• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಳೆ ಕಡಿಮೆ ಬಿದ್ದ ಕಾರಣ ಚುನಾವಣೆ ಬೇಗ! ಜುಲೈ 23 ಕ್ಕೆ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ?

TNN Correspondent Posted On July 21, 2017


  • Share On Facebook
  • Tweet It

ರಾಜ್ಯ ಸರಕಾರ ಸೆಪ್ಟೆಂಬರ್ ಮೊದಲ ವಾರದಲ್ಲಿ ವಿಧಾನಸಭೆಯನ್ನು ವಿಸರ್ಜಿಸುವ ಪ್ರಕ್ರಿಯೆಗೆ ಕೈ ಹಾಕಲಿದೆ ಎಂದು ಕಾಂಗ್ರೆಸ್ಸಿನ ಒಳಗಿನ ಮೂಲಗಳು ಹೇಳಿವೆ. ಅದಕ್ಕೆ ಕಾರಣ ಮಳೆ. ರಾಜ್ಯದ ಅನೇಕ ತಾಲೂಕುಗಳಲ್ಲಿ ಜುಲೈ ಮುಗಿಯುತ್ತಾ ಬರುತ್ತಿದ್ದರೂ ನಿರೀಕ್ಷಿದಷ್ಟು ಮಳೆ ಬಂದಿಲ್ಲ. ಇದರಿಂದ ಮುಂದೆ ಮಾರ್ಚ್ ನಲ್ಲಿ ರಾಜ್ಯದಲ್ಲಿ ನೀರಿನ ಹಾಹಾಕಾರ ಏಳಲಿದೆ. ಫೆಬ್ರವರಿ, ಮಾರ್ಚ್ ಹೊತ್ತಿಗೆ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಲ್ಲಿ ಜನರನ್ನು ನಿಯಂತ್ರಿಸುವುದು ಕಷ್ಟದ ಮಾತು. ಜನರಿಗೆ, ಜಾನುವಾರುಗಳಿಗೆ ನೀರು ಸಿಗದೆ ಹೋದರೆ ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು. ಚುನಾವಣೆಗೆ ದಿನಗಣನೆ ಆರಂಭವಾಗುವ ಸಮಯದಲ್ಲಿ ನೀರಿನ ಬವಣೆಯಿಂದ ತತ್ತರಿಸುತ್ತಿರುವ ಕರ್ನಾಟಕ ಎಂದು ಮಾಧ್ಯಮಗಳಲ್ಲಿ ಬಂದರೆ ಜನರ ಮನೆ ಬಾಗಿಲಿಗೆ ವೋಟು ಕೇಳಲು ಹೋಗುವುದು ಕೂಡ ಕಷ್ಟ. ಹಾಗಿರುವಾಗ ಅದನ್ನೆಲ್ಲ ತಪ್ಪಿಸಬೇಕಾದರೆ ಡಿಸೆಂಬರ್ ಮುಗಿಯುವ ಹೊತ್ತಿಗೆ ಹೊಸ ಸರಕಾರ ರಚಿಸಬೇಕು ಎನ್ನುವುದು ರಾಜ್ಯದ ಉನ್ನತ ನಾಯಕರ ಚಿಂತನೆ.

 

ಯಾವತ್ತೂ ಬರ ಜಿಲ್ಲೆ ಎಂದು ಘೋಷಣೆಯಾಗಿರದ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೂಡ ಈ ಬಾರಿ ಬರಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ. ಮಡಿಕೇರಿಯಲ್ಲಿ ಜುಲೈ ಉತ್ತರಾರ್ಧದಲ್ಲಿ ಮಳೆ ಸುರಿದಿದೆ ಬಿಟ್ಟರೆ ಇಲ್ಲಿಯ ತನಕ ಅಲ್ಲಿ ಮಳೆಯ ಸುಳಿವೇ ಇರಲಿಲ್ಲ. ಅನೇಕ ತಾಲೂಕುಗಳು ನೀರಿಗಾಗಿ ಬಾಯಿ ಬಾಯಿ ಬಡಿದುಕೊಳ್ಳುತ್ತಾ ಇದೆ. ಬಿಎಸ್ ವೈ ಟೀಂ ಈಗಾಗಲೇ ಬರಪೀಡಿತ ತಾಲೂಕುಗಳ ಸರ್ವೆ ಮಾಡಿ ಮುಗಿಸಿದೆ. ಹೀಗಿರುವಾಗ ಇದು ಮುಂದುವರೆದರೆ ಫೆಬ್ರವರಿ, ಮಾರ್ಚ್ ಹೊತ್ತಿಗೆ ರೈತರ ಬಗ್ಗೆ ಜೆಡಿಎಸ್ ವಿಪರೀತ ಕಾಳಜಿ ತೋರಿಸುವ ರೀತಿಯಲ್ಲಿ ಎನಾದರೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಮುಂದಿನ ಬಾರಿ ವಿಪಕ್ಷ ಸ್ಥಾನ ಸಿಗುವುದು ಕೂಡ ಕಷ್ಟ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅನಿಸಿದೆ ಎಂದು ಬಲ್ಲ ಮೂಲಗಳು ಹೇಳಿವೆ.

ಆದ್ದರಿಂದ ಡಿಸೆಂಬರ್ ಒಳಗೆ ಚುನಾವಣೆ ಮುಗಿದರೆ ರಾಜ್ಯ ಸರಕಾರವೂ ನಿರಾಳ, ವಿಪಕ್ಷಗಳ ಕಟು ಟೀಕೆಗಳು ಕೂಡ ನೀರಿನ ವಿಷಯದಲ್ಲಿ ಬರುವ ಸಾಧ್ಯತೆಗಳು ಇಲ್ಲ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ತಂಡಕ್ಕೂ ಗೊತ್ತಾಗಿದೆ. ಅದಕ್ಕಾಗಿ ಡಿಸೆಂಬರ್ ಒಳಗೆ ಚುನಾವಣೆ ಆಗಬೇಕಾದರೆ ಸೆಪ್ಟೆಂಬರ್ ಮೊದಲ ವಾರ ರಾಜ್ಯ ವಿಧಾನಸಭೆ ವಿಸರ್ಜನೆ ಆಗಲೇಬೇಕು, ಬೇರೆ ಉಪಾಯವಿಲ್ಲ. ಇದೇ ಜುಲೈ 23 ಕ್ಕೆ ನಡಯಲಿರುವ ಕೋರಂ ಟೀಂ ಸಭೆಯಲ್ಲಿ ಟೀಂ ಸದಸ್ಯರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರಕ್ಕೆ ರಾಜ್ಯ ಸರಕಾರ ಬರಲಿದೆ.

ಇದರೊಂದಿಗೆ ಡಿಸೆಂಬರ್ ನಲ್ಲಿ ಗುಜರಾತ್ ವಿಧಾನಸಭೆಗೂ ಚುನಾವಣೆ ನಡೆಯಲಿರುವುದರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕಕ್ಕಿಂತ ಅದು ಪ್ರತಿಷ್ಟೆಯ ಪ್ರಶ್ನೆಯಾಗಿರುವುದರಿಂದ ಇತ್ತ ಕಡೆ ಗಮನ ಕೊಡಲು ಆಗಲಿಕ್ಕಿಲ್ಲ ಎನ್ನುವ ಐಡಿಯಾ ಕೂಡ ಇದೆ. ಅದು ಬಿಟ್ಟು ಗುಜರಾತ್ ಚುನಾವಣೆ ನಡೆದ ನಂತರ ಅಮಿತ್ ಶಾ ಬೆಂಗಳೂರಿಗೆ ಬಂದು ಝಂಡಾ ಊರಿದರೆ ನಂತರ ಅವರು ಇಲ್ಲಿನ ಕಾಂಗ್ರೆಸ್ಸನ್ನು ಗುಡಿಸಿಯೇ ಹೋದರೆ ಕಷ್ಟ ಎನ್ನುವ ಅಭಿಪ್ರಾಯ ತಳಮಟ್ಟದ ಕಾರ್ಯಕರ್ತರಲ್ಲಿ ಇರುವುದನ್ನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಪರಮೇಶ್ವರ್ ಕೂಡ ಗಮನಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search