• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬರೀ ಮತದಾರರು ಮಾತ್ರವಲ್ಲ, ಹಣವಂತರೂ ಕಾಂಗ್ರೆಸ್ಸನ್ನು ತರಿಸ್ಕರಿಸುತ್ತಿದ್ದಾರೆ, ಹೇಗೆ ಗೊತ್ತಾ?

TNN Correspondent Posted On May 24, 2018


  • Share On Facebook
  • Tweet It

ಇತ್ತೀಚೆಗೆ ಕಾಂಗ್ರೆಸ್ ಎಂಬ ರಾಷ್ಟ್ರೀಯ ಪಕ್ಷ, ದಿನೇದಿನೆ ತನ್ನ ಪ್ರಭಾವವನ್ನು ಕ್ಷೀಣಿಸಿಕೊಳ್ಳುತ್ತಿದೆ, ಜನರ ನಂಬಿಕೆ ಕಳೆದುಕೊಳ್ಳುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಕಳೆದ ನಾಲ್ಕಾರು ವರ್ಷಗಳಲ್ಲಿ ದೇಶಾದ್ಯಂತ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ಸಾಲು ಸಾಲು ಸೋಲುಂಡಿದ್ದು, 22 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ನಿದರ್ಶನ. ಅಷ್ಟೇ ಏಕೆ, ಮೇ 10ರಂದು ನಡೆದ ಚುನಾವಣೆಯಲ್ಲಿ 120ರಿಂದ 78 ಸೀಟುಗಳಿಗೆ ಇಳಿದಿದ್ದು ಕಾಂಗ್ರೆಸ್ಸಿನ ಇಳಿಮುಖವಾಗುತ್ತಿರುವುದೇ ಸಾಕ್ಷಿಯಾಗಿದೆ.

ಹಾಗಂತ ಕಾಂಗ್ರೆಸ್ ಎಂಬ ರಾಷ್ಟ್ರೀಯ ಪಕ್ಷ ಬರೀ ಮತದಾರರ ವಿಶ್ವಾಸವನ್ನಷ್ಟೇ ಕಳೆದುಕೊಳ್ಳುತ್ತಿದೆ ಎಂದು ಭಾವಿಸಬೇಡಿ. ಉದ್ಯಮಿಗಳ, ದಾನಿಗಳ, ಹಣವಂತರ ವಿಶ್ವಾಸವನ್ನೂ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ.

ಹೌದು, ಯಾವುದೇ ಒಂದು ಪಕ್ಷ ದಾನಿಗಳ, ಉದ್ಯಮಿಗಳ, ಹಣವಂತರ, ಕೊಡುಗೈ ವೀರರ ಕೃಪಾಕಟಾಕ್ಷದಿಂದ ನಡೆಯುತ್ತದೆ. ಅದೇ ಹಣದಿಂದ ಚುನಾವಣೆ, ರ್ಯಾಲಿ, ಸಮಾವೇಶಗಳನ್ನು ಆಯಾ ಪಕ್ಷಗಳು ಏರ್ಪಡಿಸುತ್ತವೆ. ದೇಣಿಗೆ ಮೂಲಕ ಹಣ ಪಡೆದು ಪಕ್ಷವನ್ನು ನಡೆಸುತ್ತವೆ.

ಆದರೆ, ಅದಕ್ಕೆ ನಂಬಿಕೆ. ಆ ಪಕ್ಷದ ವಿಶ್ವಾಸಾರ್ಹತೆ ಬೇಕು. ಕಾಂಗ್ರೆಸ್ ಇದನ್ನೇ ಕಳೆದುಕೊಂಡಿದ್ದು, ಇತ್ತೀಚೆಗೆ ಕಾಂಗ್ರೆಸ್ಸಿಗೆ ದೇಣಿಗೆ ನೀಡುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ತಿಳಿದುಬಂದಿದ್ದು, ಕಾಂಗ್ರೆಸ್ 2019ರ ಲೋಕಸಭೆ ಚುನಾವಣೆ ಎದುರಿಸಲು ಸಹ ದುಡ್ಡಿಲ್ಲ ಎನ್ನಲಾಗುತ್ತಿದೆ.

2017ರಲ್ಲಿ ಪಕ್ಷಗಳು ಇತ್ತೀಚೆಗೆ ತಮಗೆ ಬರುವ ಆದಾಯ ಘೋಷಿಸಿದ್ದು, ಬಿಜೆಪಿಗೆ 10 ಶತಕೋಟಿ ಅಮೆರಿಕನ್ ಡಾಲರ್ ದೇಣಿಗೆ ಬಂದರೆ. ಕಾಂಗ್ರೆಸ್ಸಿಗೆ ಕೇವಲ 2.25 ಶತಕೋಟಿ ಹಣ ದೇಣಿಗೆ ರೂಪದಲ್ಲಿ ಲಭಿಸಿದೆ. ಇದು ಬಿಜೆಪಿಗೆ ಶೇ.81ರಷ್ಟು ಹಣದ ಪ್ರಮಾಣದಲ್ಲಿ ಏರಿಕೆಯಾದರೆ, 2016ಕ್ಕೆ ಹೋಲಿಸಿದರೆ ಕಾಂಗ್ರೆಸ್ಸಿನ ಆದಾಯದಲ್ಲಿ ಶೇ.14ರಷ್ಟು ಕುಸಿತ ಕಂಡಿದೆ ಎಂದು ತಿಳಿದುಬಂದಿದೆ.

ಇದೇ ಕಾರಣಕ್ಕಾಗಿ ಕಾಂಗ್ರೆಸ್ 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು, ಪಕ್ಷದ ಪ್ರಚಾರಕ್ಕಾಗಿ ಹಣ ಬಳಸಲು, ಸಮಾವೇಶ, ರ್ಯಾಲಿ, ನಾಯಕರ ತಿರುಗಾಟದ ಖರ್ಚು ಭರಿಸಲು ಒದ್ದಾಡುವ ಪರಿಸ್ಥಿತಿ ಎದುರಾಗಿದೆ ಎಂದು ತಿಳಿದುಬಂದಿದೆ. ಜನರ ಜತೆಗೆ ಉದ್ಯಮಿಗಳೂ ಒಂದು ಪಕ್ಷದ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಹೇಗೆ ವರ್ತಿಸುತ್ತಿದೆ ಎಂಬುದಕ್ಕೆ ಕನ್ನಡಿ ಹಿಡಿದ ಹಾಗೆ. ಹಾಗಾದರೆ ಕಾಂಗ್ರೆಸ್ ಎಚ್ಚೆತ್ತುಕೊಳ್ಳುತ್ತದಾ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search