• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಇಬ್ರಾಹಿಂ ಸಹಚರನಿಂದ ಉತ್ತರ ಪ್ರದೇಶ ಬಿಜೆಪಿ ಶಾಸಕರಿಗೆ ಬೆದರಿಕೆ ಕರೆ

TNN Correspondent Posted On May 24, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಮುಖ್ಯಮಂತ್ರಿಯಾದ ನಂತರ ಯುಪಿಯಲ್ಲಿ ನಾಯಿಕೊಡೆಗಳಂತೆ ತಲೆಎತ್ತಿದ್ದ ರೌಡಿಗಳನ್ನು ಮಟ್ಟಹಾಕಲು ಕೈಗೊಂಡ ನಿಯಮಗಳಿಂದ ಇದೀಗ ಜನ ನೆಮ್ಮದಿಯಿಂದ ಇದ್ದಾರೆ. ಆದರೆ ಯೋಗಿ ಸರ್ಕಾರದ ಏಟಿನಿಂದ ಕಂಗಾಲಾಗಿರುವ ರೌಡಿಗಳು, , ಅಂಡರ್ ವಲ್ಡ್ ಸಂಪರ್ಕ ಹೊಂದಿರುವ ರೌಡಿಗಳು ಬಿಜೆಪಿ ಶಾಸಕರನ್ನು, ಮುಖಂಡರನ್ನು ಬೆದರಿಸುವ ಕಾರ್ಯಕ್ಕೆ ಇಳಿದಿದ್ದಾರೆ. ಆದರೆ ಬೆದರಿಕೆ ಬಗ್ಗದೇ ಮುನ್ನುಗುತ್ತಿರುವ ಯೋಗಿ ಆದಿನ್ಯಾಥ ಶಾಸಕರಿಗೆ ಬೆದರಿಕೆ ಒಡಿದವರನ್ನು ಹೆಡೆಮುರಿಕಟ್ಟುವಂತೆ ಆದೇಶ ನೀಡಿದ್ದಾರೆ. ತನಿಖೆಗೆಗಾಗಿ ಎಸ್ ಐಟಿ ನೇಮಕ ಮಾಡಿದ್ದಾರೆ.

ಉತ್ತರ ಪ್ರದೇಶದ 12 ಬಿಜೆಪಿ ಶಾಸಕರಿಗೆ ಅಂಡರ್ ವಲ್ಡ್ ಡಾನ್ ದಾವೂದ್ ಇಬ್ರಾಹಿಂ ಸಹಚರರು ಎನ್ನಲಾದ ಕೆಲವರು ವಾಟ್ಸ್ ಆ್ಯಪ್, ಮೆಸೆಂಜರ್ ಮತ್ತು ಕರೆ ಮಾಡುವ ಮೂಲಕ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ. ಅಲ್ಲದೇ 10ಲಕ್ಷ ಹಣ ನೀಡಲು ಬೇಡಿಕೆ ಇಟ್ಟಿದ್ದಾರೆ. ಮೂರು ದಿನದಲ್ಲಿ 10 ಲಕ್ಷ ರೂಪಾಯಿ ನೀಡದಿದ್ದಲ್ಲಿ ನಿಮ್ಮ ಕುಟುಂಬದವರನ್ನು ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ವೀರ ವಿಕ್ರಮ ಸಿಂಗ್, ಮನ್ವೇಂದ್ರ ಸಿಂಗ್, ಪ್ರೇಮ ಪ್ರಕಾಶ ಪಾಂಡೆ, ವಿಜಯಕುಮಾರ ದ್ವಿವೇದಿ, ವಿನೋದ ಕಟಿಯಾರ್, ಶಶಾಂಕ್ ತ್ರಿವೇದಿ, ಅನಿತಾ ರಜಪೂತ ಸೇರಿ ಹಲವು ಶಾಸಕರಿಗೆ ಬೆದರಿಕೆ ಸಂದೇಶಗಳು, ಕರೆಗಳು ಬಂದಿವೆ. ಕರೆಗಳು ಅಂಡರ್ ವಲ್ಡ್ ಡಾನ್ ದಾವೂದ್ ಇಬ್ರಾಹಿಂ ಸಹಚರನಾಗಿದ್ದವನಿಂದ ಪಾಕ್ ಮೂಲದ ವ್ಯಕ್ತಿಯಿಂದ ಬಂದಿವೆ ಎಂದು ವರದಿಗಳಾಗಿವೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ‘ಶಾಸಕರಿಗೆ ಬೆದರಿಕೆ ಕರೆ ಮಾಡಿರುವ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ. ತನಿಖೆ ನೇತೃತ್ವವನ್ನು ವಿಶೇಷ ತನಿಖಾ ತಂಡಕ್ಕೆ(ಎಸ್ ಐಟಿ) ವಹಿಸಿದ್ದಾರೆ. ಅಲ್ಲದೇ ಭಯೋತ್ಪಾದನಾ ನಿಯಂತ್ರಣಾ ದಳಕ್ಕೂ ಈ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಪ್ರಸ್ತುತ ಕರೆ ಮಾಡಿರುವ ವ್ಯಕ್ತಿ ತಾನೇ ದುಬೈನ ಅಲಿ ಬುದೇಶ್ ಬಾಯ್ ಎಂದು ಹೇಳಿಕೊಂಡಿದ್ದಾನೆ. ಆದರೆ ಕರೆಗಳ ಬೆನ್ನುತ್ತಿರುವ ಪೊಲೀಸರಿಗೆ ಕರೆ ಮಾಡಿರುವ ವ್ಯಕ್ತಿ ದಾವೂದ್ ಇಬ್ರಾಹಿಂ ಬಂಟನ್ನೆಂದು ತಿಳಿದು ಬಂದಿದೆ. ಈ ವ್ಯಕ್ತಿ 1990ದಶಕದಲ್ಲಿ ದೇಶದಲ್ಲಿ ಸಿನಿಮಾ ನಟರಿಗೆ ಈ ರೀತಿಯ ಬೆದರಿಕೆ ಒಡ್ಡಲಾಗುತ್ತಿತ್ತು. ದಾವೂದ್ ಬಂಟ 1998ಲ್ಲಿ ಬಹ್ರೇನ್ ಗೆ ಹೋಗಿದ್ದು, ಅಲ್ಲಿಯೇ ವಾಸವಾಗಿದ್ದಾನೆ. ಆತನಿಂದ ಹಲವು ದಿನಗಳಿಂದ ಇಂತಹ ಕೃತ್ಯಗಳು ಕಂಡು ಬಂದಿಲ್ಲ. ಆದರೆ ಪ್ರಸ್ತುತ ಮತ್ತೆ ದುಷ್ಕೃತ್ಯ ನಡೆಸಿರಬೇಕು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search