• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಚ್ಚೇ ದಿನ್ ಎಲ್ಲಿ ಎನ್ನುವವರೇ ಕೇಳಿ, ಒಂದೇ ಯೋಜನೆ ದೇಶದ 12 ಕೋಟಿ ಜನರಿಗೆ ಲಾಭವಾಗಿರುವುದನ್ನು

TNN Correspondent Posted On May 30, 2018


  • Share On Facebook
  • Tweet It

ದೆಹಲಿ: ದೇಶದಲ್ಲಿ ಅಚ್ಛೇ ದಿನ್ ಇಲ್ಲ, ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ ಎಂದು ಸದಾ ಬೊಗಳೆ ಬಿಡುತ್ತಿರುವ ಕೆಲವು ಅತೃಪ್ತ ಆತ್ಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪರೋಕ್ಷವಾಗಿ ತಕ್ಕ ಉತ್ತರವನ್ನು ನೀಡಿದ್ದಾರೆ.

ಮಂಗಳವಾರ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಮುದ್ರಾದ ಫಲಾನುಭವಿಗಳ ಜೊತೆಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮೋದಿ ಅವರು, ಮುದ್ರಾ ಯೋಜನೆಯಲ್ಲಿ ಕಿರು ಉದ್ದಿಮೆ, ಸಣ್ಣ ವ್ಯಾಪಾರ ಆರಂಭಸುವವರಿಗೆ ಒಟ್ಟು ಆರು ಲಕ್ಷ ಕೋಟಿ ರೂ. ಸಾಲ ವಿತರಿಸಲಾಗಿದೆ. ಮುದ್ರಾ ಯೋಜನೆಯಿಂದ ದೇಶಾದ್ಯಂತ ಸುಮಾರು 12 ಕೋಟಿ ಜನರಿಗೆ ಲಾಭವಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಹಿಂದೆ ಅಧಿಕಾರ ನಡೆಸಿದ ಸರ್ಕಾರಗಳು ಸಾಲ ಮೇಳಗಳ್ನು ನಡೆಸಿ, ಸಾಲ ವಿತರಿಸಿದರೂ, ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ವಿಫಲರಾಗಿದ್ದರು. ಆದರೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ತಮ್ಮ ವಿಡಿಯೋ ಭಾಷಣದಲ್ಲೂ ಹಿಂದಿನ ಸರ್ಕಾರಗಳ ವೈಪಲ್ಯವನ್ನು ಎತ್ತಿತೋರಿಸಿರುವ ಪ್ರಧಾನಿ ನರೇಂದ್ರ ಮೋದಿ 25-30 ವರ್ಷದ ಹಿಂದೆ ರಾಜಕೀಯ ಲಾಭಕ್ಕಾಗಿ ಸಾಲ ಮೇಳ ಆಯೋಜಿಸಿ, ರಾಜಕಾರಣಿಗಳ ಆಪ್ತರು, ಸಂಬಂಧಿಕರು ಸಾಲ ಪಡೆದು, ಬ್ಯಾಂಕ್ ಗಳಿಗೆ ವಂಚಿಸುತ್ತಿದ್ದರು. ಆದರೆ ನಮ್ಮ ಸರ್ಕಾರ ಸಾಲ ಮೇಳ ಆಯೋಜಿಸದೇ, ಯುವಕರ ಮೇಲೆ ಭರವಸೆ ಇಟ್ಟಿದ್ದು, ನೇರವಾಗಿ ಸಾಲ ಪಡೆದು ಉದ್ಯೋಗ ಆರಂಭಿಸಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

2015ರ ಏಪ್ರಿಲ್‌ 8ರಂದು ಆರಂಭವಾದ ಮುದ್ರಾ ಯೋಜನೆ ಅಡಿಯಲ್ಲಿ ಸಣ್ಣ ವ್ಯಾಪಾರ, ಉದ್ದಿಮೆ ಆರಂಭಿಸಲು 10 ಲಕ್ಷ ರೂವರೆಗೆ ಸಾಲ ನೀಡಲಾಗುತ್ತದೆ. 2017 ರಲ್ಲಿ ಮುದ್ರಾ ಯೋಜನೆಯಲ್ಲಿ ಕೇಂದ್ರ ಸರ್ಕಾರ 2.53 ಲಕ್ಷ ಕೋಟಿ ಸಾಲವನ್ನು ವಿತರಿಸಲಾಗಿತ್ತು. ಇದುವರೆಗೆ ಒಟ್ಟು 5.73 ಲಕ್ಷ ಕೋಟಿ ರೂ. ಸಾಲ ವಿತರಿಸಿದ್ದು, ಕೋಟ್ಯಂತರ ಯುವಕರಿಗೆ ಇದರಿಂದ ಉದ್ಯೋಗ ದೊರಕಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search