• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಾಯ್ ವಾಲಾನನ್ನು ಹೀಯಾಳಿಸುವವರೇ ಕೇಳಿ.. ಪುಣೆಯ ಟೀ ಮಾರಾಟಗಾರರ ತಿಂಗಳ ಆದಾಯ 12 ಲಕ್ಷ

TNN Correspondent Posted On April 18, 2018
0


0
Shares
  • Share On Facebook
  • Tweet It

ಪುಣೆ: ಭಾರತ ಪ್ರಧಾನಿ ನರೇಂದ್ರ ಮೋದಿ ಒಂದು ಕಾಲದಲ್ಲಿ ರೈಲು ನಿಲ್ದಾಣದಲ್ಲಿ ಟೀ ಮಾರುತ್ತಿದ್ದರು. ಮುಂದೇ ಅವರು ಸಮಾಜಸೇವೆಯಲ್ಲಿ ಸಕ್ರಿಯರಾಗಿ ಗುಜರಾತ್ ಮುಖ್ಯಮಂತ್ರಿಯಾಗಿ ನಿರಂತರವಾಗಿ ಮೂರು ಭಾರಿ ಆಯ್ಕೆಯಾದರು. ಅಲ್ಲದೇ ಇದೀಗ ಪ್ರಧಾನ ಮಂತ್ರಿಗಳಾಗಿ ವಿಶ್ವವೇ ಮೆಚ್ಚುವ ಆಡಳಿತ ನೀಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಟೀ ಮಾರುವುದನ್ನು ಹೀಯಾಳಿಸಿದ ಕಾಂಗ್ರೆಸ್ಸಿಗರು ತಮ್ಮ ಹೀನ ಮನಸ್ಥಿತಿ ಹೊರ ಹಾಕಿದ್ದರು. ಅಲ್ಲದೇ ಇತ್ತೀಚೆಗೆ ನರೇಂದ್ರ ಮೋದಿ ಸ್ವಾಭಿಮಾನಿಯಾಗಿ ಬದುಕುವುದನ್ನು ಇಟ್ಟುಕೊಂಡು ಪಕೋಡ ಮಾರುವ ಉದ್ಯೋಗವೂ ಉತ್ತಮ ಎಂದು ಹೇಳಿದ್ದರು.

ಮೋದಿ ಅವರ ಪಕೋಡ ಹೇಳಿಕೆಯನ್ನು ಹೀಯಾಳಿಸುವ ಮೂಲಕ ಕಾಂಗ್ರೆಸ್ಸಿಗರು ತಳಮಟ್ಟದಲ್ಲಿ ಪಕೋಡ ಮಾರುತ್ತಿರುವವರಿಗೆ ಅಪಮಾನ ಮಾಡಿತ್ತು.  ಇದೀಗ ಮತ್ತೊಂದು ಸುದ್ದಿಯೊಂದು ಪುಣೆಯಿಂದ ಬಂದಿದ್ದು ಒಬ್ಬ ಟೀ ಮಾರಾಟಗಾರ ತಿಂಗಳಿಗೆ 12 ಲಕ್ಷ ಆದಾಯ ಪಡೆಯುವ ಮೂಲಕ ಟೀ ಮಾರಾಟಗಾರರನ್ನು ಹೀಯಾಳಿಸುವವರಿಗೆ ತನ್ನ ಸಾಧನೆಯಿಂದಲೇ ಉತ್ತರ ನೀಡಿದ್ದಾರೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಲಾಸ್ಟ್ ಬೆಂಚ್ ನಲ್ಲಿ ಕುಳಿತುಕೊಳ್ಳುತ್ತಿದ್ದ ವ್ಯಕ್ತಿ, ಎಲ್ಲರೂ ಕೀಳಾಗಿ ಕಾಣುತ್ತಿದ್ದ ಯುವಕ ಇದೀಗ ತನ್ನ ಟೀ ಅಂಗಡಿಯಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿ ತಿಂಗಳಿಗೆ 12 ಲಕ್ಷ ಆದಾಯ ಪಡೆಯುತ್ತಿದ್ದಾನೆ. ಪುಣೆ ನಗರದಲ್ಲಿ ಪ್ರಖ್ಯಾತಿ ಪಡೆದಿರುವ ನವ್ಲೇ ಟೀ ಅಂಗಡಿಯ ಮಾಲೀಕನೇ ಈ ಸಾಧಕ ನವನಾಥ ಯವ್ಲೇ.

ತನ್ನ ಟೀ ಅಂಗಡಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಬೇಕು ಎಂಬುದು ನವನಾಥ ಯವ್ಲೇ ಅವರು ಗುರಿ ಹೊಂದಿದ್ದಾರೆ. ಅಲ್ಲದೇ ಈ ಉದ್ಯೋಗ ನನಗೆ ಲಾಭ ನೀಡುವ ಜೊತೆಗೆ ಹಲವರಿಗೆ ಉದ್ಯೋಗ ದೊರಕಿಸಿಕೊಟ್ಟಿದೆ. ಪಕೋಡಾ ಮಾರಾಟ, ಟೀ ಮಾರಾಟವೂ ಸಹ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಅಲ್ಲದೇ ವೇಗವಾಗಿ ಕಡಿಮೆ ಖರ್ಚಿನಲ್ಲಿ ಉದ್ಯಮ ಆರಂಭಿಸಬಹು ಎನ್ನುತ್ತಾರೆ ನವನಾಥ ಯವ್ಲೇ.

2011ರಲ್ಲಿ ಗೆಳೆಯದೊಂದಿಗೆ ಟೀ ಉದ್ಯಮ ಆರಂಭಿಸಿದ ಯವ್ಲೇ ‘ನಾಲ್ಕು ವರ್ಷ ನಮ್ಮ ಟೀ ಹೇಗೆ ಇರಬೇಕು ಎಂಬುದರ ಕುರಿತು ಸಂಶೋಧನೆ ನಡೆಸಿ, ಚರ್ಚೆ ನಡೆಸಿದ ನಂತರ ನಮ್ಮ ಬ್ರ್ಯಾಂಡ್ ಸೃಷ್ಟಿಸಿದ್ದೇವೆ. ಇದೀಗ ಪುಣೆಯಲ್ಲಿ   ಎರಡು ಕೇಂದ್ರಗಳನ್ನು ಆರಂಭಿಸಿದ್ದು, ನಿತ್ಯ ಮೂರು ಸಾವಿರದಿಂದ ನಾಲ್ಕು ಸಾವಿರ ಟೀ ಕಪ್ ಮಾರಾಟ ಮಾಡುತ್ತೇವೆ. ತಿಂಗಳಿಗೆ 10 ರಿಂದ 12 ಲಕ್ಷ ಆದಾಯ ಪಡೆಯುತ್ತಿದ್ದೇವೆ. ಇದನ್ನು ವಿಶ್ವದರ್ಜೆಯ ಬ್ರ್ಯಾಂಡ್ ಆಗಿ ರೂಪಿಸುವ ಇರಾದೆ ಎನ್ನುತ್ತಾರೆ ನವನಾಥ ಯವ್ಲೇ.

https://www.youtube.com/watch?v=PkaXGpbiSyU

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search