• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಾಯ್ ವಾಲಾನನ್ನು ಹೀಯಾಳಿಸುವವರೇ ಕೇಳಿ.. ಪುಣೆಯ ಟೀ ಮಾರಾಟಗಾರರ ತಿಂಗಳ ಆದಾಯ 12 ಲಕ್ಷ

TNN Correspondent Posted On April 18, 2018
0


0
Shares
  • Share On Facebook
  • Tweet It

ಪುಣೆ: ಭಾರತ ಪ್ರಧಾನಿ ನರೇಂದ್ರ ಮೋದಿ ಒಂದು ಕಾಲದಲ್ಲಿ ರೈಲು ನಿಲ್ದಾಣದಲ್ಲಿ ಟೀ ಮಾರುತ್ತಿದ್ದರು. ಮುಂದೇ ಅವರು ಸಮಾಜಸೇವೆಯಲ್ಲಿ ಸಕ್ರಿಯರಾಗಿ ಗುಜರಾತ್ ಮುಖ್ಯಮಂತ್ರಿಯಾಗಿ ನಿರಂತರವಾಗಿ ಮೂರು ಭಾರಿ ಆಯ್ಕೆಯಾದರು. ಅಲ್ಲದೇ ಇದೀಗ ಪ್ರಧಾನ ಮಂತ್ರಿಗಳಾಗಿ ವಿಶ್ವವೇ ಮೆಚ್ಚುವ ಆಡಳಿತ ನೀಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಟೀ ಮಾರುವುದನ್ನು ಹೀಯಾಳಿಸಿದ ಕಾಂಗ್ರೆಸ್ಸಿಗರು ತಮ್ಮ ಹೀನ ಮನಸ್ಥಿತಿ ಹೊರ ಹಾಕಿದ್ದರು. ಅಲ್ಲದೇ ಇತ್ತೀಚೆಗೆ ನರೇಂದ್ರ ಮೋದಿ ಸ್ವಾಭಿಮಾನಿಯಾಗಿ ಬದುಕುವುದನ್ನು ಇಟ್ಟುಕೊಂಡು ಪಕೋಡ ಮಾರುವ ಉದ್ಯೋಗವೂ ಉತ್ತಮ ಎಂದು ಹೇಳಿದ್ದರು.

ಮೋದಿ ಅವರ ಪಕೋಡ ಹೇಳಿಕೆಯನ್ನು ಹೀಯಾಳಿಸುವ ಮೂಲಕ ಕಾಂಗ್ರೆಸ್ಸಿಗರು ತಳಮಟ್ಟದಲ್ಲಿ ಪಕೋಡ ಮಾರುತ್ತಿರುವವರಿಗೆ ಅಪಮಾನ ಮಾಡಿತ್ತು.  ಇದೀಗ ಮತ್ತೊಂದು ಸುದ್ದಿಯೊಂದು ಪುಣೆಯಿಂದ ಬಂದಿದ್ದು ಒಬ್ಬ ಟೀ ಮಾರಾಟಗಾರ ತಿಂಗಳಿಗೆ 12 ಲಕ್ಷ ಆದಾಯ ಪಡೆಯುವ ಮೂಲಕ ಟೀ ಮಾರಾಟಗಾರರನ್ನು ಹೀಯಾಳಿಸುವವರಿಗೆ ತನ್ನ ಸಾಧನೆಯಿಂದಲೇ ಉತ್ತರ ನೀಡಿದ್ದಾರೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಲಾಸ್ಟ್ ಬೆಂಚ್ ನಲ್ಲಿ ಕುಳಿತುಕೊಳ್ಳುತ್ತಿದ್ದ ವ್ಯಕ್ತಿ, ಎಲ್ಲರೂ ಕೀಳಾಗಿ ಕಾಣುತ್ತಿದ್ದ ಯುವಕ ಇದೀಗ ತನ್ನ ಟೀ ಅಂಗಡಿಯಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿ ತಿಂಗಳಿಗೆ 12 ಲಕ್ಷ ಆದಾಯ ಪಡೆಯುತ್ತಿದ್ದಾನೆ. ಪುಣೆ ನಗರದಲ್ಲಿ ಪ್ರಖ್ಯಾತಿ ಪಡೆದಿರುವ ನವ್ಲೇ ಟೀ ಅಂಗಡಿಯ ಮಾಲೀಕನೇ ಈ ಸಾಧಕ ನವನಾಥ ಯವ್ಲೇ.

ತನ್ನ ಟೀ ಅಂಗಡಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಬೇಕು ಎಂಬುದು ನವನಾಥ ಯವ್ಲೇ ಅವರು ಗುರಿ ಹೊಂದಿದ್ದಾರೆ. ಅಲ್ಲದೇ ಈ ಉದ್ಯೋಗ ನನಗೆ ಲಾಭ ನೀಡುವ ಜೊತೆಗೆ ಹಲವರಿಗೆ ಉದ್ಯೋಗ ದೊರಕಿಸಿಕೊಟ್ಟಿದೆ. ಪಕೋಡಾ ಮಾರಾಟ, ಟೀ ಮಾರಾಟವೂ ಸಹ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಅಲ್ಲದೇ ವೇಗವಾಗಿ ಕಡಿಮೆ ಖರ್ಚಿನಲ್ಲಿ ಉದ್ಯಮ ಆರಂಭಿಸಬಹು ಎನ್ನುತ್ತಾರೆ ನವನಾಥ ಯವ್ಲೇ.

2011ರಲ್ಲಿ ಗೆಳೆಯದೊಂದಿಗೆ ಟೀ ಉದ್ಯಮ ಆರಂಭಿಸಿದ ಯವ್ಲೇ ‘ನಾಲ್ಕು ವರ್ಷ ನಮ್ಮ ಟೀ ಹೇಗೆ ಇರಬೇಕು ಎಂಬುದರ ಕುರಿತು ಸಂಶೋಧನೆ ನಡೆಸಿ, ಚರ್ಚೆ ನಡೆಸಿದ ನಂತರ ನಮ್ಮ ಬ್ರ್ಯಾಂಡ್ ಸೃಷ್ಟಿಸಿದ್ದೇವೆ. ಇದೀಗ ಪುಣೆಯಲ್ಲಿ   ಎರಡು ಕೇಂದ್ರಗಳನ್ನು ಆರಂಭಿಸಿದ್ದು, ನಿತ್ಯ ಮೂರು ಸಾವಿರದಿಂದ ನಾಲ್ಕು ಸಾವಿರ ಟೀ ಕಪ್ ಮಾರಾಟ ಮಾಡುತ್ತೇವೆ. ತಿಂಗಳಿಗೆ 10 ರಿಂದ 12 ಲಕ್ಷ ಆದಾಯ ಪಡೆಯುತ್ತಿದ್ದೇವೆ. ಇದನ್ನು ವಿಶ್ವದರ್ಜೆಯ ಬ್ರ್ಯಾಂಡ್ ಆಗಿ ರೂಪಿಸುವ ಇರಾದೆ ಎನ್ನುತ್ತಾರೆ ನವನಾಥ ಯವ್ಲೇ.

https://www.youtube.com/watch?v=PkaXGpbiSyU

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search