• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಂಟ್ವಾಳದ ಈ ಶಾಲೆಯಂತೆಯೇ ಎಲ್ಲ ಶಾಲೆಗಳೂ ಪ್ರಾರಂಭೋತ್ಸವ ಆಚರಿಸಿದರೆ ಎಷ್ಟು ಚೆಂದ ಅಲ್ಲವೇ?

TNN Correspondent Posted On May 27, 2018
0


0
Shares
  • Share On Facebook
  • Tweet It

ಸರ್ಕಾರಿ ಶಾಲೆ ಎಂದರೆ ಹಳೆ ಕಟ್ಟಡ, ಮುರಿದ ಬೆಂಚುಗಳು, ಉತ್ತಮ ಬೋಧಕ ಸಿಬ್ಬಂದಿ ಇಲ್ಲದ, ಶಾಲೆ ಪಲಿತಾಂಶದ ಬಗ್ಗೆ ತಲೆಕೆಡೆಸಿಕೊಳ್ಳದ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯೇ ಇಲ್ಲದ ಸಂಸ್ಥೆಗಳು ಎಂಬ ಮೂಢನಂಬಿಕೆ ತುಂಬ ಜನರಲ್ಲಿದೆ. ಸಿದ್ದರಾಮಯ್ಯರಂತಹ ಮುಖ್ಯಮಂತ್ರಿ ನೇತೃತ್ವದ ಸರ್ಕಾರಗಳೂ ಈ ಮಾತಿಗೆ ಪೂರಕವಾಗಿ ಸರ್ಕಾರಿ ಶಾಲೆ ಮುಚ್ಚಲು ಮುಂದಾಗುತ್ತಾರೆ ಎಂಬುದು ಸಹ ಘೋರ ದುರಂತವೇ ಆಗಿದೆ.

ಆದರೆ ದಕ್ಷಿಣ ಜಿಲ್ಲೆ ಬಂಟ್ವಾಳ ತಾಲೂಕಿನ ಕೆದ್ದಳಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಹೀಗೆ ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವವರಿಗೆ ಛಾಟಿಯೇಟಿನಂತಹ ಕಾರ್ಯ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಹೌದು, ಈ ಶಾಲೆಯ ಮುಖ್ಯೋಪಾಧ್ಯಾಯರು, ಗ್ರಾಮಸ್ಥರು ಎಲ್ಲರೂ ಸೇರಿ ಶಾಲೆಯ ಪ್ರಾರಂಭೋತ್ಸವವನ್ನು ಹಬ್ಬದಂತೆ ಆಚರಿಸಿದ್ದು ಎಲ್ಲ ಸರ್ಕಾರಿ ಶಾಲೆಗಳಿಗೆ ಮಾದರಿಯಾಗಿದೆ.

ಶನಿವಾರ ಶಾಲೆಯ ಪ್ರಾರಂಭೋತ್ಸವ ಆಚರಿಸಿದ್ದು, ಗ್ರಾಮದ ಅಂಗನವಾಡಿಯಿಂದ ಶಾಲೆಯವರೆಗೆ ಮಕ್ಕಳನ್ನು ಮೆರವಣಿಗೆ ಮೂಲಕ ಕರೆತರಲಾಗಿದೆ. ಅಲ್ಲದೆ ಅಂಗನವಾಡಿಯಲ್ಲಿ ನೂತನವಾಗಿ ಶಾಲೆಗೆ ಸೇರಿದ ಮಕ್ಕಳನ್ನು ತೊಟ್ಟಿಲಿನಲ್ಲಿ ಮಲಗಿಸಿ, ಅವರಿಗೆ ಅಕ್ಕಿಯಲ್ಲಿ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಅಕ್ಷರ ಬೀಜ ಬಿತ್ತಿದ್ದಾರೆ.

ಶಾಲೆ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿ ವರ್ಷವೂ ಹೀಗೆ ಅದ್ಧೂರಿಯಾಗಿ ಶಾಲೆಯ ವಾರ್ಷಿಕೋತ್ಸವ ಆಚರಿಸುತ್ತಿದ್ದು, ಪ್ರತಿ ವರ್ಷವೂ ವಿಭಿನ್ನತೆ ಮೆರೆಯಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಶಾಲೆ ಮುಖ್ಯೋಪಾಧ್ಯಾಯರು, ಎಸ್ಡಿಎಂಸಿ ಅಧ್ಯಕ್ಷರು, ಗ್ರಾಮದ ಹಿರಿಯರು, ಪೋಷಕರು ಆಗಮಿಸಿ, ಮಕ್ಕಳನ್ನು ಓದಿನತ್ತ ಒರೆಗೆ ಹಚ್ಚುತ್ತಿದ್ದಾರೆ. ಇಂತಹ ಶಾಲೆಗಳ ಸಂಖ್ಯೆ ಸಾವಿರವಾಗಲಿ ಎಂಬುದೇ ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search