• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2014ರಲ್ಲಿ ಅಬ್ ಕೀ ಬಾರ್  ಸರ್ಕಾರ್, 2019ರ ಲೋಕಸಭೆ ಚುನಾವಣೆಯಲ್ಲಿ ಯಾವ ಸ್ಲೋಗನ್ ಗೊತ್ತಾ?

TNN Correspondent Posted On May 25, 2018
0


0
Shares
  • Share On Facebook
  • Tweet It

ಅದು 2014. ಇಡೀ ದೇಶ ಒಬ್ಬ ದಕ್ಷ, ಜನಪರ, ಭಾರತದ ಘನತೆಯನ್ನು ಎತ್ತಿ ಹಿಡಿಯುವ, ಭ್ರಷ್ಟಾಚಾರದಿಂದ ಮುಕ್ತವಾಗಿರುವ ನಾಯಕರೊಬ್ಬರನ್ನು ಬಯಸಿದ ವರ್ಷ. ಜನ ಚಳವಳಿ ರೂಪದಲ್ಲಿ ಬಂದು ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ ಕಾರಣ ಒಬ್ಬ ಚಹ ಮಾರುವವರೂ ಪ್ರಧಾನಿಯಾದರು. ಚುನಾವಣೆಗೂ ಮೊದಲು ಬಿಜೆಪಿ ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಎಂಬ ಘೋಷಣೆ ಹೊರಡಿಸಿತ್ತು. ಅದು ಸಹ ತುಂಬ ಜನಪ್ರಿಯವಾಯಿತು.

ಈಗ ಮೋದಿಯವರು ಪ್ರಧಾನಿಯಾಗಿ ನಾಲ್ಕು ವರ್ಷವಾಗಿದೆ. ದೇಶದ ಜಿಡಿಪಿ ಏರಿಕೆಯಾಗುತ್ತಿದೆ. ನೋಟು ನಿಷೇಧದ ಮೂಲಕ ಕಪ್ಪು ಹಣ ತಹಬಂದಿಗೆ ತರಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮೂಲಕ ದೇಶದ ತೆರಿಗೆ ವ್ಯವಸ್ಥೆ ಸುಧಾರಣೆಯಾಗಿದೆ. ಭಾರತದ ಘನತೆ ವಿಶ್ವಮಟ್ಟದಲ್ಲಿ ಬಾನೆತ್ತರಕ್ಕೆ ಹಾರಿದೆ. ಪಾಕಿಸ್ತಾನ, ಚೀನಾ ಬಾಲ ಮುದುರಿಕೊಂಡು ಕೂತಿವೆ. ಭ್ರಷ್ಟಾಚಾರ ಕಾಣೆಯಾಗಿದೆ.

ಹೀಗೆ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷದಲ್ಲಿ ದೇಶದಲ್ಲಿ ಮಾಡಿದ ಹಲವು ಸುಧಾರಣೆಗಳಿಂದ 2019ರ ಚುನಾವಣೆಯಲ್ಲೂ ಮೋದಿ ಅವರನ್ನೇ ಗೆಲ್ಲಿಸಬೇಕು ಎಂಬ ಮನೋಭಾವ ದೇಶದ ಜನರಲ್ಲಿ ಮೂಡಿದೆ. ದೇಶದ 22 ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ಮುಂದಿನ ಐದು ವರ್ಷಗಳ ಕಾಲ ಕೇಂದ್ರದಲ್ಲಿ ನರೇಂದ್ರ ಮೋದಿಯವರೇ ಪ್ರಧಾನಿಯಾಗಿರಲಿ ಎಂಬ ಆಶಯವಾಗುತ್ತಿದೆ. ಸಮೀಕ್ಷೆಗಳು ಸಹ ಇದನ್ನೇ ತಿಳಿಸಿವೆ.

ಈಗ ಬಿಜೆಪಿ ಸಹ 2019ರ ಲೋಕಸಭೆ ಚುನಾವಣೆಗೆ ಸಜ್ಜಾಗಿದೆ. 2014ರಲ್ಲಿ ಹೊರಡಿಸಿದ ಜನಪ್ರಿಯ ಸ್ಲೋಗನ್ ಹಾಗೆ, 2019ರ ಚುನಾವಣೆಗೂ ಒಂದು ಸ್ಲೋಗನ್ ಹೊರಡಿಸಿದೆ. ‘2019 ಮೇ ಫಿರ್ ಮೋದಿ ಸರ್ಕಾರ್’ (2019ರಲ್ಲೂ ಮತ್ತೆ ಮೋದಿ ಸರ್ಕಾರ್) ಎಂಬ ಘೋಷಣೆ ಹೊರಡಿಸಿದೆ.

ಒಟ್ಟಿನಲ್ಲಿ 2019ರ ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ಸಜ್ಜಾಗಿವೆ. ಆದರೆ ನಾವು ಮತಗಟ್ಟೆಯ ಸಾಲಿನಲ್ಲಿ ನಿಂತಾಗ ಯಾರು ಅಭಿವೃದ್ಧಿ ಮಾಡಿದ್ದಾರೆ? ಯಾರು ದೇಶಕ್ಕಾಗಿ ದುಡಿದಿದ್ದಾರೆ? ಯಾರು ದೇಶದ ಘನತೆ ಹೆಚ್ಚಿಸಿದ್ದಾರೆ ಎಂಬುದನ್ನು ಅರಿತು ಮತ ಹಾಕೋಣ. ಅಷ್ಟಕ್ಕೂ ಪ್ರಜಾಪ್ರಭುತ್ವದ ನಿಜವಾದ ಪ್ರಭುಗಳು ನಾವೇ. ಮರೆಯದಿರಿ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search