• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರಿಂದ ಮತ್ತೊಂದು ದಿಟ್ಟ ನಿರ್ಧಾರ, ಇಂಗ್ಲಿಷ್ ಕಲಿಸುವಂತೆ ಮದರಸಾಗಳಿಗೆ ಸೂಚನೆ!

TNN Correspondent Posted On May 23, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾದ ಬಳಿಕ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅವುಗಳಲ್ಲಿ ನೋಂದಣಿಯಾಗದ  ಮದರಸಾಗಳ ನೋಂದಣಿ ರದ್ದುಗೊಳಿಸಿದ್ದು ಪ್ರಮುಖವಾಗಿದೆ, ಅಷ್ಟೇ ಮದರಸಾಗಳು ಬರೀ ಧರ್ಮಬೋಧನೆಗಷ್ಟೇ ಸೀಮಿತವಾಗದೆ ಎನ್ ಸಿಇಆರ್ ಟಿ ಪಠ್ಯ ಬೋಧಿಸಬೇಕು ಎಂಬುದು ಸಹ ಯೋಗಿ ಆದಿತ್ಯನಾಥರು ತೆಗೆದುಕೊಂಡ ಪ್ರಮುಖ ನಿರ್ಧಾರವಾಗಿದೆ.

ಇಂತಹ ದಿಟ್ಟ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದು, ಮದರಸಾಗಳಲ್ಲಿ ಉರ್ದು ಜತೆಗೆ ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಆದೇಶ ಹೊರಡಿಸಿದ್ದಾರೆ.

ಅದರಲ್ಲೂ ಅರ್ಬಿ-ಫಾರ್ಸಿ ಉರ್ದು ಮದರಸಾ ಬೋರ್ಡ್ ಕಳೆದ ಮೇ 15ರಂದು ನಡೆಸಿದ ಸಭೆಯಲ್ಲಿ ಎಲ್ಲ ಮದರಸಾಗಳೂ ಇಂಗ್ಲಿಷ್ ಹಾಗೂ ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ನೀಡುವಂತಾಗಬೇಕು ಎಂದು ಸಲಹೆ ನೀಡಲಾಗಿತ್ತು. ಅದರಂತೆ ಉತ್ತರ ಪ್ರದೇಶ ಸಚಿವ ಸಂಪುಟ ಆದೇಶ ಹೊರಡಿಸಿದ್ದು, ಎಲ್ಲ ಮದರಸಾಗಳೂ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಶಿಕ್ಷಣ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲ ಮದರಸಾಗಳೂ ಕಡ್ಡಾಯವಾಗಿ ಎನ್ ಸಿಇಆರ್ ಟಿ ಅನ್ವಯ ಇಂಗ್ಲಿಷ್ ಮತ್ತು ಹಿಂದಿ ಮಾಧ್ಯಮದಲ್ಲಿ ಶಿಕ್ಷಣ ನೀಡುವ ಜತೆಗೆ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾದಂತಹ ಮಾನವಿಕ ಹಾಗೂ ಮಕ್ಕಳ ಭವಿಷ್ಯ ರೂಪಿಸುವ ವಿಷಯಗಳನ್ನು ಸಹ ಕಲಿಸಬೇಕು ಎಂದು ಸೂಚಿಸಲಾಗಿದೆ.

ಒಟ್ಟಿನಲ್ಲಿ ಮದರಸಾಗಳು ಎಂದರೆ ಬರೀ ಉರ್ದು ಮಾಧ್ಯಮದಲ್ಲಿ ಶಿಕ್ಷಣ ನೀಡುವ ಹಾಗೂ ಬರೀ ಧರ್ಮಬೋಧನೆಯನ್ನೇ ಮಾಡುವ ಸಂಸ್ಥೆಗಳು ಎನ್ನಲಾಗುತ್ತಿತ್ತು. ಆದರೆ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಬಳಿಕ ಮದರಸಾಗಳ ಚಹರೆಯನ್ನೇ ಬದಲಿಸುತ್ತಿದ್ದು, ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುವ ಹಾಗೆ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ಬೋಧನೆಗೆ ಅನುವು ಮಾಡಿಕೊಟ್ಟಿರುವುದು ಶ್ಲಾಘನೀಯವಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search