• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಗಳು ಅಸಹಿಷ್ಣುಗಳು ಎನ್ನುವವರೇ, ಮುಸ್ಲಿಂ ಮಹಿಳೆಗೆ ರಕ್ತ ಕೊಟ್ಟು ಪ್ರಾಣ ಉಳಿಸಿದ ಈ ಹಿಂದೂ ಬಗ್ಗೆ ಏನೆನ್ನುತ್ತೀರಿ?

TNN Correspondent Posted On May 27, 2018
0


0
Shares
  • Share On Facebook
  • Tweet It

ಹಿಂದೂಗಳು ಎಂದರೆ ಅನ್ಯಧರ್ಮಗಳ ವಿರೋಧಿಗಳು, ತಮ್ಮ ಧರ್ಮವನ್ನು ಹಾಗೂ ಧರ್ಮೀಯರನ್ನು ಮಾತ್ರ ಪ್ರೀತಿಸುವವರು, ಅನ್ಯಧರ್ಮದ ಬಗ್ಗೆ ಸೈರಣೆ ಹೊಂದಿದವರು, ಹಿಂದುತ್ವ ಮುನ್ನೆಲೆಗೆ ಬರುತ್ತಿದ್ದು, ಬೇರೆ ಧರ್ಮೀಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಲವು ಕೆಲಸವಿಲ್ಲದ ಬುದ್ಧಿಜೀವಿಗಳು, ಎಡಬಿಡಗಂಗಿಗಳು, ಸೋ ಕಾಲ್ಡ್ ಪ್ರಗತಿಪರರು ಆಗಾಗ ಬೊಬ್ಬೆ ಹಾಕುವ ಮೂಲಕ ಧರ್ಮ, ಧರ್ಮೀಯರ ನಡುವೆಯೇ ತಂದಿಡುವ ಕೆಲಸ ಮಾಡುತ್ತಾರೆ.

ಆದರೆ ಇದು ಸುಳ್ಳು ಎಂಬುದು ಹಿಂದಿನಿಂದಲೂ ಸಾಬೀತಾಗುತ್ತಲೇ ಬಂದಿದೆ. ಹೀಗೆ ಹಿಂದೂಗಳು ಅನ್ಯ ಧರ್ಮೀಯರನ್ನು ಪ್ರೀತಿಸುತ್ತಾರೆ ಎಂಬುದಕ್ಕೆ ಮೂಡುಬಿದರೆಯಲ್ಲಿ ನೂತನ ನಿದರ್ಶನವೊಂದು ಸಿಕ್ಕಿದೆ.

ಆ ಮುಸ್ಲಿಂ ಗರ್ಭಿಣಿಯ ಹೆಸರು ಫಾತಿಮಾ. ನಗರದ ಜಿ.ಎ.ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆಕೆಗೆ ರಕ್ತದ ಅವಶ್ಯಕತೆ ಇತ್ತು. ಆಸ್ಪತ್ರೆಯ ಬ್ಲಡ್ ಬ್ಯಾಂಕಿನಲ್ಲಿ ರಕ್ತವಿರದ ಕಾರಣ, ನಿಮಗೆ ಯಾರಿಗಾದರೂ ಪರಿಚಯ ಇದ್ದರೆ ಒಂದು ಯೂನಿಟ್ ರಕ್ತದಾನ ಮಾಡುತ್ತಾರಾ ಕೇಳಿ ಎಂದು ಕುಟುಂಬಸ್ಥರಿಗೆ ಹೇಳಿದ್ದರು.

ಅದು ರಾತ್ರಿ ವೇಳೆಯಾಗಿದ್ದರಿಂದ ಮೂಡುಬಿದರೆಯ ರಕ್ತದಾನಿಗಳಿಗೆ ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ, ಒಂದಿಬ್ಬರಿಗೆ ಕೇಳಿದ್ದರೂ ರಕ್ತ ಸಿಕ್ಕಿರಲಿಲ್ಲ. ಅತ್ತ ಫಾತಿಮಾ ಸ್ಥಿತಿಯೂ ಮತ್ತಷ್ಟು ಗಂಭೀರವಾಗತೊಡಗಿತು.

ಕೊನೆಯ ಆಯ್ಕೆ ಎಂಬಂತೆ ಕನೆಕ್ಟ್ ಮೂಡುಬಿದರೆ ಅಪ್ಲಿಕೇಶನ್ ಗೆ ಮಾಹಿತಿ ನೀಡಲಾಗಿದೆ. ಆಗ ಬೆಳಗ್ಗೆ 5 ಗಂಟೆಗೆ ಯೋಗೇಶ್ ಕೊಡ್ಯಡ್ಕ ಎಂಬ ಹಿಂದೂ ಯುವಕ ಬಂದು ಮುಸ್ಲಿಂ ಮಹಿಳೆಗೆ ರಕ್ತ ನೀಡಿ ಆಕೆಯ ಜೀವ ಉಳಿಸಿದ್ದಾನೆ. ಆ ಮೂಲಕ ಧರ್ಮ ಸಹಿಷ್ಣುತೆ ಮೆರೆದಿದ್ದಾನೆ. ಇನ್ನಾದರೂ ಹಿಂದೂಗಳ ಬಗ್ಗೆ ಇರುವ ಅಪನಂಬಿಕೆ ಬಿಡಿ.

 

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search