• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1 ಲಕ್ಷ ಉದ್ಯೋಗ ಸೃಷ್ಟಿಗೆ ಚಿಂತನೆ, ಹೊಸ ಭಾಷ್ಯ ಬರೆದ ಮಧ್ಯಪ್ರದೇಶ ಬಿಜೆಪಿ ಸರ್ಕಾರ

TNN Correspondent Posted On May 27, 2018
0


0
Shares
  • Share On Facebook
  • Tweet It

ಭೋಪಾಲ್: ಯಾವುದೇ ರಾಜ್ಯ ಸರ್ಕಾರವಿರಲಿ, ತಾನು ಆಡಳಿತ ನಡೆಸಿದ ಅವಧಿಯಲ್ಲಿ ಇಷ್ಟು ಉದ್ಯೋಗ ಸೃಷ್ಟಿಸಿದ್ದೇವೆ ಎಂದು ಹೇಳುತ್ತದೆಯೇ ಹೊರತು, ಒಂದೇ ದಿನ ಒಂದು ಲಕ್ಷ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಘೋಷಿಸುವುದು ಕಷ್ಟಸಾಧ್ಯ. ಆದರೆ ಈ ಕಷ್ಟಸಾಧ್ಯವನ್ನೂ ಮಧ್ಯಪ್ರದೇಶ ಬಿಜೆಪಿ ಸರ್ಕಾರ ಸರಳಗೊಳಿಸಿದ್ದು, ಒಂದು ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಿದೆ.

ಹೌದು, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇಂತಹ ಮಹತ್ತರ ನಿರ್ಧಾರ ಘೋಷಿಸಿದ್ದು, ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸೃಷ್ಟಿಸಿ, ಸುಮಾರು 1 ಲಕ್ಷ ಯುವಕರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಧ್ಯಪ್ರದೇಶ ಕೌಶಲ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಮಂಡಳಿಯು ಪುಣೆ ಮೂಲದ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಮಹಾ ಪಂಚಾಯಿತಿ ಸ್ಥಾಪನೆ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈನಲ್ಲಿ ರಾಜ್ಯದ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ಸ್ಥಾಪನೆ ಮಾಡಲಿದ್ದು, ಖಾಸಗಿ ಸಹಭಾಗಿತ್ವಕ್ಕಾಗಿ ಸುಮಾರು ಒಂದು ಸಾವಿರ ಖಾಸಗಿ ಕಂಪನಿಗಳಿಗೆ ಮಂಡಳಿ ಆಹ್ವಾನ ನೀಡಿದೆ. ಸ್ಥಾಪನೆ ಮಾಡುವ ಕುರಿತು ಇದುವರೆಗೂ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಸುಮಾರು 11.24 ಲಕ್ಷ ಪದವೀಧರ ಯುವಕರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು 2018ರ ಎಕನಾಮಿಕ್  ಸಮೀಕ್ಷೆಯಿಂದ ಬಹಿರಂಗವಾಗಿದ್ದು, ಈ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ಒಂದು ಲಕ್ಷ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಅಲ್ಲದೆ 51 ಜಿಲ್ಲೆಗಳಲ್ಲಿ ಮಹಾಪಂಚಾಯಿತಿ ನಿರ್ಮಾಣ ಮಾಡುವುದರಿಂದ ಅಧಿಕಾರದ ವಿಕೇಂದ್ರೀಕರಣ ಹಾಗೂ ಸ್ಥಳೀಯ ಆಡಳಿತ ಬಲವಾಗಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search