• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ನರ-ನಾಡಿ ರಸ್ತೆಗಳು, ಅದಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿದೆ 200 ಯೋಜನೆಗಳು!

TNN Correspondent Posted On May 20, 2018
0


0
Shares
  • Share On Facebook
  • Tweet It

ನವದೆಹಲಿ: ದೇಶದ ಇತಿಹಾಸದಲ್ಲೇ 60 ವರ್ಷ ಆಡಳಿತ ನಡೆಸಿದರೂ ದೇಶಾದ್ಯಂತ ಉತ್ತಮ ರಸ್ತೆ ರೂಪಿಸದ ಕಾಂಗ್ರೆಸ್ಸಿಗೆ ಕಪಾಳ ಮೋಕ್ಷವಾಗುವಂತೆ ರಸ್ತೆ ನಿರ್ಮಿಸಿದವರು ಎಂದರೆ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರು ಕೇಳಿಬರುತ್ತದೆ. ಆದರೆ ಅಟಲ್ ಬಿಹಾರಿ ವಾಜಪೇಯಿ ಬಳಿಕ ದೇಶದಲ್ಲಿ ರಸ್ತೆ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಸರ್ಕಾರ ಎಂದರೆ ಅದು ನರೇಂದ್ರ ಮೋದಿ ನೇತೃತ್ವದ ಸರ್ಕಾರ.

ಹೌದು, ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ದೇಶದಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತದೆ. ಇದಕ್ಕೆ ಸಾಕ್ಷಿಯಾಗಿ ಕೇಂದ್ರ ಈ ಮತ್ತೆ ರಸ್ತೆ ಅಭಿವೃದ್ಧಿಗೆ ಬರೋಬ್ಬರಿ 200ಯೋಜನೆಗಳನ್ನು ರೂಪಿಸಿದ್ದು, ರಾಷ್ಟ್ರದ ನರ-ನಾಡಿಗಳು ಎಂದೇ ಖ್ಯಾತಿಯಾಗಿರುವ ರಸ್ತೆಗಳು ದೇಶಾದ್ಯಂತ ನಿರ್ಮಾಣವಾಗಲಿವೆ.

ಇದಕ್ಕಾಗಿ ಸರ್ಕಾರ 1.5 ಲಕ್ಷ ಕೋಟಿ ರೂ, ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಮುಂದಿನ ವರ್ಷದ ಆರಂಭದ ಅವಧಿಯಲ್ಲಿ ಕನಿಷ್ಠ 50 ದೊಡ್ಡ ಮುಖ್ಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದರಲ್ಲೂ 8-10 ತಿಂಗಳ ಕಡಿಮೆ ಅವಧಿಯಲ್ಲಿ ಇಷ್ಟೊಂದು ಬೃಹತ್ ಯೋಜನೆಗಳು ಆರಂಭಿಸುವುದರಿಂದ ಹಲವು ಉದ್ಯೋಗ ಸೃಷ್ಟಿ ಸಹ ಆಗುತ್ತದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಹಿತಿ ನೀಡಿರುವ ಪ್ರಕಾರ ಪೂರ್ಣಗೊಳ್ಳಲಿರುವ ಹಂತದಲ್ಲಿರುವ 416 ಯೋಜನೆಗಳನ್ನು ಪಟ್ಟಿ ಮಾಡಲಿದ್ದು, ಆ ಯೋಜನೆಗಳಿಗೆ ಈ 200 ಯೋಜನೆಗಳು ಸೇರಿದರೆ ದೇಶದ ರಸ್ತೆಗಳು ಬಹುತೇಕ ಅಭಿವೃದ್ಧಿಯಾದಂತೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search