• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮಾಡಿದರು ಅಭಿವೃದ್ಧಿ ಮೋಡಿ, ಮುಂದಿನ ಅವಧಿಗೂ ಅವರೇ ಪ್ರಧಾನಿಯಾಗುತ್ತಾರಂತೆ ನೋಡಿ!

TNN Correspondent Posted On May 25, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಎಂದರೇನೆ ಹಾಗೆ. ಅವರು ಪ್ರಧಾನಿಯಾಗುವ ಮೊದಲೇ ಇಡೀ ದೇಶದ ಜನರನ್ನು ಆವರಿಸಿದ್ದರು. ವಿರೋಧಿಗಳು, ಕಡು ವಿರೋಧಿಗಳು, ಮೋದಿ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟವರು, ರಾಜಕೀಯದಿಂದಲೇ ಮನೆಗೆ ಕಳುಹಿಸಬೇಕು ಎಂದು ಶಪಥ ಮಾಡಿದವರು… ಹೂಂ, ಹೂಂ, ಯಾರೆಂದರೆ ಯಾರಿಗೂ ಮೋದಿ ಜಗ್ಗಲಿಲ್ಲ.

ನರೇಂದ್ರ ಮೋದಿ ಅವರ ಈ ಅಲೆಯ ಪರಿಣಾಮ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನ ಗೆದ್ದಿತು. ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂತು. ಆದರೆ ನರೇಂದ್ರ ಮೋದಿ ಅವರು ಪದವಿ ಸಿಕ್ಕ ತಕ್ಷಣ ಮೈಮರೆಯಲಿಲ್ಲ. ಬದಲಾಗಿ ಭಾರತದ ಅಭಿವೃದ್ಧಿಗಾಗಿ ಒಂದು ದಿನವೂ ಕೆಲಸ ಮಾಡದೆ ದುಡಿಯುತ್ತಿದ್ದಾರೆ. ಮೋದಿ ಆಡಳಿತದಲ್ಲಿ ಭಾರತ ಬದಲಾವಣೆ ಕಾಣುತ್ತಿದೆ.

ಇದನ್ನು ಮನಗಂಡಿರುವ ಪ್ರತಿಪಕ್ಷಗಳು ಈಗಾಗಲೇ 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಹಣೆಯಲು ಒಂದಾಗಿವೆ. ತಂತ್ರ-ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಆದರೆ ಮೋದಿ ಅವರ ವಿರುದ್ಧ ಇಷ್ಟೆಲ್ಲ ಶಕ್ತಿಗಳು ಒಂದಾಗಿದ್ದರೂ, ಇಂದಿಗೂ ನರೇಂದ್ರ ಮೋದಿ ಅವರ ಮೇಲೆ ಜನ ಅಪಾರ ಪ್ರೀತಿ, ಅಭಿಮಾನ, ವಿಶ್ವಾಸ ಇಟ್ಟಿದ್ದಾರೆ. ಇದಕ್ಕೆ ಸಾಕ್ಷಿಯಾಗಿ 2019ರ ಲೋಕಸಭೆ ಚುನಾವಣೆಯ ಸಮೀಕ್ಷಾ ವರದಿ ಬಹಿರಂಗವಾಗಿದ್ದು, ನರೇಂದ್ರ ಮೋದಿ ಅವರು ಮತ್ತೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಳಿದುಬಂದಿದೆ,

ಹೌದು, 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಟೈಮ್ಸ್ ನೌ ಸಂಸ್ಥೆ ಕ್ರೋಮ್ ಡಾಟಾ ಅನಾಲಿಟಿಕ್ಸ್ ಮೂಲಕ ಸಮೀಕ್ಷೆ ನಡೆಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 318 ಸಂಸತ್ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ತಿಳಿದುಬಂದಿದೆ.

ಸಮೀಕ್ಷೆಗಾಗಿ ಮೇ 9ರಿಂದ ಮೇ 22ರ ಅವಧಿಯಲ್ಲಿ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 13,575 ಜನರ ಅಭಿಪ್ರಾಯ ಸಂಗ್ರಹಿಸಿದ್ದು, ಶೇ.51ರಷ್ಟು ಜನ ನರೇಂದ್ರ ಮೋದಿಯವರೇ ಮುಂದಿನ ಅವಧಿಗೂ ಪ್ರಧಾನಿಯಾಗಿ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇವಲ ಶೇ.23ರಷ್ಟು ಜನ ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದಿದ್ದಾರೆ. ಒಟ್ಟಿನಲ್ಲಿ ಮೋದಿ ಅವರು ಕೈಗೊಂಡ ಅಭಿವೃದ್ಧಿಗೆ ದೇಶದ ಜನ ಮನಸೋತಿದ್ದು, ಅವರೇ ಮುಂದಿನ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ಅದಕ್ಕೆ ಸಮೀಕ್ಷಾ ವರದಿಗಳೂ ಪೂರಕವಾಗಿವೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search