• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಕ್ಷಣಾ ಪಡೆಗಳ ಭರ್ಜರಿ ಕಾರ್ಯಾಚರಣೆ. ವಾನಿ ಉತ್ತರಾಧಿಕಾರಿ ಉಗ್ರ ಸಮೀರ್ ಟೈಗರ್ ಖಲ್ಲಾಸ್

TNN Correspondent Posted On May 1, 2018
0


0
Shares
  • Share On Facebook
  • Tweet It

ಶ್ರೀನಗರ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೇರಿದ ನಂತರ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಹತ್ತಿಕ್ಕುವ ಕಾರ್ಯ ಯಶಸ್ವಿಯಾಗಿ ಮುಂದುವರಿದಿದ್ದು, ಇದೀಗ ರಕ್ಷಣಾ ಪಡೆಗಳು ಖುಷಿಯ ವಿಚಾರವೊಂದನ್ನು ನೀಡಿದ್ದು, ಭಯೋತ್ಪಾದಕ ಸಂಘಟನೆಯ ಪೋಸ್ಟರ್ ಬಾಯ್ ನನ್ನು ಖಲ್ಲಾಸ್ ಮಾಡುವ ಮೂಲಕ ಭರ್ಜರಿ ಕೊಡುಗೆ ಸೈನಿಕ ಪಡೆಗಳು ನೀಡಿವೆ.

ರಕ್ಷಣಾ ಪಡೆಗಳ ಭರ್ಜರಿ ಕಾರ್ಯಾಚರಣೆಯಲ್ಲಿ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರಾಜ್ಪೋರನಲ್ಲಿ 44 ರಾಷ್ಟ್ರೀಯ ರೈಫಲ್ಸ್, 182 ಮತ್ತು 183 ಸಿಆರ್ ಫಿಎಫ್ ಬಟಾಲಿಯನ್ ಮತ್ತು ಜಮ್ಮು ಕಾಶ್ಮೀರದ ವಿಶೇಷ ತಂಡಗಳ ಜಂಟಿ ಕಾರ್ಯಾಚರಣೆ ನಡೆಸಿ, ಕಾಶ್ಮೀರದಲ್ಲಿ ಭಯೋತ್ಪಾದನೆಯ ವಿಷ ಬೀಜ ಬಿತ್ತುತ್ತಿದ್ದ ಉಗ್ರ ಸಮೀರ್ ಟೈಗರ್ ನನ್ನು  ಹತ್ತಿಕ್ಕುವಲ್ಲಿ ಸೈನಿಕರು ಯಶಸ್ವಿಯಾಗಿದ್ದಾರೆ.

ಯಾರೂ ಈ ಸಮೀರ್ ಟೈಗರ್: ಜಮ್ಮು ಕಾಶ್ಮೀರದಲ್ಲಿ ದುರುಳ ಪ್ರತ್ಯೇಕವಾದಿಗಳ ವಿಷಮಂತ್ರಕ್ಕೆ ಬಲಿಯಾಗಿರೋ ಸಮೀರ್ ಟೈಗರ್ ಆರಂಭದಲ್ಲಿ ಕಲ್ಲು ತೂರಾಟಗಾರನಾಗಿದ್ದ. ನಂತರದ ದಿನಗಳಲ್ಲಿ ಇಸ್ಲಾಂ ಮೂಲಭೂತವಾದಿಗಳ ಕುತಂತ್ರಕ್ಕೆ ಬಲಿಯಾಗಿ, ಭಯೋತ್ಪಾದಕರೊಂದಿಗೆ ಕೈ ಜೋಡಿಸಿ, ಮುಸ್ಲಿಂ ಯುವಕರನ್ನು ಉಗ್ರ ಸಂಘಟನೆಗಳಿಗೆ ನೇಮಕ ಮಾಡಲು ಸಹಕಾರ ನೀಡುತ್ತಿದ್ದ. ಉಗ್ರ ಬುರ್ಹಾನ್ ವಾನಿ ಹತ್ಯೆಯಾದ ನಂತರ ಮುನ್ನಲೆಗೆ ಬಂದಿದ್ದ ಟೈಗರ್ ಸಮೀರ್ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದ. ಸುಮಾರು ಏಳು ಬಾರಿ ತನ್ನ ಪ್ರಾಣ ಉಳಿಸಿಕೊಂಡಿದ್ದ.

2016 ಮಾರ್ಚ್ 24 ರಂದು ಕಲ್ಲು ತೂರಾಟದ ಆರೋಪದ ಮೇಲೆ ಬಂಧಿತನಾಗಿದ್ದ ಸಮೀರ್, ನಂತರ ಬಿಡುಗಡೆಯಾಗಿದ್ದ. ಬಿಡುಗಡೆಯಾದ ನಂತರ 2016 ಮೇನಲ್ಲಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಜೊತೆ ಕೈಜೋಡಿಸಿದ್ದ. ಉಗ್ರ ಬುರ್ಹಾನ ವಾನಿ ಹತ್ಯೆ ನಂತರ ಸಮೀರ್ ಮುನ್ನಲೆಗೆ ಬಂದಿದ್ದ. ದೇಶದ್ರೋಹಿ ಚಟುವಟಿಕೆಗಳಿಗೆ ನಿರಂತರವಾಗಿ ಬೆಂಬಲಿಸುತ್ತ. ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search