• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಜನ್ಮಭೂಮಿ ಅಯೋಧ್ಯೆ ಆಕರ್ಷಣೆ ಹೆಚ್ಚಿಸಲು ಯೋಗಿ ಸರ್ಕಾರದಿಂದ ಭರ್ಜರಿ ಬಜೆಟ್

TNN Correspondent Posted On May 6, 2018
0


0
Shares
  • Share On Facebook
  • Tweet It

ಲಖನೌ: ದೇಶದ ಬೃಹತ್ ದೊಡ್ಡ ರಾಜ್ಯ, ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಇರುವ ಸ್ಥಳ, ಕಾಶೀ ವಿಶ್ವನಾಥನ ಪುಣ್ಯ ಸನ್ನಿಧಿ ಇರುವ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಸ್ಥಾನವನ್ನು ಯೋಗಿ ಆದಿತ್ಯನಾಥ ವಹಿಸಿಕೊಂಡ ನಂತರ ಮಹತ್ತರ ಬದಲಾವಣೆಗಳನ್ನು ತಂದಿದೆ. ರಾಜ್ಯದಲ್ಲಿ ಅಪರಾಧ ಲೋಕವನ್ನು ಮಟ್ಟ ಹಾಕುವ ಮೂಲಕ ಹೊಸ ಭರವಸೆಯನ್ನು ಮೂಡಿಸಿದೆ. ಇದೀಗ ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರವಾದ ಅಯೋಧ್ಯೆ ಶ್ರೀರಾಮನ ತಾಣವನ್ನು ಪ್ರವಾಸಿಗರಿಗೆ ಆಕರ್ಷಿಸುವಂತೆ ಮಾಡಲು ಭರ್ಜರಿ ಬಜೆಟ್ ನೀಡುವ ಮೂಲಕ ಹೊಸ ನಿರೀಕ್ಷೆಯನ್ನು ಯೋಗಿ ಸರ್ಕಾರ ಹುಟ್ಟಿಸಿದೆ.

ಅಯೋಧ್ಯೆಯ ಕೆಲವು ಪ್ರಮುಖ ಸ್ಥಾನಗಳ ಆಕರ್ಷಿಸುವಂತೆ ಮಾಡಲು ಯೋಗಿ ಆದಿತ್ಯನಾಥ್ ಸರ್ಕಾರ ಇದೀಗ ಮತ್ತೆ 10.7 ಕೋಟಿ ರೂಪಾಯಿ ನೀಡಿದೆ.  ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಅಯೋಧ್ಯೆಯಲ್ಲಿರುವ ಸೀತಾ ಕುಂಡ, ವಿದ್ಯಾ ಕುಂಡ, ದಂಥವನ ಕುಂಡಗಳು ಸೇರಿ ಹಲವು ಪುರಾತನ ಸ್ಥಳಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಅಯೋಧ್ಯೆಯ ಅಭಿವೃದ್ಧಿ ಮತ್ತು ಸುಂದರಿಕರಣಗೊಳಿಸುವ ನೀತಿ ಯೋಗಿ ಆದಿತ್ಯನಾಥ ಅಧಿಕಾರಕ್ಕೆ ಬಂದಾಗಿನಿಂದಲು ಕ್ರಮ ಕೈಗೊಳ್ಳಲಾಗಿತ್ತು. ಅಯೋಧ್ಯೆಯಲ್ಲಿ ಮರ್ಯಾದಾ ಪುರುಷ ಶ್ರೀರಾಮನ ಬೃಹತ್ ಮೂರ್ತಿ ನಿರ್ಮಿಸಲು ಯೋಗಿ ನಿರ್ಧರಿಸಿದ್ದರು. ಪ್ರವಾಸೋಧ್ಯಮ ಇಲಾಖೆ ಮೂಲಕ ಧಾರ್ಮಿಕ ತಾಣಗಳನ್ನು ಇನ್ನಷ್ಟು ಆಕರ್ಷಣೆಗೊಳಿಸಿ, ಧಾರ್ಮಿಕ ಪ್ರವಾಸೋದ್ಯಕ್ಕೆ ಹೆಚ್ಚಿನ ಒತ್ತು ನೀಡಲು ಯೋಗಿ ಸರ್ಕಾರ ಪ್ರಯತ್ನಿಸುತ್ತಿದೆ. ಶ್ರೀರಾಮ ನವಮಿಯಂದು ಸಹಸ್ರ ಲಕ್ಷದೀಪ  ಕಾರ್ಯಕ್ರಮ ಆಯೋಜಿಸಿ ಇಡೀ ರಾಷ್ಟ್ರದ ಗಮನವನ್ನು ಯೋಗಿ ಸೆಳೆದಿದ್ದರು.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search