• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಮಾಡಿದರು ಅಭಿವೃದ್ಧಿ ಮೋಡಿ, ಮುಂದಿನ ಅವಧಿಗೂ ಅವರೇ ಪ್ರಧಾನಿಯಾಗುತ್ತಾರಂತೆ ನೋಡಿ!

TNN Correspondent Posted On May 25, 2018
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿ ಎಂದರೇನೆ ಹಾಗೆ. ಅವರು ಪ್ರಧಾನಿಯಾಗುವ ಮೊದಲೇ ಇಡೀ ದೇಶದ ಜನರನ್ನು ಆವರಿಸಿದ್ದರು. ವಿರೋಧಿಗಳು, ಕಡು ವಿರೋಧಿಗಳು, ಮೋದಿ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟವರು, ರಾಜಕೀಯದಿಂದಲೇ ಮನೆಗೆ ಕಳುಹಿಸಬೇಕು ಎಂದು ಶಪಥ ಮಾಡಿದವರು… ಹೂಂ, ಹೂಂ, ಯಾರೆಂದರೆ ಯಾರಿಗೂ ಮೋದಿ ಜಗ್ಗಲಿಲ್ಲ.

ನರೇಂದ್ರ ಮೋದಿ ಅವರ ಈ ಅಲೆಯ ಪರಿಣಾಮ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 282 ಸ್ಥಾನ ಗೆದ್ದಿತು. ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂತು. ಆದರೆ ನರೇಂದ್ರ ಮೋದಿ ಅವರು ಪದವಿ ಸಿಕ್ಕ ತಕ್ಷಣ ಮೈಮರೆಯಲಿಲ್ಲ. ಬದಲಾಗಿ ಭಾರತದ ಅಭಿವೃದ್ಧಿಗಾಗಿ ಒಂದು ದಿನವೂ ಕೆಲಸ ಮಾಡದೆ ದುಡಿಯುತ್ತಿದ್ದಾರೆ. ಮೋದಿ ಆಡಳಿತದಲ್ಲಿ ಭಾರತ ಬದಲಾವಣೆ ಕಾಣುತ್ತಿದೆ.

ಇದನ್ನು ಮನಗಂಡಿರುವ ಪ್ರತಿಪಕ್ಷಗಳು ಈಗಾಗಲೇ 2019ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರನ್ನು ಹಣೆಯಲು ಒಂದಾಗಿವೆ. ತಂತ್ರ-ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಆದರೆ ಮೋದಿ ಅವರ ವಿರುದ್ಧ ಇಷ್ಟೆಲ್ಲ ಶಕ್ತಿಗಳು ಒಂದಾಗಿದ್ದರೂ, ಇಂದಿಗೂ ನರೇಂದ್ರ ಮೋದಿ ಅವರ ಮೇಲೆ ಜನ ಅಪಾರ ಪ್ರೀತಿ, ಅಭಿಮಾನ, ವಿಶ್ವಾಸ ಇಟ್ಟಿದ್ದಾರೆ. ಇದಕ್ಕೆ ಸಾಕ್ಷಿಯಾಗಿ 2019ರ ಲೋಕಸಭೆ ಚುನಾವಣೆಯ ಸಮೀಕ್ಷಾ ವರದಿ ಬಹಿರಂಗವಾಗಿದ್ದು, ನರೇಂದ್ರ ಮೋದಿ ಅವರು ಮತ್ತೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಳಿದುಬಂದಿದೆ,

ಹೌದು, 2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಟೈಮ್ಸ್ ನೌ ಸಂಸ್ಥೆ ಕ್ರೋಮ್ ಡಾಟಾ ಅನಾಲಿಟಿಕ್ಸ್ ಮೂಲಕ ಸಮೀಕ್ಷೆ ನಡೆಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 318 ಸಂಸತ್ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ತಿಳಿದುಬಂದಿದೆ.

ಸಮೀಕ್ಷೆಗಾಗಿ ಮೇ 9ರಿಂದ ಮೇ 22ರ ಅವಧಿಯಲ್ಲಿ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 13,575 ಜನರ ಅಭಿಪ್ರಾಯ ಸಂಗ್ರಹಿಸಿದ್ದು, ಶೇ.51ರಷ್ಟು ಜನ ನರೇಂದ್ರ ಮೋದಿಯವರೇ ಮುಂದಿನ ಅವಧಿಗೂ ಪ್ರಧಾನಿಯಾಗಿ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೇವಲ ಶೇ.23ರಷ್ಟು ಜನ ಮಾತ್ರ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದಿದ್ದಾರೆ. ಒಟ್ಟಿನಲ್ಲಿ ಮೋದಿ ಅವರು ಕೈಗೊಂಡ ಅಭಿವೃದ್ಧಿಗೆ ದೇಶದ ಜನ ಮನಸೋತಿದ್ದು, ಅವರೇ ಮುಂದಿನ ಪ್ರಧಾನಿಯಾಗುತ್ತಾರೆ ಎನ್ನಲಾಗುತ್ತಿದೆ. ಅದಕ್ಕೆ ಸಮೀಕ್ಷಾ ವರದಿಗಳೂ ಪೂರಕವಾಗಿವೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search