• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ವಿನಾಕಾರಣ ಟೀಕಿಸುವ ಮಲ್ಲಿಕಾರ್ಜುನ ಖರ್ಗೆ ಬೀದರ್ ನಲ್ಲಿ ಮಾಡಿದ್ದೇನು?

TNN Correspondent Posted On May 4, 2018
0


0
Shares
  • Share On Facebook
  • Tweet It

ಬೀದರ್: ಸಂಸತ್ತಿನಲ್ಲಿ ಪ್ರತಿಪಕ್ಷದಲ್ಲಿ ಸಹ ಕುಳಿತುಕೊಳ್ಳಲು ಸಾಮರ್ಥ್ಯ ಸಂಪಾದಿಸದ, ದೇಶದ 22 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ಮಾಡಲು ಕೆಲಸವಿಲ್ಲದಂತಾಗಿರುವ ಈ ಕಾಂಗ್ರೆಸ್ ನಾಯಕರು ವಿನಾಕಾರಣ ಕೇಂದ್ರ ಸರ್ಕಾರವನ್ನು ಟೀಕಿಸಲು ಮುಂದಾಗಲುತ್ತಾರೆ. ಅದರಲ್ಲೂ ಕರ್ನಾಟಕದಲ್ಲಂತೂ ಕೇಂದ್ರ ಸರ್ಕಾರವನ್ನು ಟೀಕಿಸುವ ದೊಡ್ಡಪಡೆಯೇ ಕಾಂಗ್ರೆಸ್ಸಿನಲ್ಲಿದೆ.

ಇಂತಹ ಕಾಂಗ್ರೆಸ್ ಇತ್ತೀಚೆಗೆ ಹಿಂದಿ ವಿಷಯದಲ್ಲೂ ರಾಜಕೀಯವನ್ನು ಮಿಶ್ರಣ ಮಾಡುವ ಮೂಲಕ ತಾನು ಎಲ್ಲದರಲ್ಲೂ ರಾಜಕೀಯ ಮಾಡುತ್ತೇನೆ ಎಂಬುದನ್ನು ಸಾಬೀತುಪಡಿಸಿತ್ತು. ಕೇಂದ್ರ ಸರ್ಕಾರ ರಾಜ್ಯದ ಮೇಲೆ ಹಿಂದಿ ಹೇರುತ್ತಿದೆ ಎಂದು ಇದೇ ಸಿದ್ದರಾಮಯ್ಯನವರು ಘೀಳಿಟ್ಟಿದ್ದರು. ಇವರಿಗೆ ಮಲ್ಲಿಕಾರ್ಜುನ ಖರ್ಗೆಯವರೂ ಸಾಥ್ ನೀಡಿದ್ದರು. ಆದರೆ ಹೆಮ್ಮೆಯ ನರೇಂದ್ರ ಮೋದಿ ಅವರು ಮಾತ್ರ ವಿದೇಶದಲ್ಲೂ ಹಿಂದಿ ಮಾತಾಡುವ ಮೂಲಕ ಭಾರತದ ಭಾಷೆಯ ಹಿರಿಮೆಯನ್ನು ಎತ್ತಿಹಿಡಿದಿದ್ದರು.

ಇನ್ನು ಹಿಂದಿ ವಿಷಯದಲ್ಲಿ ಕೇಂದ್ರದ ಮೇಲೆ ಇಷ್ಟೊಂದು ವಿಷ ಕಾರುವ ಕಾಂಗ್ರೆಸ್ ಸಾಚಾತನಕ್ಕೆ ಎಷ್ಟೊಂದು ವಿರುದ್ಧವಾಗಿ ನಡೆದುಕೊಂಡಿದೆ ಎಂಬುದಕ್ಕೆ ಬೀದರ್ ನ ಔರಾದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಇದೇ ಮಲ್ಲಿಕಾರ್ಜುನ ಖರ್ಗೆ ಮತ್ತು ಈಶ್ವರ್ ಖಂಡ್ರೆ ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕದಲ್ಲೇ ಕನ್ನಡವನ್ನು ಮರೆಮಾಚಿಸಿದ್ದಾರೆ.

ಕನ್ನಡದ ನೆಲದಲ್ಲಿ ಮಾತನಾಡುತ್ತಿದ್ದೇವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದೆ, ದೆಹಲಿಯಿಂದ ಬಂದ ಆ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕಾಂಗ್ರೆಸ್ಸಿನ ಈ ಮುಖಂಡರು ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿವೆ.

ಇದಕ್ಕೆ ಕಾಂಗ್ರೆಸ್ಸಿನವರು ಯಾವ ರೀತಿಯಾದರೂ ಸ್ಪಷ್ಟನೆ ನೀಡಿದರೂ, ಕರ್ನಾಟಕದಲ್ಲಿ, ಅದರಲ್ಲೂ ಹೋಗಲೇ, ಬಾರಲೇ ಎನ್ನುವ ಬೀದರ್ ನಂತಹ ಗಂಡು ಮೆಟ್ಟಿದ ನಾಡಿನಲ್ಲಿ, ಮಲ್ಲಿಕಾರ್ಜುನ ಖರ್ಗೆಯವರು ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಎಂಬ ಒಂದೇ ಕಾರಣಕ್ಕೆ ಕನ್ನಡ ಮರೆತು ಹಿಂದಿಯಲ್ಲಿ ಮಾತನಾಡುವ ಮೂಲಕ ಕನ್ನಡಿಗರನ್ನು ಅವಮಾನಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ದಪ್ಪ ಚರ್ಮದ ಕಾಂಗ್ರೆಸ್ ಧುರೀಣರು ಉತ್ತರಿಸುತ್ತಾರೆಯೇ ಎಂಬುದೇ ಅನುಮಾನ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search