• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಬುರಗಿ ರೈತರ ನೆರವಿಗೆ ಮುಂದಾದ ಆರೆಸ್ಸೆಸ್, ಉಚಿತವಾಗಿ ಎತ್ತು ನೀಡಿ ಶ್ಲಾಘನೀಯ ಕಾರ್ಯ!

TNN Correspondent Posted On May 22, 2018
0


0
Shares
  • Share On Facebook
  • Tweet It

ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಎಂದರೇನೆ ಹಾಗೆ. ಈ ಸಂಘಟನೆ ದೇಶದ ಯಾವುದೇ ಮೂಲೆಯಲ್ಲಿ ಯಾರಿಗೇ ತೊಂದರೆಯಾಗಿ, ತಕ್ಷಣ ಕಾರ್ಯಕರ್ತರು ನೆರವಿಗೆ ಧಾವಿಸುತ್ತಾರೆ. ಪ್ರಕೃತಿ ವಿಕೋಪ ಸೇರಿ ಯಾವುದೇ ದುರ್ಘಟನೆ ಸಂಭವಿಸಿದರೂ ಆರೆಸ್ಸೆಸ್ ಕಾರ್ಯಕರ್ತರು ಅಲ್ಲಿರುತ್ತಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ಸಿನ ಜವಾಹರ್ ಲಾಲ್ ನೆಹರೂ ಅವರು ಆರೆಸ್ಸೆಸ್ ಕಾರ್ಯಕರ್ತರನ್ನು ಕರೆಸಿ ಸನ್ಮಾನ ಮಾಡಿದ್ದರು.

ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಇಂಥಾದ್ದೇ ಮಹತ್ಕಾರ್ಯವೊಂದನ್ನು ಮಾಡಿದ್ದು, ಕಲಬುರಗಿ ಜಿಲ್ಲೆಯ ಗೌಡಗಾಂವ ಗ್ರಾಮದ ಒಂಬತ್ತು ರೈತರಿಗೆ 14 ಎತ್ತುಗಳನ್ನು ಉಚಿತವಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದೆ.

ಕಳೆದ ಮೂರ್ನಾಲ್ಕು ವರ್ಷದಿಂದ ಕಲಬುರಗಿ ಸುತ್ತಮುತ್ತ ಬರದ ಪರಿಸ್ಥಿತಿ ಆವರಿಸಿದ್ದು, ರೈತರು ತಮ್ಮ ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನೂ ಮಾರಾಟ ಮಾಡಿದ್ದರು. ಆದರೆ ಈಗ ಮಳೆಗಾಲ ಆರಂಭವಾಗಲಿದ್ದು, ಬಿತ್ತನೆ ಮಾಡಲು ಎತ್ತು ಖರೀದಿಸದ ಪರಿಸ್ಥಿತಿಯಲ್ಲಿ ರೈತರು ಇದ್ದರು. ಇದನ್ನು ಗಮನಿಸಿದ ಆರೆಸ್ಸೆಸ್ ಬಡ ರೈತರನ್ನು ಗುರುತಿಸಿ ಎತ್ತುಗಳನ್ನು ಒಪ್ಪಂದದ ಮೂಲಕ ನೀಡಿದೆ.

ಸರಿಯಾಗಿ ಮಳೆಯಾಗದೆ ಬೆಳೆ ಬೆಳೆಯಲು ಸಾಧ್ಯವಾಗದ ಕಾರಣ ನಾವು ಜೀವನಕ್ಕೆ ಆಧಾರವಾಗಿದ್ದ ಎತ್ತುಗಳನ್ನು ಮಾರಾಟ ಮಾಡಲೇಬೇಕಾಗಿತ್ತು. ಆದರೆ ಈ ಬಾರಿ ಮಳೆಯಾದರೆ ಎತ್ತುಗಳಿಲ್ಲದೆ ಹೇಗೆ ಬಿತ್ತನೆ ಮಾಡಬೇಕು ಎಂಬ ಚಿಂತೆಯಲ್ಲಿದ್ದೆವು. ಆದರೆ ಈಗ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ನಮ್ಮ ನೆರವಿಗೆ ಧಾವಿಸಿದ್ದು, ವ್ಯವಸಾಯ ಮಾಡಲು ತುಂಬ ಸಹಾಯಕವಾಗಿದೆ ಎಂದು ಗೌಡಗಾಂವ್ ಗ್ರಾಮದ ರೈತ ಸಂತೋಷ್ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ರೈತನೇ ದೇಶದ ಬೆನ್ನೆಲುಬು, ರೈತನೇ ನಮಗೆ ಅನ್ನದಾತ ಎಂಬುದು ಸಾರ್ವಕಾಲಿಕ ಸತ್ಯ. ಅಂತಹ ರೈತರಿಗೆ ಆರೆಸ್ಸೆಸ್ ವತಿಯಿಂದ ಎತ್ತುಗಳನ್ನು ನೀಡಿರುವುದು ಶ್ಲಾಘನೀಯ. ಎಲ್ಲ ಸಂಘಟನೆಗಳೂ ಹೀಗೆ ರೈತರಿಗೆ ನೆರವಾದರೆ, ರೈತ ಕಣ್ಣೀರಲ್ಲಿ ಕೈ ತೊಳೆಯಲಾರ.

0
Shares
  • Share On Facebook
  • Tweet It




Trending Now
ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
Tulunadu News July 4, 2025
ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
Tulunadu News July 4, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
  • Popular Posts

    • 1
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 2
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • 3
      ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • 4
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 5
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search