• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆರೋಗ್ಯ ಇಲಾಖೆಯಲ್ಲಿ ಕೇಂದ್ರದ ಕ್ರಾಂತಿಕಾರಿ ನಿರ್ಧಾರ, ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿದ್ದರೇ ಹುಷಾರ್!

TNN Correspondent Posted On April 20, 2018
0


0
Shares
  • Share On Facebook
  • Tweet It

ದೆಹಲಿ: ವಿಶ್ವದ ಇತಿಹಾಸದಲ್ಲೇ ಅತಿ ದೊಡ್ಡ ಆರೋಗ್ಯ ವಿಮೆಯನ್ನು ಜಾರಿಗೆ ತರುವ ಮೂಲಕ ಗಮನ ಸೆಳೆದಿದ್ದ ಕೇಂದ್ರ ಸರ್ಕಾರ ಇದೀಗ ಸಾರ್ವಜನಿಕ ಆಸ್ಪತ್ರೆಗಳ ಸ್ಥಿತಿ ಗತಿಗಳ ಕುರಿತ ಮಾಹಿತಿಯನ್ನು ಜನಸಾಮಾನ್ಯರ ಕೈ ಬೆರಳಲ್ಲೆ ದೊರಕುವಂತೆ ಮತ್ತು ದೂರು ನೀಡಲು ‘ಮೈ ಆಸ್ಪತ್ತಾಲ್ ಆ್ಯಪ್’ನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧಪಡಿಸಿದೆ.

ಸಂಕಷ್ಟದಲ್ಲಿರುವ ಸಾರ್ವಜನಿಕರು ನಿತ್ಯ ಸರ್ಕಾರಿ ಆಸ್ಪತ್ರೆಗೆ ಪರದಾಡುವುದು ಸಾಮಾನ್ಯ. ಕೆಲವು ಆಸ್ಪತ್ರೆಗಳಲ್ಲಿ ಸರಿಯಾದ ವ್ಯವಸ್ಥೆ ದೊರೆಯದೇ ಜನ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸ್ಥಿತಿ ಇದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ದಿಟ್ಟ ನಿರ್ಧಾರವನ್ನು ಕೈಗೊಂಡಿದ್ದು, ಸಾರ್ವಜನಿಕರ ಆಸ್ಪತ್ರೆಗಳ ಮಾಹಿತಿಯನ್ನು ಇಲಾಖೆ ಹಿರಿಯ ಅಧಿಕಾರಿಗಳಿಗೆ ತಿಳಿಸಲು ಆ್ಯಪ್ ಸಿದ್ಧಪಡಿಸಲಾಗಿದೆ. ಇದರಿಂದ ಜನರು ನೇರವಾಗಿ ಆಸ್ಪತ್ರೆಗಳ ಸಮಸ್ಯೆಗಳ ಮತ್ತು ಉತ್ತಮ ಸೌಲಭ್ಯದ ಬಗ್ಗೆ ಶ್ಲಾಘನೀಯ ಮಾತುಗಳನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಬಹುದು.

ಆ್ಯಪ್ ನಿಂದ ಸಾರ್ವಜನಿಕರು ನೀಡಿದ ದೂರು ಅಥವಾ ಶ್ಲಾಘನೆಯನ್ನು ಪರಿಗಣಿಸಿ ಸರ್ಕಾರ ಸೂಕ್ತ ಸೌಲಭ್ಯ ನೀಡುವುದು, ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಉತ್ತಮ ಸೌಲಭ್ಯ ಸೌಲಭ್ಯ ಒದಗಿಸುವುದು, ಬಹುಮಾನ ನೀಡಿ ಪ್ರೋತ್ಸಾಹಿಸಲು ಕೇಂದ್ರ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಈ ಯೋಜನೆಯಿಂದ ಜನರು ಆಸ್ಪತ್ರೆಯಲ್ಲಿ  ಸೂಕ್ತ ಸೌಲಭ್ಯ ದೊರೆಯದೇ ಸಂಕಷ್ಟದಲ್ಲಿದ್ದರೇ ನೇರವಾಗಿ ಅಧಿಕಾರಿಗಳಿಗೆ ಸಂಪರ್ಕಿಸಬಹುದು. ಇದೊಂದು ಕ್ರಾಂತಿಕಾರಿ ನಿರ್ಧಾರವಾಗಿದ್ದು, ಬಡ ಜನರಿಗೆ ಅನುಕೂಲವಾಗಲಿದೆ. ಅಲ್ಲದೇ ಸೂಕ್ತ ಸೌಲಭ್ಯ ನೀಡದೇ ಸತಾಯಿಸುವ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ತಕ್ಕ ಪಾಠ ಕಲಿಸಲು ಅವಕಾಶ ನೀಡುತ್ತದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search