• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆ ಪಠ್ಯದಲ್ಲಿ ಸೇರಿದವು ಭಗವದ್ಗೀತೆಯ ಅಧ್ಯಾಯಗಳು!

TNN Correspondent Posted On April 16, 2018
0


0
Shares
  • Share On Facebook
  • Tweet It

ಜೈಪುರ: ಪ್ರತೀ ಭಾರತೀಯನೂ ಓದಬೇಕಾದ ಪುಸ್ತಕ ಹಾಗೂ ಧರ್ಮಗ್ರಂಥ ಎಂದರೆ ಅದು ಭಗವದ್ಗೀತೆ. ಆದರೆ ಆಧುನಿಕ ಪಠ್ಯಕ್ರಮ, ಸ್ಪರ್ಧಾತ್ಮಕ ಜಗತ್ತು, ಮಕ್ಕಳ ಮನಸ್ಥಿತಿ ಬದಲಾಗಿದ್ದು, ಬಹುತೇಕ ವಿದ್ಯಾರ್ಥಿಗಳು ಭಗವದ್ಗೀತೆ ಓದುವುದಿಲ್ಲ. ಅದರ ಸಂದೇಶ ಅರಿಯುವುದಿಲ್ಲ.

ಆದರೆ ಇದನ್ನು ಮನಗಂಡಿರುವ ರಾಜಸ್ಥಾನ ಸರ್ಕಾರ ಈಗ ತಾನು ನಡೆಸುವ ರಾಜಸ್ಥಾನ ಆಡಳಿತ ಸೇವೆ ಪರೀಕ್ಷೆಯಾದ ರಾಜಸ್ಥಾನ ಲೋಕಸೇವಾ ಆಯೋಗದ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿದೆ.

ಹಾಗಂತ ಸುಖಾಸುಮ್ಮನೆ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಅಧ್ಯಾಯಗಳನ್ನು ಸೇರಿಸಿಲ್ಲ. ಭಗವದ್ಗೀತೆಯಲ್ಲಿ ಆಡಳಿತ ಮತ್ತು ನಿರ್ವಹಣೆ ಕುರಿತು ಇರುವ ಅಂಶಗಳನ್ನು ಗುರುತಿಸಿ ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮುಂದೆ ಅಧಿಕಾರಿಯಾದ ಬಳಿಕ ನಿರ್ವಹಣೆ ಹಾಗೂ ಆಡಳಿತದಲ್ಲಿ ದಕ್ಷತೆ ಕಾಪಾಡಿಕೊಳ್ಳಲಿ, ಭಗವದ್ಗೀತೆಯ ಸಾತ್ವಿಕ ವಿಚಾರಗಳನ್ನು ಅಭ್ಯರ್ಥಿಗಳನ್ನು ಅವುಗಳನ್ನು ಅಳವಡಿಸಿಕೊಂಡು ಯಶಸ್ವಿ ಅಧಿಕಾರಿಯಾಗಲಿ ಎಂಬ ದೃಷ್ಟಿಯಿಂದ ಪಠ್ಯಕ್ರಮದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಪಠ್ಯಕ್ರಮದ ಆಡಳಿತ ಮತ್ತು ನಿರ್ವಹಣೆ ವಿಷಯದಲ್ಲಿ ಒಂದು ಘಟಕ ಸೇರಿಸಿದ್ದು, ಅದರಲ್ಲಿ ನಿರ್ವಹಣೆ ಮತ್ತು ಆಡಳಿತದಲ್ಲಿ ಭಗವದ್ಗೀತೆಯ ಪಾತ್ರ ಎಂಬ ಉಪ ಘಟಕವನ್ನು ಸೇರಿಸಲಾಗಿದೆ. ಅಷ್ಟೇ ಅಲ್ಲ, ಕುರುಕ್ಷೇತ್ರದಲ್ಲಿ ಯುದ್ಧ ಆರಂಭವಾಗುವ ಮುನ್ನ ಕೃಷ್ಣ ಮತ್ತು ಅರ್ಜುನನ ನಡುವೆ ನಡೆಯುವ ಕುರಿತು 18 ಅಧ್ಯಾಯಗಳನ್ನು ಸೇರಿಸಲಾಗಿದೆ.

ಒಟ್ಟಿನಲ್ಲಿ ಇಷ್ಟು ದಿನ ಭಗವದ್ಗೀತೆ ಎಂದರೆ ಅಷ್ಟು ದೊಡ್ಡ ಪುಸ್ತಕವನ್ನು ಯಾರು ಓದುತ್ತಾರೆ ಎಂಬ ನಿರ್ಲಕ್ಷ್ಯ ಮನೋಭಾವನೆ ತೊಲಗಿಸಲು ರಾಜಸ್ಥಾನ ಸರ್ಕಾರ ಆಡಳಿತ ಸೇವೆ ಪಠ್ಯದಲ್ಲಿ ಭಗವದ್ಗೀತೆ ಅಧ್ಯಾಯ ಸೇರಿಸಿದ್ದು, ಇದು ದಕ್ಷ ಅಧಿಕಾರಿಯಾಗಲು ಸಹಕರಿಸುವ ಜತೆಗೆ ಜೀವನದಲ್ಲಿ ಉತ್ತಮ ಮೌಲ್ಯ ಕಟ್ಟಿಕೊಡುವುದರಲ್ಲಿ ಎರಡು ಮಾತಿಲ್ಲ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search