• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಸಮಾನತೆ ವಿರೋಧಿ ಎನ್ನುವವರೇ ಎಲ್ಲಿದ್ದೀರಿ:ಅಂತರ್ಜಾತಿ ವಿವಾಹ ಉತ್ತೇಜನಕ್ಕೆ ಮಹಾ ಸರ್ಕಾರ ನಿರ್ಧಾರ

TNN Correspondent Posted On May 7, 2018


  • Share On Facebook
  • Tweet It

ಮುಂಬೈ: ಬಿಜೆಪಿ ದಲಿತ ವಿರೋಧಿ, ಮನುವಾದವನ್ನು ಹೇರುವ ಪಕ್ಷ ಎನ್ನುವ ವಿರೋಧಿಗಳ ತೀವ್ರ ವಾಗ್ದಾಳಿಯನ್ನು ಎದುರಿಸಿಯೂ ಬಿಜೆಪಿ ಸರ್ಕಾರವೊಂದು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಲು ನಿರ್ಧರಿಸಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸೂಕ್ತ ರಕ್ಷಣೆ ಒದಗಿಸುವುದು ಮತ್ತು ಪೋಷಣೆ ಮಾಡುವ ನಿಯಮ ತರಲು ನಿರ್ಧರಿಸಿದೆ ಎಂದು ಮಹಾರಾಷ್ಟ್ರ ಸಾಮಾಜಿಕ ನ್ಯಾಯ ಸಮೀತಿ ಸಚಿವ ರಾಜಕುಮಾರ ಬದೊಲೆ ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಅಂತರ್ಜಾತಿ ವಿವಾಹಕ್ಕೆ ಬಲಿಯಾಗುವವರಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದ್ದರಿಂದ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಕ್ಷಣೆ ನೀಡುವ ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದೆ. ಅನ್ಯ ಜಾತಿಯ, ವಿಶೇಷವಾಗಿ ದಮನಕ್ಕೆ ಒಳಗಾಗಿರುವ ಜಾತಿಯ ವ್ಯಕ್ತಿಗಳ ಮಧ್ಯೆ ಮದುವೆಯಾದರೆ ಆ ಜೋಡಿಗಳಿಗೆ ಸೂಕ್ತ ಸಹಾಯಧನ ನೀಡುವುದು, ಮಕ್ಕಳಾದರೂ ವಿಶೇಷ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ.

ಅಂತರ್ಜಾತಿ ವಿವಾಹವಾದವರ ಮಕ್ಕಳಿಗೆ ಶಾಲೆ ಫೀಯಲ್ಲಿ ರಿಯಾಯಿತಿ ನೀಡುವುದು, ಸಾಮಾಜಿಕ ಬಹಿಷ್ಕಾರ ನೀಡಿದರೇ ಸೂಕ್ತ ರಕ್ಷಣೆ ನೀಡುವುದು, ಅಗತ್ಯವಿದ್ದಲ್ಲಿ ಸೂಕ್ತ ಆರ್ಥಿಕ ಸಹಾಯಧನ ನೀಡಲು ಯೋಜಿಸಲಾಗಿದೆ. ಪ್ರಸ್ತುತ ಇರುವ ವಿಶೇಷ ಮದುವೆ ಕಾಯಿದೆಗೆ ಸೂಕ್ತ ಬದಲಾವಣೆ ತರುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿ ಡಾ.ಅಂಬೇಡ್ಕರ್ ಫೌಂಡೇಷನ್ ಅಂತರ್ಜಾತಿ ವಿವಾಹವಾಗುವ ನವದಂಪತಿಗೆ 2.5 ಲಕ್ಷ ರೂಪಾಯಿ ನೀಡುತ್ತದೆ. ಅದೇ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಸಹಾಯಧನ, ಪ್ರೋತ್ಸಾಹ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search