• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಕ್ಸಲ್ ನಿಗ್ರಹಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಆ ಮಾಸ್ಟರ್ ಪ್ಲಾನ್ ಯಾವುದು ಗೊತ್ತಾ?

TNN Correspondent Posted On May 4, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಸ್ಥಿತಿಗತಿಯೇ ಬದಲಾಗುತ್ತಿದೆ. ಒಂದೆಡೆ ವಿಶ್ವದೆಲ್ಲೆಡೆ ಜಾಸ್ತಿಯಾಗುತ್ತಿರುವ ನರೇಂದ್ರ ಮೋದಿ ಅವರ ಖ್ಯಾತಿ. ಮತ್ತೊಂದೆಡೆ ಜಾಗತಿಕವಾಗಿ ಹೆಚ್ಚಾಗುತ್ತಿರುವ ಭಾರತದ ಗೌರವ. ಇದರ ನಡುವೆಯೇ ಬಾಲ ಮುದುರಿಕೊಂಡು ಕುಳಿತಿರುವ ಚೀನಾ, ಪಾಕಿಸ್ತಾನ,

ಹಾಗಂತ ನರೇಂದ್ರ ಮೋದಿ ಅವರು ಬರೀ ಹೊರಗಿನ ದುಷ್ಟಶಕ್ತಿಗಳ ನಿರ್ನಾಮ ಮಾಡಲು ಮುಂದಾಗಿಲ್ಲ. ಹೊರಗಿನವರ ಜತೆಗೆ ದೇಶದ ಒಳಗಿರುವ ಕಸವನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ತಾಜಾ ತಾಜಾ ಉದಾಹರಣೆ ಎಂದರೆ ಜಮ್ಮುಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳಿಗೆ ಎನ್ಐಎ ಬಿಟ್ಟು ಅವರ ರೆಕ್ಕೆ ಕತ್ತರಿಸಿದ್ದು. ಕಲ್ಲು ತೂರಾಟಗಾರರಿಗೆ ತಕ್ಕ ಪಾಠ ಕಲಿಸಿದ್ದು.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ದೇಶದಲ್ಲಿ ತಲೆನೋವಾಗಿರುವ ನಕ್ಸಲರನ್ನು ಮಟ್ಟ ಹಾಕಲು ಮಾಸ್ಟರ್ ಪ್ಲಾನ್ ರೂಪಿಸಿದೆ.

ಹೌದು, ದೇಶದಲ್ಲಿ ನಕ್ಸಲರು ಜಾಸ್ತಿ ಇರುವ ಹತ್ತು ರಾಜ್ಯಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶೀಘ್ರವಾಗಿ ಚಾಲನೆ ನೀಡುವ ಜತೆಗೆ ಅವುಗಳನ್ನು ಮುಗಿಸಬೇಕು ಎಂದು ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತು ಕೇಂದ್ರ ಪರಿಸರ ಸಚಿವಾಲಯ ನಕ್ಸಲ್ ಪೀಡಿತ ಹತ್ತು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಕೂಡಲೇ ಈ ರಾಜ್ಯಗಳಲ್ಲಿ ಕಾಮಗಾರಿ ಮುಗಿಸಬೇಕು ಎಂದು ಸೂಚಿಸಿದ್ದಾರೆ.

ಈ ಯೋಜನೆಗಳು ನಕ್ಸಲರನ್ನು ಮಟ್ಟಹಾಕಲು ಸಹಕಾರಿಯಾಗಲಿದ್ದು, ಎಲ್ಲ ಅರಣ್ಯ ಪ್ರದೇಶಗಳ ಗ್ರಾಮಗಳಿಗೂ ರಸ್ತೆ ನಿರ್ಮಾಣ, ಸೇತುವೆ ನಿರ್ಮಾಣ, ಟೆಲಿಫೋನ್ ಟವರ್ ಗಳ ಸ್ಥಾಪನೆ ಸೇರಿ ಹಲವು ಕಾಮಗಾರಿಗಳು ಕ್ಷಿಪ್ರವಾಗಿ ಮುಗಿದರೆ, ಇದರಿಂದ ನಕ್ಸಲರನ್ನು ಮಟ್ಟಹಾಕಬಹುದು ಎಂಬುದು ಕೇಂದ್ರ ಸರ್ಕಾರದ ಚಿಂತನೆಯಾಗಿದೆ. ರಾಜ್ಯ ಸರ್ಕಾರಗಳೂ ಇದಕ್ಕೆ ಒಪ್ಪಿಗೆ ಸೂಚಿಸಿ ಶೀಘ್ರವಾಗಿ ಕಾಮಗಾರಿ ಮುಗಿಸಿದರೆ ನಕ್ಸಲರ ರೆಕ್ಕೆಪುಕ್ಕ ಕತ್ತರಿಸಿದಂತೆಯೇ ಎಂಬ ಮಾತುಗಳು ಕೇಳಿಬರುತ್ತವೆ. ಕೂಡಲೇ ಹಾಗಾಗಲಿ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search