• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಕ್ಷಣಾ ಪಡೆಗಳ ಭರ್ಜರಿ ಕಾರ್ಯಾಚರಣೆ. ವಾನಿ ಉತ್ತರಾಧಿಕಾರಿ ಉಗ್ರ ಸಮೀರ್ ಟೈಗರ್ ಖಲ್ಲಾಸ್

TNN Correspondent Posted On May 1, 2018


  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೇರಿದ ನಂತರ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಹತ್ತಿಕ್ಕುವ ಕಾರ್ಯ ಯಶಸ್ವಿಯಾಗಿ ಮುಂದುವರಿದಿದ್ದು, ಇದೀಗ ರಕ್ಷಣಾ ಪಡೆಗಳು ಖುಷಿಯ ವಿಚಾರವೊಂದನ್ನು ನೀಡಿದ್ದು, ಭಯೋತ್ಪಾದಕ ಸಂಘಟನೆಯ ಪೋಸ್ಟರ್ ಬಾಯ್ ನನ್ನು ಖಲ್ಲಾಸ್ ಮಾಡುವ ಮೂಲಕ ಭರ್ಜರಿ ಕೊಡುಗೆ ಸೈನಿಕ ಪಡೆಗಳು ನೀಡಿವೆ.

ರಕ್ಷಣಾ ಪಡೆಗಳ ಭರ್ಜರಿ ಕಾರ್ಯಾಚರಣೆಯಲ್ಲಿ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೋರನಲ್ಲಿ 44 ರಾಷ್ಟ್ರೀಯ ರೈಫಲ್ಸ್, 182 ಮತ್ತು 183 ಸಿಆರ್ ಫಿಎಫ್ ಬಟಾಲಿಯನ್ ಮತ್ತು ಜಮ್ಮು ಕಾಶ್ಮೀರದ ವಿಶೇಷ ತಂಡಗಳ ಜಂಟಿ ಕಾರ್ಯಾಚರಣೆ ನಡೆಸಿ, ಕಾಶ್ಮೀರದಲ್ಲಿ ಭಯೋತ್ಪಾದನೆಯ ವಿಷ ಬೀಜ ಬಿತ್ತುತ್ತಿದ್ದ ಉಗ್ರ ಸಮೀರ್ ಟೈಗರ್ ನನ್ನು  ಹತ್ತಿಕ್ಕುವಲ್ಲಿ ಸೈನಿಕರು ಯಶಸ್ವಿಯಾಗಿದ್ದಾರೆ.

ಯಾರೂ ಈ ಸಮೀರ್ ಟೈಗರ್: ಜಮ್ಮು ಕಾಶ್ಮೀರದಲ್ಲಿ ದುರುಳ ಪ್ರತ್ಯೇಕವಾದಿಗಳ ವಿಷಮಂತ್ರಕ್ಕೆ ಬಲಿಯಾಗಿರೋ ಸಮೀರ್ ಟೈಗರ್ ಆರಂಭದಲ್ಲಿ ಕಲ್ಲು ತೂರಾಟಗಾರನಾಗಿದ್ದ. ನಂತರದ ದಿನಗಳಲ್ಲಿ ಇಸ್ಲಾಂ ಮೂಲಭೂತವಾದಿಗಳ ಕುತಂತ್ರಕ್ಕೆ ಬಲಿಯಾಗಿ, ಭಯೋತ್ಪಾದಕರೊಂದಿಗೆ ಕೈ ಜೋಡಿಸಿ, ಮುಸ್ಲಿಂ ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕ ಮಾಡಲು ಸಹಕಾರ ನೀಡುತ್ತಿದ್ದ. ಉಗ್ರ ಬುರ್ಹಾನ್ ವಾನಿ ಹತ್ಯೆಯಾದ ನಂತರ ಮುನ್ನಲೆಗೆ ಬಂದಿದ್ದ ಟೈಗರ್ ಸಮೀರ್ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದ. ಸುಮಾರು ಏಳು ಬಾರಿ ತನ್ನ ಪ್ರಾಣ ಉಳಿಸಿಕೊಂಡಿದ್ದ.

2016 ಮಾರ್ಚ್ 24 ರಂದು ಕಲ್ಲು ತೂರಾಟದ ಆರೋಪದ ಮೇಲೆ ಬಂಧಿತನಾಗಿದ್ದ ಸಮೀರ್, ನಂತರ ಬಿಡುಗಡೆಯಾಗಿದ್ದ. ಬಿಡುಗಡೆಯಾದ ನಂತರ 2016 ಮೇನಲ್ಲಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಕೈಜೋಡಿಸಿದ್ದ. ಉಗ್ರ ಬುರ್ಹಾನ ವಾನಿ ಹತ್ಯೆ ನಂತರ ಸಮೀರ್ ಮುನ್ನಲೆಗೆ ಬಂದಿದ್ದ. ದೇಶದ್ರೋಹಿ ಚಟುವಟಿಕೆಗಳಿಗೆ ನಿರಂತರವಾಗಿ ಬೆಂಬಲಿಸುತ್ತ. ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search