• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮೋದಿಯ 56 ಇಂಚಿನ ಎದೆಯನ್ನು ಎದುರಿಸಲು 3 ತಿಂಗಳಲ್ಲೇ ಸಿದ್ದರಾಮಯ್ಯ ಖರ್ಚು ಮಾಡಿದ್ದು 56 ಕೋಟಿ

TNN Correspondent Posted On April 17, 2018
0


0
Shares
  • Share On Facebook
  • Tweet It

ಬೆಂಗಳೂರು: ಈ ಮೇಲಿನ ಸಂಖ್ಯೆಗಳನ್ನು ನೋಡಿದರೇ ಒಂದು ಕ್ಷಣ ಅವಕ್ಕಾಗಬಹುದು. ಎಲ್ಲಿಯ ಮೋದಿಯ 56 ಇಂಚಿನ ಎದೆ, ಎಲ್ಲಿಯ ಸಿದ್ದರಾಮಯ್ಯ ಸರ್ಕಾರ. ಈ ಸಂಖ್ಯೆಗಳು ಕಾಕತಾಳಿಯ. ಆದರೆ ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಬಿಜೆಪಿಯ ಅಲೆಯನ್ನು ಎದುರಿಸಲು ರಾಜ್ಯದ ಮಾಧ್ಯಮ ಸಂಸ್ಥೆಗಳಿಗೆ ಜಾಹಿರಾತು ನೀಡಲು ಕಳೆದ ಮೂರು ತಿಂಗಳಲ್ಲಿ ಖರ್ಚು ಮಾಡಿದ್ದು ಒಟ್ಟು 56 ಕೋಟಿ ರೂಪಾಯಿ. ಸಿದ್ದರಾಮಯ್ಯ ಜನರನ್ನು ಸೆಳೆಯಲು ಕಳೆದ ಮೂರು ತಿಂಗಳಲ್ಲಿ ಜಾಹೀರಾತಿಗಾಗಿ ಖರ್ಚು ಮಾಡಿದ್ದು, 56 ಕೋಟಿ ರೂಪಾಯಿ ಎಂಬ ಮಾಹಿತಿ ಆರ್ ಟಿಐ ನಿಂದ ಬಹಿರಂಗವಾಗಿದೆ.

ಐದು ವರ್ಷದಲ್ಲಿ ಕಾಂಗ್ರೆಸ್ ಮಾಡಿರುವ ಸಾಧನೆಗಳನ್ನು ಕೇವಲ ಮೂರು ತಿಂಗಳಲ್ಲಿ ಜನರಿಗೆ ತಿಳಿಸಲು ಸಿದ್ದರಾಮಯ್ಯ ಸರ್ಕಾರ ಮಾಡಿರುವ ಖರ್ಚು ಹಲವು ಅನುಮಾನಗಳನ್ನು ಮೂಡಿಸಿದೆ. 56 ಎದೆಯಿಂಚಿನ ನರೇಂದ್ರ ಮೋದಿ ಪ್ರಚಾರಕ್ಕೆ ಬರುವರು ಎಂಬ ಭೀತಿಯಿಂದ ರಾಜ್ಯ ಸರ್ಕಾರ ಈ ಮಟ್ಟಕ್ಕೆ ಹಣ ಖರ್ಚು ಮಾಡಿರಬಹುದಾ ಎಂಬ ಅನುಮಾನ ಮೂಡಿಸಿದೆ.

ಮಾಹಿತಿ ಹಕ್ಕಿನಡಿ ದೊರಕಿರುವ ಉತ್ತರದ ಪ್ರಕಾರ ‘ಕೇವಲ ಇಲಾಖಾವಾರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಿ, ಮತ ಪಡೆಯುವ ಹುನ್ನಾರ. ಚುನಾವಣೆಯ ಹೊತ್ತಿನಲ್ಲಿ ನಡೆದಿರುವುದು ಸ್ಪಷ್ಟವಾಗಿದೆ. ಮಾಧ್ಯಮಗಳು, ಆಟೋ, ಬಸ್ ಗಳ ಮೇಲೆ ಪೋಸ್ಟರ್, ಎಲ್ ಇಡಿ ಮೊಬೈಲ್ ವ್ಯಾನ್ ಗಳು, ಎಲ್ ಇಡಿ ಹೋಲ್ಡಿಂಗ್ಸ್ ಗಳನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದು, ಜನರ ಹಣವನ್ನು ಬೇಕಾಬಿಟ್ಟಿಯಾಗಿ ಪ್ರಚಾರಕ್ಕೆ ಬಳಸಿರುವುದು ಸ್ಪಷ್ಟವಾಗಿದೆ.

ಸಿದ್ದರಾಮಯ್ಯ ಸಂಪುಟದ ಸಚಿವರಾದ ಎಂಬಿ ಪಾಟೀಲ್ ಮತ್ತು ಕೆ.ಜೆ.ಜಾರ್ಜ್ ಒಂದು ಹೆಜ್ಜೆ ಮುಂದು ಹೋಗಿ ಡಿಜಿಟಲ್ ಪ್ರಚಾರ ಕೈಗೊಂಡರು. ಟಿವಿಗಳಿಗೂ ಜಾಹಿರಾತು ನೀಡಿದ್ದರು. ಇವರು ಪ್ರತ್ಯೇಕವಾಗಿ ಇಲಾಖಾವಾರು ಹಣ ಬಳಸಿಕೊಂಡಿದ್ದಾರೆ.

ಡಿಸೆಂಬರ್ 1ರಿಂದ ಮಾರ್ಚ್ 20ರವರೆಗೆ ಅಂದರೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವವರೆಗೆ ರಾಜ್ಯ ಸರ್ಕಾರ ಒಟ್ಟು 56 ಕೋಟಿ ರೂಪಾಯಿ ಜನರ ತೆರಿಗೆ ಹಣವನ್ನು ತನ್ನ ಪ್ರಚಾರಕ್ಕಾಗಿ ಬಳಸಿಕೊಂಡಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search