• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಂದುವರಿದ ಕೆಂಪು ಉಗ್ರರ ಬೇಟಿ, ಮಾವೋವಾದಿ ಮುಖಂಡ ಸೇರಿ ಮೂವರ ಉಡೀಸ್!

TNN Correspondent Posted On May 30, 2018
0


0
Shares
  • Share On Facebook
  • Tweet It

ರಾಯಪುರ: ಇತ್ತೀಚೆಗೆ ಛತ್ತೀಸ್ ಗಡದಲ್ಲಿ ಕೆಂಪು ಉಗ್ರರು ಅರ್ಥಾತ್ ಮಾವೋವಾದಿಗಳ ಉಪಟಳ ಜಾಸ್ತಿಯಾಗಿದ್ದು, ಇದಕ್ಕೆ ಪ್ರತ್ಯುತ್ತರವಾಗಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು, ಕೆಲವು ದಿನಗಳ ಹಿಂದಷ್ಟೇ ಹಲವು ಮಾವೋವಾದಿಗಳನ್ನು ಹತ್ಯೆ ಮಾಡುವ ಮೂಲಕ ತಕ್ಕ ಪಾಠ ಕಲಿಸಿದ್ದರು.

ಈಗ ಮತ್ತೆ ಛತ್ತೀಸ್ ಗಡದಲ್ಲಿ ಭಾರತೀಯ ಭದ್ರತಾಪಡೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ರಜ್ಞಾಂಡ್ ಗಾಂವ್ ನ ಬೊರ್ತಾಲಾವ್ ಎಂಬ ಪ್ರದೇಶದಲ್ಲಿ ಮಾವೋವಾದಿಗಳ ಡೆಪ್ಯೂಟಿ ಕಮಾಂಡೋ ಹಾಗೂ ಆತನ ಇಬ್ಬರು ಬೆಂಬಲಿಗರನ್ನು ಹೊಡೆದುರುಳಿಸಲಾಗಿದೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಗುಡ್ಡಗಾಡು ಪ್ರದೇಶದಲ್ಲಿ ಗಸ್ತು ತಿರುಗುವಾಗ ಉಪಟಳ ಆರಂಭಿಸಿದ್ದ ಮಾವೋವಾದಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಕೆರಳಿದ ಪೊಲೀಸರು ಇಡೀ ಬೆಟ್ಟದಲ್ಲಿ ಕಾರ್ಯಾಚರಣೆ ಕೈಗೊಂಡು ಯಶಸ್ವಿಯಾಗಿದ್ದು, ಮೂವರು ಮಾವೋವಾದಿಗಳನ್ನು ಹೊಡೆದುಹಾಕಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರ್ ವಾಲ್ ಮಾಹಿತಿ ನೀಡಿದ್ದಾರೆ.

ಈ ಮೂವರು ಮಾವೋವಾದಿಗಳಲ್ಲಿ ಒಬ್ಬ ಡರ್ರೆಕಾಸಾ ಪ್ರದೇಶದ ಡೆಪ್ಯೂಟಿ ಕಮಾಂಡರ್ ಆಗಿದ್ದು, ಆತನನ್ನು ಆಜಾದ್ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮಾವೋವಾದಿಗಳ ತಂಡದ ಬೆಂಬಲಿಗರಾಗಿದ್ದು, ಮಾವೋವಾದಿಗಳಿಗೆ ಅವಶ್ಯಕವಾಗಿರುವ ವಿವಿಧ ವಸ್ತುಗಳನ್ನು ಸರಬರಾಜು ಮಾಡುವುದು ಇವರ ಕಾರ್ಯವಾಗಿತ್ತು ಎಂದು ಪ್ರಶಾಂತ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಛತ್ತೀಸ್ ಗಡ ಕಾಡಿನಲ್ಲಿ ಅವಿತು ಜನಸಾಮಾನ್ಯ ಬದುಕಿನೊಂದಿಗೆ ಆಟವಾಡುವ ಮಾವೋವಾದಿಗಳಿಗೆ ಭಾರತೀಯ ಭದ್ರತಾ ಸಿಬ್ಬಂದಿ ಸರಿಯಾಗಿಯೇ ಪಾಠ ಕಲಿಸುತ್ತಿದ್ದು, ಗುಂಡಿಕ್ಕಿ ಕೊಲ್ಲುತ್ತಿದೆ. ಛತ್ತೀಸ್ ಗಡದ ಇಡೀ ಮಾವೋವಾದಿಗಳ ಸಂತತಿಯೇ ನಾಶವಾಗಲಿ ಎಂಬುದೇ ನಮ್ಮ ಆಶಯ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search