• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಪ್ರವಾಸಿಗಳಿಗೆ ರಾಯಭಾರಿ ಭೇಟಿಗೆ ಅವಕಾಶ ನೀಡದೇ ನಿಯಮ ಉಲ್ಲಂಘಿಸಿದ ಪಾಕ್

TNN Correspondent Posted On April 16, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನದಲ್ಲಿರುವ ಸಿಖ್ ಪುಣ್ಯಕ್ಷೇತ್ರಗಳ ಪ್ರವಾಸಕ್ಕೆ ಹೋಗಿರುವ ಭಾರತದ ಪ್ರವಾಸಿಗರಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳನ್ನು ಭೇಟಿಯಾಗಲು ಅವಕಾಶ ನೀಡದೇ ಪಾಕಿಸ್ತಾನ ಮತ್ತೊಮ್ಮೆ ತನ್ನ ಹೀನ ಮನಸ್ಥಿತಿಯನ್ನು ಅನಾವರಣಗೊಳಿಸಿದೆ. ಇನ್ನು ಈ ಕ್ರಮಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಭಾರತದ 1800 ಯಾತ್ರಿಕರು ಏ.12ರಿಂದ ಪಾಕಿಸ್ತಾನದಲ್ಲಿ ಸಿಖ್ ಧಾರ್ಮಿಕ ಕ್ಷೇತ್ರಗಳ ದರ್ಶನಕ್ಕೆ ಪ್ರವಾಸಕ್ಕೆ ಹೋಗಿದ್ದರು. ಇವರೆಲ್ಲರೂ ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿಯ ರಾಜತಾಂತ್ರಿಕ ಅಧಿಕಾರಿಗಳನ್ನು ಭೇಟಿ ನೀಡಲು ಭಯಸಿದ್ದಾರೆ. ಆದರೆ ಪಾಕಿಸ್ತಾನದ ಅಧಿಕಾರಿಗಳು ಭಾರತದ ರಾಜತಾಂತ್ರಿಕ ಅಧಿಕಾರಿಗಳ ಭೇಟಿಗೆ ಅವಕಾಶ ನೀಡದಿರುವುದು ಭಾರತದ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ಸಚಿವಾಲಯ ‘ಸಿಖ್ ರ ಪ್ರಮುಖ ಹಬ್ಬ ಬೈಸಾಕಿ ನಿಮಿತ್ತ ಪಾಕಿಸ್ತಾನದಲ್ಲಿರುವ ಧಾರ್ಮಿಕ ಕ್ಷೇತ್ರಗಳ ಪ್ರವಾಸಕ್ಕೆ ಹೋಗಲಾಗಿತ್ತು. ಎಲ್ಲರೂ ಶೀಘ್ರದಲ್ಲಿ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿಸಿದೆ. ಅಲ್ಲದೇ ಪಾಕಿಸ್ತಾನದ ಈ ನಡೆ ಭಾರತ ಮತ್ತು ಪಾಕ್ ಮಧ್ಯದ ರಾಜತಾಂತ್ರಿಕ ಸಂಬಂಧಕ್ಕೆ ಧಕ್ಕೆ ತರುವಂತಾದ್ದು, ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಆಗುವುದಿಲ್ಲ ಎಂದು ವಿದೇಶಾಂಗ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಭಾರತ ಇದನ್ನು ಖಂಡಿಸಿದ್ದು, ಈ ಕುರಿತು ದೆಹಲಿಯಲ್ಲಿರುವ ಪಾಕಿಸ್ತಾನದ ರಾಯಭಾರಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದೆ ಎಂದು ವಿದೇಶಾಂಗ ಇಲಾಖೆ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಇತ್ತೀಚೆಗೆ ನಡೆದ ರಾಯಭಾರಿ ಕಚೇರಿಗಳ ಕುರಿತ ಸಂಘರ್ಷದ ನಂತರ ಇದು ಪ್ರಥಮ ಘಟನೆಯಾಗಿದೆ. ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಪ್ರವಾಸಿಗರ ಭೇಟಿ ಕುರಿತ ನಿಯಮದ ಸ್ಪಷ್ಟ ಉಲ್ಲಂಘನೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search