• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟಿದ ಸಿಪಿಎಂ, ಕಾಂಗ್ರೆಸ್ಸಿಗೆ ಬಿಜೆಪಿ ಸರ್ಕಾರ ಹೇಗೆ ತಪರಾಕಿ ನೀಡಿದೆ ನೋಡಿ!

TNN Correspondent Posted On May 7, 2018
0


0
Shares
  • Share On Facebook
  • Tweet It

ಅಗರ್ತಲಾ: ತ್ರಿಪುರಾದಲ್ಲಿ ದಶಕಗಳ ಬಳಿಕ ಆಡಳಿತಕ್ಕೆ ಬಂದ ಬಿಜೆಪಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಈಗ ದೇಶದ ಗಮನ ಸೆಳೆಯುತ್ತಿದೆ. ಎರಡು ದಿನದ ಹಿಂದಷ್ಟೇ ಸಾರ್ವಜನಿಕ ಸ್ಥಳಗಳಲ್ಲಿ ಮುಸ್ಲಿಮರು ನಮಾಜ್ ಮಾಡುವ ಹಾಗಿಲ್ಲ ಎಂದು ಸೂಚಿಸುವ ಮೂಲಕ ಶಾಂತಿ-ಸುವ್ಯವಸ್ಥೆ ಕಾಪಾಡಲು ಮುಂದಾಗಿದ್ದ ರಾಜ್ಯ ಸರ್ಕಾರ ಈಗ ಮತ್ತೊಂದು ಮಹತ್ತರ ನಿರ್ಧಾರ ಘೋಷಿಸಿದೆ.

ಹೌದು, ರಾಜ್ಯಾದ್ಯಂತ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟುವ ಮೂಲಕ ದರ್ಪ ಮೆರೆದಿದ್ದ ಭಾರತೀಯ ಕಮ್ಯುನಿಸ್ಟ್ ಪಾರ್ಟಿ ಹಾಗೂ ಕಾಂಗ್ರೆಸ್ಸಿಗೆ ಬಿಜೆಪಿ ಸರಿಯಾಗಿಯೇ ತಪರಾಕಿ ನೀಡಿದೆ.

ರಾಜ್ಯಾದ್ಯಂತ ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಸರ್ಕಾರಿ ಜಾಗದಲ್ಲಿ ಸುಮಾರು ನೂರು ಕಚೇರಿ ಕಟ್ಟಿವೆ. ಇವುಗಳನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ಸರ್ಕಾರವೇ ಈ ಕಾರ್ಯ ಮಾಡಬೇಕಾಗುತ್ತದೆ ಎಂದು ಬಿಪ್ಲಬ್ ಕುಮಾರ್ ನೇತೃತ್ವದ ಸರ್ಕಾರ ಸೂಚನೆ ನೀಡಿದೆ.

ಅಗರ್ತಲಾದ ಹಳೆ ಮೋಟಾರ್ ಸ್ಟಾಂಡ್ ಬಳಿ ನಿರ್ಮಿಸಿದ್ದ ಹಲವು ಪಕ್ಷಗಳ ಕಚೇರಿಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ, ಕೂಡಲೇ ಪಕ್ಷಗಳೇ ಕಚೇರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ಬುಲ್ಡೋಜರ್ ಹರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಆದರೆ ಇದಕ್ಕೆ ಸಿಪಿಎಂ ಹಾಗೂ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿವೆ. ಆದರೂ ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ಕಟ್ಟಿರುವ ಕುರಿತು ಸಿಪಿಎಂ ರಾಜ್ಯ ಕಾರ್ಯದರ್ಶಿ ಬಿಜನ್ ಧರ್ ಒಪ್ಪಿಕೊಂದ್ದಾರೆ. ಆದರೆ, ರಾಜ್ಯ ಸರ್ಕಾರ ರಾಜಕೀಯ ದ್ವೇಷದಿಂದ ಹೀಗೆ ಮಾಡುತ್ತಿದೆ ಎಂದು ಧರ್ ಆರೋಪಿಸಿದ್ದಾರೆ.

ಅಲ್ಲ, ಸರ್ಕಾರಿ ಜಾಗದಲ್ಲಿ ಪಕ್ಷದ ಕಚೇರಿ ನಿರ್ಮಿಸುವ ಕುರಿತು ಸ್ವತಃ ಸಿಪಿಎಂ ಮುಖಂಡರೇ ಒಪ್ಪಿಕೊಂಡಿದ್ದಾರೆ. ಕಾನೂನಿ ಪ್ರಕಾರ ಹೀಗೆ ಮಾಡುವುದು ತಪ್ಪು ಎಂಬುದು ಗೊತ್ತಿದ್ದರೂ ಕಟ್ಟಡ ನಿರ್ಮಿಸಿ, ಈಗ ತೆರವುಗೊಳಿಸಿ ಎಂದು ಸರ್ಕಾರ ನ್ಯಾಯಯುತವಾಗಿ ನಡೆದುಕೊಂಡರೂ, ಇದನ್ನು ರಾಜಕೀಯ ಪ್ರೇರಿತ ಕ್ರಮ ಎನ್ನುವ ಇವರಿಗೆ ಏನೆನ್ನಬೇಕು?

0
Shares
  • Share On Facebook
  • Tweet It




Trending Now
ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
Tulunadu News December 22, 2025
ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
Tulunadu News December 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
  • Popular Posts

    • 1
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 2
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 3
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 4
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 5
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!

  • Privacy Policy
  • Contact
© Tulunadu Infomedia.

Press enter/return to begin your search