• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕೆಂಪು ಉಗ್ರರ ಅಸಲಿ ಮುಖ: ಕೋಟ್ಯಧಿಪತಿ ನಕ್ಸಲ್ ಮುಖಂಡರು

TNN Correspondent Posted On May 8, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಬಡವರ ಹೋರಾಡುತ್ತೇವೆ, ಸಂಕಷ್ಟದಲ್ಲಿರುವವರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಬೊಗಳೆ ಬಿಡುತ್ತಾ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ನಕ್ಸಲ್ ಮುಖಂಡರ ಅಸಲಿ ಮುಖ ಬಯಲಾಗಿದೆ. ಬಡವರ ಹೆಸರಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿರುವ  ಬಿಹಾರ ಮತ್ತು ಜಾರ್ಖಂಡ್ ರಾಜ್ಯದ ನಕ್ಸಲ್ ಮುಖಂಡರು, ಮುಗ್ದರ ಮಕ್ಕಳನ್ನು ಹೋರಾಟಕ್ಕಿಳಿಸಿ, ಅವರ ಜೀವ ಪಣಕ್ಕಿಟ್ಟು ತಮ್ಮ ಮಕ್ಕಳನ್ನು ಮಾತ್ರ ಲಕ್ಷಾಂತರ ರೂಪಾಯಿ ನೀಡಿ ಶಾಲೆಗೆ ಕಳುಹಿಸುತ್ತಿರುವ ಅಚ್ಚರಿದಾಯಕ ವಿಷಯ ಹೊರ ಬಿದ್ದಿದೆ.

ಮುಗ್ದ ಜನರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟಿ, ರಣರಂಗಕ್ಕೆ ದೂಡುವ ನಕ್ಸಲ್ ಮುಖಂಡರು ತಮ್ಮ ಮಕ್ಕಳನ್ನು ನಗರ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ನೀಡಿ, ಶಾಲೆಗೆ ಕಳುಹಿಸುತ್ತಿರುವ ಜೊತೆಗೆ, ರಿಯಲ್ ಎಸ್ಟೇಟ್ ನಲ್ಲಿ ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿದ್ದಾರೆ ಎನ್ನುವ ಮಾಹಿತಿ ಕೇಂದ್ರ ಗೃಹ ಸಚಿವಾಲಯದ ತನಿಖೆಯಿಂದ ಬಹಿರಂಗವಾಗಿದೆ.

ಇನ್ನು ಈ ಕುರಿತು ಕೆಂಪು ಉಗ್ರ ಸಂದೀಪ್ ಯಾದವ್ ಎನ್ನುವವನ ಮನೆಯಿಂದ ಈಗಾಗಲೇ ಜಾರಿ ನಿರ್ದೇಶನಾಲಯ 1.45 ಕೋಟಿ ಹಣ, 32 ಎಕರೆ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿರುವ ದಾಖಲೆಯನ್ನು ವಶಕ್ಕೆ ಪಡೆದಿದೆ. ಅದೇ ರೀತಿ ಎರಡು ಬಸ್, 11 ಕಾರು ಹಾಗೂ 2 ಟ್ರ್ಯಾಕ್ಟರ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಕೇಂದ್ರದಿಂದ ಕೆಂಪು ಉಗ್ರರಿಗೆ ಭರ್ಜರಿ ಹೊಡೆತ: ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಕ್ಸಲರ ವಿರುದ್ಧ ನಿರಂತರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಕೆಂಪು ಉಗ್ರರ ಉಪಟಳ ನಿಯಂತ್ರಣಕ್ಕೆ ಬಂದಿದೆ. ನಕ್ಸಲ್ ಪೀಡಿತ ರಾಜ್ಯಗಳಲ್ಲಿ ತನಿಖೆಗೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ತನಿಖಾ ಸಂಸ್ಥೆಗಳು, ಸೇನೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಹೊಂದಿರುವ ತಂಡ ರಚಿಸಿದ್ದು, ನಕ್ಸಲ್ ರಿಗೆ ನುಂಗಲಾರದ ತುತ್ತಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search