• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಮಾಯಾವತಿ ಬಿಎಸ್ಪಿಯನ್ನು ಹೇಗೆ ಕುಟುಂಬದ ಸೊತ್ತು ಮಾಡಿಕೊಂಡಿದ್ದಾರೆ ಗೊತ್ತಾ?

TNN Correspondent Posted On May 28, 2018
0


0
Shares
  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯವರು ಆಗಾಗ ಪ್ರಜಾಪ್ರಭುತ್ವಕ್ಕೆ ಧಕ್ಕೆ ಎದುರಾಗಿದೆ. ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಣಿಮುತ್ತು ಉದುರಿಸುತ್ತಾರೆ. ರಾಜ್ಯದಲ್ಲಿ ಬಿಎಸ್ಪಿ ಮೂಲೆಗುಂಪಾಗಿರುವುದನ್ನು ಸಹಿಸದೆ, ತಮ್ಮ ಅಸ್ತಿತ್ವಕ್ಕಾಗಿ ಮಾಯಾವತಿ ಹೀಗೆಲ್ಲ ಮಾತನಾಡುತ್ತಾರೆ ಎಂದು ನಿರ್ಲಕ್ಷಿಸಬಹುದು.

ಆದರೆ ಪ್ರಜಾಪ್ರಭುತ್ವದ ಬಗ್ಗೆ ಇಷ್ಟೆಲ್ಲ ಭಾಷಣ ಬಿಗಿಯುವ ಮಾಯಾವತಿಯುವರು ಪ್ರಜಾಪ್ರಭುತ್ವದ ಕೆಲವು ಅಂಶಗಳನ್ನು ಪಾಲಿಸಬೇಕಲ್ಲವೇ? ಕಳೆದ ಹಲವು ವರ್ಷಗಳಿಂದ ಯಾರಿಗೂ ಬಿಟ್ಟುಕೊಡದೆ ಬಿಎಸ್ಪಿಯ ಅಧಿನಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಯಾವತಿಯವರಿಗೆ ಇನ್ನೂ 20 ವರ್ಷ ಬಿಎಸ್ಪಿಯ ಅಧ್ಯಕ್ಷೆಯಾಗಿ ಮುಂದುವರಿಯುವ ಆಸೆಯಂತೆ. ಅಲ್ಲಿಗೆ ಇವರು ಪ್ರಜಾಪ್ರಭುತ್ವದ ಮೇಲೆ ಎಷ್ಟು ಗೌರವ ಇಟ್ಟಿದ್ದಾರೆ ಎಂದಾಯಿತಲ್ಲವೇ?

ಹೌದು, ರಾಜ್ಯ ರಾಜಧಾನಿ ಲಖನೌನಲ್ಲಿ ಆಯೋಜಿಸಲಾಗಿದ್ದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ 20 ವರ್ಷಗಳವರೆಗೆ ನಾನೇ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತೇನೆ. ಯಾರೂ ಅಧ್ಯಕ್ಷಗಿರಿಯ ಮೇಲೆ ಕಣ್ಣಿಡಬೇಡಿ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಅಷ್ಟೇ ಅಲ್ಲ, ಬಿಎಸ್ಪಿ ಸಂಸ್ಥಾಪಕ, ಇದೇ ಮಾಯಾವತಿಯ ಗುರು ಕಾನ್ಶಿರಾಮ್ ಅವರ ಆಶಯಗಳಿಗೂ ಮಾಯಾವತಿ ಕೊಳ್ಳಿ ಇಟ್ಟಿದ್ದಾರೆ. ಕಾನ್ಶಿರಾಮ್ ಅವರು ತಾವು ಇರುವ ತನಕ ತಮ್ಮ ಸಂಬಂಧಿಗಳನ್ನು ಪಕ್ಷದ  ಹಾಗೂ ರಾಜಕೀಯದ ಮೊಗಸಾಲೆಯೊಳಗೆ ಬಿಟ್ಟಿರಲಿಲ್ಲ. ಅದಕ್ಕಾಗಿ ಪಕ್ಷದಲ್ಲಿ ನಿಯಮ ಸಹ ರೂಪಿಸಿದ್ದರು.

ಆದರೆ ಕುಮಾರಿ ಮಾಯಾವತಿಯವರು ಕಾನ್ಶಿರಾಮ್ ಅವರ ಆಶಯ ಮಣ್ಣುಪಾಲು ಮಾಡಿ, ಪಕ್ಷದ ನಿಯಮಗಳಿಗೆ ತಿದ್ದುಪಡಿ ತಂದು ತಮ್ಮ ಸಹೋದರನಿಗೆ ಉಪಾಧ್ಯಕ್ಷ ಸ್ಥಾನ ನೀಡುವ ಮೂಲಕ ಬಿಎಸ್ಪಿಯನ್ನು ತಮ್ಮ ವಂಶದ ಸೊತ್ತು ಎಂಬಂತೆ ನಡೆದುಕೊಂಡಿದ್ದಾರೆ. ಇದೇ ಕಾರಣಕ್ಕೆ ಬೇಸತ್ತು ಹಲವು ಮುಖಂಡರು ಇತ್ತೀಚೆಗೆ ಬಿಜೆಪಿ ಸೇರಿದ್ದರು ಎಂಬುದು ಸಹ ಇಲ್ಲಿ ಗಮನಾರ್ಹ. ಹೇಳಿ ಮಾಯಾವತಿಯವರ ಬಾಯಲ್ಲಿ ಬರುವ ಪ್ರಜಾಪ್ರಭುತ್ವಕ್ಕೆ ಅವರೇ ಎಷ್ಟು ಗೌರವ ಕೊಡುತ್ತಿದ್ದಾರೆ ಎಂದು?

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search