• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತೀಯ ಸಂಸ್ಕೃತಿ ಎತ್ತಿಹಿಡಿದ ಬಿಜೆಪಿ ಸರ್ಕಾರ, ಮಧ್ಯಪ್ರದೇಶದಲ್ಲಿ ಪ್ರೇಮಿಗಳ ದಿನ ಇನ್ನು ಮಾತೃ-ಪಿತೃ ದಿನವಾಗಿ ಆಚರಣೆ!

TNN Correspondent Posted On April 30, 2018


  • Share On Facebook
  • Tweet It

ಭೋಪಾಲ್: ಅನಾದಿ ಕಾಲದಿಂದಲೂ ಭಾರತೀಯ ಸಂಸ್ಕೃತಿ, ಸಂಪ್ರದಾಯ ಎಂದರೆ ಅಗಾಧವಾದ ಶ್ರೀಮಂತಿಕೆ ಇದೆ. ಇಡೀ ವಿಶ್ವವೇ ಭಾರತೀಯ ಸಂಸ್ಕೃತಿಯೆಂದರೆ ಹೆಮ್ಮೆಪಡುತ್ತದೆ. ಆದರೆ ಇತ್ತೀಚೆಗೆ ವಿದೇಶಿ ಸಂಸ್ಕೃತಿಗೆ ಮಾರುಹೋಗಿರುವ ನಮ್ಮ ಯುವಜನತೆ ಪ್ರೇಮಿಗಳ ದಿನದಂದು ಪಾರ್ಕ್, ಪಬ್ ಅಂತ ಹುಡುಗಿಯ ಜತೆ ಸುತ್ತಾಡುತ್ತಾರೆ ಹಾಗೂ ಹೀಗೆ ಮಾಡುವುದನ್ನೇ ನಿಜವಾದ ಪ್ರೇಮಿಯ ಲಕ್ಷಣ ಎಂದು ಭಾವಿಸಿದ್ದಾರೆ.

ಆದರೆ ಇದನ್ನು ತೊಲಗಿಸಲು ಮಧ್ಯಪ್ರದೇಶ ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ, ಅಂದರೆ 2019ರ ಫೆಬ್ರವರಿ 14ರಿಂದ ಪ್ರೇಮಿಗಳ ದಿನಾಚರಣೆಯನ್ನು ಮಾತೃ-ಪಿತೃಗಳ ಪೂಜಾ ದಿನವಾಗಿ ಆಚರಿಸಲು ನಿರ್ಧರಿಸಿದೆ.

ರಾಜ್ಯ ಶಿಕ್ಷಣ ಇಲಾಖೆ ಈ ಮಹತ್ತರ ನಿರ್ಣಯ ಕೈಗೊಂಡಿದ್ದು, ಏಪ್ರಿಲ್ 23ರಂದು ಸರ್ಕಾರ ಪ್ರಕಟಿಸಿರುವ ವಾರ್ಷಿಕ ಕ್ಯಾಲೆಂಡರ್ ಹಾಗೂ ಶಿರ್ವಿ ಪಂಜಾಂಗದಲ್ಲಿ ಫೆಬ್ರವರಿ 14ರಂದು ಮಾತೃ-ಪಿತೃಗಳ ಪೂಜಾ ದಿನ ಎಂದು ಸೇರಿಸುವ ಮೂಲಕ ಪ್ರೇಮಿಗಳ ದಿನಾಚರಣೆ ಹೆಸರಲ್ಲಿ ವಿದೇಶಿ ಸಂಸ್ಕೃತಿ ಅನಸರಿಸುತ್ತಿದ್ದ ಯುವಜನತೆಗೆ ಪಾಠ ಕಲಿಸಲು ಮುಂದಾಗಿದೆ.

ವಿದ್ಯಾರ್ಥಿಗಳು ಹರೆಯದ ಆಕರ್ಷಣೆ ಹಾಗೂ ವಿದೇಶಿ ಸಂಸ್ಕೃತಿಗೆ ಮಾರು ಹೋಗದೆ, ಹೆತ್ತ ತಂದೆ-ತಾಯಿ ಮೇಲೆ ಜಾಸ್ತಿ ಪ್ರೀತಿ ಹುಟ್ಟುಹಾಕಲು ಹಾಗೂ ಅವರ ಮಹತ್ವ ಅರಿಯುವ ದಿಸೆಯಲ್ಲಿ ಪ್ರೇಮಿಗಳ ದಿನವನ್ನು ಮಾತೃ-ಪಿತೃಗಳ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ಮಧ್ಯಪ್ರದೇಶ್ ಶಿಕ್ಷಣ ಸಚಿವ ವಾಸುದೇವ್ ದೇವಾನಿ ತಿಳಿಸಿದ್ದಾರೆ.

ಆದಾಗ್ಯೂ ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಛತ್ತೀಸ್ ಗಡದಲ್ಲೂ ಸಹ ಫೆಬ್ರವರಿ 14ನ್ನು ಪ್ರೇಮಿಗಳ ದಿನದ ಬದಲಾಗಿ ಮಾತೃ-ಪಿತೃಗಳ ಜನ್ಮದಿನ ಎಂದು ಆಚರಿಸಲಾಗುತ್ತಿದೆ. ಒಟ್ಟಿನಲ್ಲಿ ಹರೆಯದ ಆಕರ್ಷಣೆಗೆ ವಿರಾಮ ನೀಡಿ, ವೃದ್ಧಾಶ್ರಮ ಹೆಚ್ಚಾಗುತ್ತಿರುವ ಇಂದಿನ ಕಾಲಮಾನದಲ್ಲಿ ಸರ್ಕಾರವೇ ಮಾತೃ-ಪಿತೃಗಳ ದಿನ ಆಚರಿಸಲು ಮುಂದಾಗಿರುವುದು ಸಂತಸದ ಸಂಗತಿಯಾಗಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search