• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಚ್ಚೇ ದಿನ್ ಎಲ್ಲಿ ಎನ್ನುವವರೇ ಕೇಳಿ, ಒಂದೇ ಯೋಜನೆ ದೇಶದ 12 ಕೋಟಿ ಜನರಿಗೆ ಲಾಭವಾಗಿರುವುದನ್ನು

TNN Correspondent Posted On May 30, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಅಚ್ಛೇ ದಿನ್ ಇಲ್ಲ, ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ ಎಂದು ಸದಾ ಬೊಗಳೆ ಬಿಡುತ್ತಿರುವ ಕೆಲವು ಅತೃಪ್ತ ಆತ್ಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪರೋಕ್ಷವಾಗಿ ತಕ್ಕ ಉತ್ತರವನ್ನು ನೀಡಿದ್ದಾರೆ.

ಮಂಗಳವಾರ ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಮುದ್ರಾದ ಫಲಾನುಭವಿಗಳ ಜೊತೆಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮೋದಿ ಅವರು, ಮುದ್ರಾ ಯೋಜನೆಯಲ್ಲಿ ಕಿರು ಉದ್ದಿಮೆ, ಸಣ್ಣ ವ್ಯಾಪಾರ ಆರಂಭಸುವವರಿಗೆ ಒಟ್ಟು ಆರು ಲಕ್ಷ ಕೋಟಿ ರೂ. ಸಾಲ ವಿತರಿಸಲಾಗಿದೆ. ಮುದ್ರಾ ಯೋಜನೆಯಿಂದ ದೇಶಾದ್ಯಂತ ಸುಮಾರು 12 ಕೋಟಿ ಜನರಿಗೆ ಲಾಭವಾಗಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಹಿಂದೆ ಅಧಿಕಾರ ನಡೆಸಿದ ಸರ್ಕಾರಗಳು ಸಾಲ ಮೇಳಗಳ್ನು ನಡೆಸಿ, ಸಾಲ ವಿತರಿಸಿದರೂ, ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ವಿಫಲರಾಗಿದ್ದರು. ಆದರೆ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.

ತಮ್ಮ ವಿಡಿಯೋ ಭಾಷಣದಲ್ಲೂ ಹಿಂದಿನ ಸರ್ಕಾರಗಳ ವೈಪಲ್ಯವನ್ನು ಎತ್ತಿತೋರಿಸಿರುವ ಪ್ರಧಾನಿ ನರೇಂದ್ರ ಮೋದಿ 25-30 ವರ್ಷದ ಹಿಂದೆ ರಾಜಕೀಯ ಲಾಭಕ್ಕಾಗಿ ಸಾಲ ಮೇಳ ಆಯೋಜಿಸಿ, ರಾಜಕಾರಣಿಗಳ ಆಪ್ತರು, ಸಂಬಂಧಿಕರು ಸಾಲ ಪಡೆದು, ಬ್ಯಾಂಕ್ ಗಳಿಗೆ ವಂಚಿಸುತ್ತಿದ್ದರು. ಆದರೆ ನಮ್ಮ ಸರ್ಕಾರ ಸಾಲ ಮೇಳ ಆಯೋಜಿಸದೇ, ಯುವಕರ ಮೇಲೆ ಭರವಸೆ ಇಟ್ಟಿದ್ದು, ನೇರವಾಗಿ ಸಾಲ ಪಡೆದು ಉದ್ಯೋಗ ಆರಂಭಿಸಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

2015ರ ಏಪ್ರಿಲ್‌ 8ರಂದು ಆರಂಭವಾದ ಮುದ್ರಾ ಯೋಜನೆ ಅಡಿಯಲ್ಲಿ ಸಣ್ಣ ವ್ಯಾಪಾರ, ಉದ್ದಿಮೆ ಆರಂಭಿಸಲು 10 ಲಕ್ಷ ರೂವರೆಗೆ ಸಾಲ ನೀಡಲಾಗುತ್ತದೆ. 2017 ರಲ್ಲಿ ಮುದ್ರಾ ಯೋಜನೆಯಲ್ಲಿ ಕೇಂದ್ರ ಸರ್ಕಾರ 2.53 ಲಕ್ಷ ಕೋಟಿ ಸಾಲವನ್ನು ವಿತರಿಸಲಾಗಿತ್ತು. ಇದುವರೆಗೆ ಒಟ್ಟು 5.73 ಲಕ್ಷ ಕೋಟಿ ರೂ. ಸಾಲ ವಿತರಿಸಿದ್ದು, ಕೋಟ್ಯಂತರ ಯುವಕರಿಗೆ ಇದರಿಂದ ಉದ್ಯೋಗ ದೊರಕಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search