• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚುನಾವಣೆಗೂ ಐದು ದಿನದ ಮೊದಲು ಮಂಗಳೂರಿನಲ್ಲಿ ಮೋದಿ ಮೋಡಿ, ಮಾಡಲಿದ್ದಾರೆ ಅಬ್ಬರದ ಪ್ರಚಾರ

TNN Correspondent Posted On April 18, 2018


  • Share On Facebook
  • Tweet It

ರಾಜ್ಯದಲ್ಲಿ ಬೇಸಗೆ ಬಿಸಿಲಿಗಿಂತ ಚುನಾವಣೆ ಕಾವೇ ಜಾಸ್ತಿ ಇದೆ ಎನ್ನುವಷ್ಟರ ಮಟ್ಟಿಗೆ ಚುನಾವಣೆ ರಂಗೇರಿದೆ. ಮೂರೂ ಪಕ್ಷಗಳು ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಡಳಿತ ವಿರೋಧಿ ಅಲೆ ತಲೆನೋವಾಗಿದ್ದರೆ, ಜೆಡಿಎಸ್ ಗೆ ಅಸ್ತಿತ್ವದ ಪ್ರಶ್ನೆಯಾಗಿದೆ. ಅತ್ತ ಬಿಜೆಪಿ ಈ ಬಾರಿ ಗೆಲುವು ನಮ್ಮದೇ ಎಂದು ಆತ್ಮವಿಶ್ವಾಸದಲ್ಲಿದ್ದಾರೆ. ಜನಬೆಂಬಲವೂ ಮೇಲ್ನೋಟಕ್ಕೆ ಬಿಜೆಪಿಗೇ ಇದೆ ಎಂಬುದು ಕಾಣುತ್ತಿದೆ.

ಇದಕ್ಕೆ ರಾಜ್ಯದಲ್ಲಿ ಯಡಿಯೂರಪ್ಪನವರಿಗೆ ಇರುವ ಬೆಂಬಲ, ಚುನಾವಣಾ ಚಾಣಾಕ್ಯ ಅಮಿತ್ ಷಾ ಬಿಡುವಿಲ್ಲದ ಪ್ರವಾಸ, ನರೇಂದ್ರ ಮೋದಿ ಅವರ ಅಲೆಯೇ ಕಾರಣ ಎಂಬುದು ರಾಜಕೀಯ ತಜ್ಞರ ಅಂಬೋಣ.

ಇದಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣೆಗೆ ಐದು ದಿನ ಮೊದಲು ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದು, ಕರಾವಳಿಯಲ್ಲಿ ಈ ಬಾರಿ ಬಿಜೆಪಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಲು ಈ ಪ್ರಚಾರ ಸಹಕಾರಿಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಆದಾಗ್ಯೂ ಕರಾವಳಿಯಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಐದು ದಿನ ಮೊದಲು, ಅಂದರೆ ಏಪ್ರಿಲ್ 7ರಂದು ಮಂಗಳೂರಿಗೆ ಆಗಮಿಸಲಿದ್ದು, ಅಬ್ಬರದ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಈ ಭಾಗದ ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಜನರಲ್ಲಿ ನಿರೀಕ್ಷೆ ಹುಟ್ಟಿದೆ.

ಮೇ 8ರಂದು ಸಹ ಮೋದಿ ಅವರು ಮಂಗಳೂರಿನ ವಿವಿಧ ಭಾಗಗಳಲ್ಲಿ ಮತಯಾಚನೆ, ರ್ಯಾಲಿ ನಡೆಸಲಿದ್ದು, ಸ್ಟಾರ್ ಪ್ರಚಾರಕರಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಶತಾಯ ಗತಾಯ ಈ ಬಾರಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಗೊಳಿಸುವ ಕನಸು ಹೊತ್ತಿರುವ ಬಿಜೆಪಿಗೆ ಮೋದಿ ಭೇಟಿ ಮತ್ತಷ್ಟು ಶಕ್ತಿ ತುಂಬಲಿದೆ ಎಂದೇ ಹೇಳಲಾಗುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search