• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೇನೆಗೆ ಬ್ರಹ್ಮೋಸ್ ಬಲ: ಪರೀಕ್ಷಾರ್ಥ ಉಡಾವಣೆ ಯಶಸ್ವಿ

TNN Correspondent Posted On May 22, 2018


  • Share On Facebook
  • Tweet It

ಬಾಲಾಸೋರ್: ಒಡಿಶಾದ ಬಾಲಾಸೋರ್ ಕಡಲ ತೀರದಲ್ಲಿ  ಭಾರತ- ರಷ್ಯಾ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಿರುವ ಶಬ್ದಾತೀತ ವೇಗದ (ಸೂಪರ್​ಸಾನಿಕ್) ಬ್ರಹ್ಮೋಸ್ ಸುಧಾರಿತ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆ ಸೋಮವಾರ ಯಶಸ್ವಿಯಾಗಿ ನೆರವೇರಿತು.

ಚಂಡೀಪುರದ ಸಮಗ್ರ ಪರೀಕ್ಷಾ ಪ್ರದೇಶದ (ಐಟಿಆರ್) ಲಾಂಚ್ ಪ್ಯಾಡ್-3ರಿಂದ ಸುಧಾರಿತ ಕ್ಷಿಪಣಿಯನ್ನು ಬೆಳಗ್ಗೆ 10.40ಕ್ಕೆ ಪ್ರಯೋಗಾರ್ಥ ಪರೀಕ್ಷೆ ನಡೆಯಿತು. ಕ್ಷಿಪಣಿಯ ಜೀವಿತಾವಧಿ ಹೆಚ್ಚಿಸುವ ತಂತ್ರಜ್ಞಾನವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ) ಮೊದಲ ಬಾರಿಗೆ ಅಭಿವೃದ್ಧಿಪಡಿಸಿದೆ. ಸುಧಾರಿತ ಕ್ಷಿಪಣಿ ಪರೀಕ್ಷೆಯಿಂದ ಸೇನಾ ಶಸ್ತ್ರಾಸ್ತ್ರ ಸಂಗ್ರಹಾಗಾರದಲ್ಲಿರುವ ಕ್ಷಿಪಣಿಗಳ ಬದಲಾವಣೆಗೆ ತಗುಲುವ ದೊಡ್ಡ ಮೊತ್ತದ ವೆಚ್ಚ ಕಡಿಮೆ ಮಾಡಲಿದೆ ಎಂದು ಡಿಆರ್​ಡಿಒ ಮಾಹಿತಿ ನೀಡಿದೆ.

ಪ್ರಸ್ತುತ ಪರೀಕ್ಷೆ ನಡೆಸಿರುವ ಕ್ಷಿಪಣಿ ಘನರೂಪಿ ನೋದಕ ಶಕ್ತಿ ಮತ್ತು ರಾಮ್ ಜೆಟ್ ದ್ರವರೂಪಿ ನೋದಕಶಕ್ತಿ ಎಂಬ ಎರಡು ಹಂತಗಳನ್ನು ಹೊಂದಿದೆ. 2016ರಲ್ಲಿ ನಡೆದ ಬ್ರಹ್ಮೋಸ್ ಪರೀಕ್ಷೆಯಲ್ಲಿ 290 ಕಿ.ಮೀ. ಇದ್ದ ಗುರಿಯನ್ನು 2017ರ ನಡೆದ ಪರೀಕ್ಷೆಯಲ್ಲಿ 400 ಕಿ.ಮೀ.ಗೆ ಹೆಚ್ಚಳ ಮಾಡಲಾಗಿತ್ತು. ಇದೀಗ ಸುಧಾರಿತ ಪರೀಕ್ಷೆಯಲ್ಲಿ 800 ಕಿ.ಮೀ.ಗೆ ಏರಿಕೆ ಮಾಡಲಾಗಿದ್ದು, ಜಲಾಂತರ್ಗಾಮಿಗೆ ಬ್ರಹ್ಮೋಸ್ ಕ್ಷಿಪಣಿ ಸೇರಿಸುವ ಕಾರ್ಯ ಪ್ರಗತಿಯಲ್ಲಿದೆ.

ಡಿಆರ್ ಡಿಒ ಯಶಸ್ವಿಯಾಗಿ ಸೂಪರ್​ಸಾನಿಕ್ ಬ್ರಹ್ಮೋಸ್ ಸುಧಾರಿತ ಕ್ಷಿಪಣಿ ಪರೀಕ್ಷೆಯನ್ನು ನಡೆಸಿರುವುದಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search