್ಲ. ಮಾತನಾಡದೆಯೇ ಕ್ರಮ ಕೈಗೊಂಡು ಬಿಡುತ್ತಾರೆ.

ಇದಕ್ಕೆ ಜಮ್ಮು ಕಾಶ್ಮೀರದಲ್ಲಿ ಉಪಟಳ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಸರ್ಜಿಕಲ್ ಸ್ಟ್ರೈಕ್ ಮೂಲಕ ತಿರುಗೇಟು ನೀಡಿದ್ದು, ಡೋಕ್ಲಾಂ ಬಿಕ್ಕಟ್ಟು ಸೃಷ್ಟಿಸಿದ್ದ ಚೀನಾಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ನೀಡಿದ್ದು ಇದಕ್ಕೆ ಪ್ರಮುಖ ಉದಾಹರಣೆ.

ಇನ್ನು ತೀರಾ ಇತ್ತೀಚೆಗೆ ಬ್ಯಾಂಕುಗಳಿಗೆ ಮೋಸ ಮಾಡಿ ವಿದೇಶಕ್ಕೆ ಹಾರುವವರಿಗೂ ಮೋದಿ ಅವರು ಇದೇ ಗತಿ ಕಾಣಿಸಿದ್ದಾರೆ. ಅದಕ್ಕೆ ನೀರವ್ ಮೋದಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೇ ನಿದರ್ಶನ. ಹೇಳಿ ಮಾತನಾಡದೆಯೇ ಮೋದಿ ಇಷ್ಟೆಲ್ಲ ಮಾಡಲಿಲ್ಲವೇ?

ಸಂಸತ್ ಅಧಿವೇಶನಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ನರೇಂದ್ರ ಮೋದಿ ಅವರು ಉಪವಾಸ ಮಾಡಿ ಕಾಂಗ್ರೆಸ್ಸಿಗರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದು, ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಉನ್ನಾವೋ, ಕಥಾವೋ ಅತ್ಯಾಚಾರ ಪ್ರಕರಣದ ಕುರಿತು ಮೋದಿ ಮಾತಾಡಿಲ್ಲ ಮಾತಾಡಿಲ್ಲ ಎಂದು ಬೊಬ್ಬೆ ಹಾಕಿತು. ಕೊನೆಗೂ ಅಪರಾಧಿಗಳಿಗೆ ಶಿಕ್ಷೆ ವಿಧಿಸದೆ ಬಿಡುವುದಿಲ್ಲ ಎಂದು ಮೋದಿ ಅವರು ತಿಳಿಸಿದ್ದಾರೆ. ಈಗ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡು ತೆಪ್ಪಗಾಗಿದೆ.

 

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
ವಿಶಾಲ್ ಗೌಡ ಕುಶಾಲನಗರ May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
ವಿಶಾಲ್ ಗೌಡ ಕುಶಾಲನಗರ May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search