• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ ಪುರಾತನ ಶಿಕ್ಷಣ ಪದ್ಧತಿಗೆ ಜಾಗತಿಕ ಸಮಸ್ಯೆ ಬಗೆಹರಿಸುವ ಶಕ್ತಿ ಇದೆ ಎಂದಿದ್ದು ಯಾರು ಗೊತ್ತೇ?

TNN Correspondent Posted On April 23, 2018


  • Share On Facebook
  • Tweet It

ನವದೆಹಲಿ: ಭಾರತೀಯ ಸಂಸ್ಕೃತಿ, ಆಚಾರ, ವಿಚಾರ, ನಡೆ-ನುಡಿ, ಉಡುಗೆ-ತೊಡುಗೆ, ಜ್ಞಾನ ಸಂಪತ್ತು ಎಂದರೆ ಇಡೀ ವಿಶ್ವವೇ ತಲೆದೂಗುತ್ತದೆ. ಮೆಚ್ಚುಗೆಯ ಮಾತು ಕೇಳಿಬರುತ್ತವೆ. ಆದರೂ ಭಾರತದಲ್ಲಿರುವ ಕೆಲವು ಕುತ್ಸಿತ ಮನಸ್ಸುಗಳು ನಮ್ಮ ದೇಶದ ವಿರುದ್ಧವೇ ಮಾತನಾಡುತ್ತವೆ ಎಂಬುದೇ ಬೇಸರ.

ಆದರೇನಂತೆ, ಇತಿಹಾಸದ ಆರಂಭದ ದಿನಗಳಿಂದಲೇ ಭಾರತದ ಮೇಲೆ, ಭಾರತೀಯತೆಯ ಮೇಲೆ ಹಲವರು ದಾಳಿ ಮಾಡಿದರೂ ನಮ್ಮ ಖ್ಯಾತಿಯನ್ನು, ಸತ್ವಯುತ ವಿಚಾರ, ನಡೆ-ನುಡಿಯನ್ನು ಯಾರೂ ಅಲ್ಲಾಡಿಸಲು ಆಗಿಲ್ಲ.

ಇಂತಹ ಶ್ರೀಮಂತ ಸಂಸ್ಕೃತಿಯ ಹೆಗ್ಗಳಿಕೆಗೆ ಮುಕುಟವಿಟ್ಟಂತೆ ಟಿಬೆಟಿಯನ್ ಬೌದ್ಧ ಧರ್ಮ ಗುರು ದಲಾಯಿ ಲಾಮಾ ಮಾತನಾಡಿದ್ದು, ಭಾರತದ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಪುರಾತನ ಶಿಕ್ಷಣ ಪದ್ಧತಿಯ ಅಂಶಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಪುರಾತನ ಭಾರತೀಯ ಶಿಕ್ಷಣದ ಹೆಗ್ಗಳಿಕೆ ಬಗ್ಗೆ ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲ, ಜರೂರಾಗಿ ಭಾರತದ ಉನ್ನತ ಶಿಕ್ಷಣ ಪದ್ಧತಿಗೆ ಪುರಾತನ ಗುರುಕುಲ ಶಿಕ್ಷಣ ಪದ್ಧತಿಯ ಹಲವು ಅಂಶಗಳನ್ನು ಸೇರಿಸಬೇಕು. ಶೈಕ್ಷಣಿಕ ಪದ್ಧತಿಯ ಸುಧಾರಣೆಯ ಜತೆಗೆ ಜಾಗತಿಕ ತಾಪಮಾನ ಏರಿಕೆ ಹಾಗೂ ಯುದ್ಧಗಳ ವಿರುದ್ಧ ನಾವು ಮಾಡುತ್ತಿರುವ ಹೋರಾಟಕ್ಕೆ ಭಾರತದ ಪುರಾತನ ಶೈಕ್ಷಣಿಕ ಪದ್ಧತಿ ಸಹಕಾರಿಯಾಗುತ್ತದೆ ಎಂದು ದಲಾಯಿ ಹೇಳಿದ್ದಾರೆ.

ಜಾಗತಿಕ ಶಾಂತಿ ಮತ್ತು ಸೌಹಾರ್ದ ಸೃಷ್ಟಿಸುವಲ್ಲಿ ನೈತಿಕತೆ ಮತ್ತು ಸಂಸ್ಕೃತಿಯ ಪಾತ್ರ ಎಂಬ ಕುರಿತು ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಜಾಗತಿಕವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡುವ ಶಕ್ತಿ ಭಾರತದ ಪುರಾತನ ಶೈಕ್ಷಣಿಕ ಪದ್ಧತಿಗಿದೆ. ಅದರಲ್ಲಿ ಅಡಗಿರುವ ಮೌಲ್ಯಗಳಿಂದ ಹೀಗೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search