• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಮ್ಮ ವಿರುದ್ಧ ಬರೆದರೇ ಹುಷಾರ್!: ವರದಿಗಾರನ ಮೇಲೆ ಸಚಿವ ತನ್ವೀರ್ ಸೇಠ ಬೆಂಬಲಿಗರ ಹಲ್ಲೆ

TNN Correspondent Posted On May 8, 2018


  • Share On Facebook
  • Tweet It

ಮೈಸೂರು: ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ನಿರಂತರವಾಗಿ ಅಧಿಕಾರಿಗಳ ಮೇಲೆ ಕಿರುಕುಳ ನೀಡುವುದು ಸೇರಿ ನಾನಾ ಅನಾಚಾರಗಳನ್ನು ನಡೆಸಿದ ಸಿದ್ರಾಮಯ್ಯ ಸರ್ಕಾರದ ಸಚಿವರು, ಅವರ ಬೆಂಬಲಿಗರು ಚುನಾವಣೆಯ ಹೊತ್ತಲ್ಲಿ ಮತ್ತೊಮ್ಮೆ ಎಡವಿದ್ದು, ಈ ಬಾರಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕೋಧ್ಯಮದ ಮೇಲೆಯೇ ದಾಳಿ ಮಾಡಿದ್ದಾರೆ. ಮೈಸೂರಿನಲ್ಲಿ ಸಚಿವ ತನ್ವೀರ್ ಸೇಠ ಬೆಂಬಲಿಗರು ವರದಿಗಾರಿಕೆಗೆ ತೆರಳಿದ್ದ ಆಂಗ್ಲ ಪತ್ರಿಕೆಯ ವರದಿಗಾರನ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ ಮನೆಯೊಂದರಲ್ಲಿ ಕೂಡಿ ಹಾಕಿ ಧರ್ಪ ಮೆರೆದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ ಸೋಮವಾರ ಬೆಳಗ್ಗೆ ಎನ್.ಆರ್ ಕ್ಷೇತ್ರದ ಗಾಯತ್ರಿಪುರಂ ಬಡಾವಣೆಯಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಈ ಸುದ್ದಿಯನ್ನು ವರದಿ ಮಾಡಲು ತೆರಳಿದ್ದ ವರದಿಗಾರ ಶಿವೇಂದ್ರ ಅರಸ್ ಅವರನ್ನು ತನ್ವೀರ್ ಸೇಠ ಬೆಂಬಲಿಗರು ತಡೆ ಹಿಡಿದಿದ್ದಾರೆ. ವಿಚಾರಣೆ ಆರಂಭಿಸಿದ್ದಾರೆ. ಶಿವೇಂದ್ರ ತಮ್ಮ ಪರಿಚಯ ಹೇಳಿಕೊಂಡರೂ ನಂಬದ ಕಾಂಗ್ರೆಸ್ ಕಾರ್ಯಕರ್ತರು ಶಿವೇಂದ್ರ ಅವರ ಹತ್ತಿರವಿದ್ದ ಪೆನ್ ಮತ್ತು ಪುಸ್ತಕ ಕಿತ್ತುಕೊಂಡು ಸ್ಥಳದಿಂದ ತೆರಳಲು ಬಿಡದೇ, ತಡೆದಿದ್ದಾರೆ.

ಶಿವೇಂದ್ರ ಹತ್ತಿರವಿರುವ ಫೋನ್ ಕಿತ್ತುಕೊಂಡು, ಹಲ್ಲೆ ನಡೆಸಿದ್ದಾರೆ. ಅಲ್ಲದೇ ಬಲವಂತವಾಗಿ ಮನೆಯೊಳಗೆ ಕೂಡಿ ಹಾಕಿದ್ದಾರೆ. ಈ ಮಾಹಿತಿ ತಿಳಿದ ಸಚಿವ ತನ್ವೀರ್ ಸೇಠ್ ನಮ್ಮ ವಿರುದ್ಧ ಬರೆದರೇ ಸುಮ್ಮನೇ ಇರುವುದಿಲ್ಲ ಎಂದು ಧಮ್ಕಿ ಹಾಕಿ, ನಂತರ ಬಿಡುಗಡೆ ಮಾಡಿದ್ದಾರೆ. ವರದಿಗಾರನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿ, ಗುಂಡಾಗಿರಿ ಪ್ರದರ್ಶಿಸಿರುವ ಸಚಿವ ತನ್ವೀರ್ ಸೇಠ ವಿರುದ್ಧ ದೂರು ದಾಖಲಿಸಲಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search